AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga News: ಇಂಡಿಯಾ ಬುಕ್ ಆಫ್ ರೆಕಾರ್ಡ್, ಕಲಾಂ ವರ್ಡ್ ರೆಕಾರ್ಡ್ ಮಾಡಿದ 2ನೇ ತರಗತಿ ಬಾಲಕ; ಯಾಕೆ ಗೊತ್ತಾ?

ಕೋಟೆನಾಡಿನ ಆ ಪೋರನಿಗಿನ್ನೂ ಏಳು ವರ್ಷವೂ ಪೂರ್ಣಗೊಂಡಿಲ್ಲ. ಆದ್ರೆ, ಆ ಹುಡುಗನ ಟ್ಯಾಲೆಂಟ್ ಕಂಡರೆ, ನೀವು ಹುಬ್ಬೇರಿಸುವುದು ಗ್ಯಾರಂಟಿ. 2ಸಾವಿರಕ್ಕೂ ಹೆಚ್ಚು ಪ್ರಶ್ನೆಗಳಿಗೆ ಆ ಜಾಣ ಬಾಲಕ ಫಟಾಫಟ್ ಎಂದು ಉತ್ತರ ಹೇಳುತ್ತಾನೆ. ಹೀಗಾಗಿ, ಚಿಕ್ಕ ವಯಸ್ಸಿನಲ್ಲೇ ಇಂಡಿಯಾ ಬುಕ್ ಆಫ್ ರೆಕಾರ್ಡ್, ಕಲಾಂ ವರ್ಡ್ ರೆಕಾರ್ಡ್ ದಾಖಲಿಸಿದ್ದಾನೆ. ಯಾರು ಆ ಬಾಲಕ ಅಂತೀರಾ? ಇಲ್ಲಿದೆ ನೋಡಿ.

Chitradurga News: ಇಂಡಿಯಾ ಬುಕ್ ಆಫ್ ರೆಕಾರ್ಡ್, ಕಲಾಂ ವರ್ಡ್ ರೆಕಾರ್ಡ್ ಮಾಡಿದ 2ನೇ ತರಗತಿ ಬಾಲಕ; ಯಾಕೆ ಗೊತ್ತಾ?
ಬಾಲಕ ಹೇಮಂತ್​
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Jul 23, 2023 | 12:29 PM

Share

ಚಿತ್ರದುರ್ಗ, ಜು.23: ರಾಮಾಯಣ(Ramayana), ಮಹಾಭಾರತ(Mahabharata)ದ ಕುರಿತ ಪ್ರಶ್ನೋತ್ತರಗಳಿಗೂ ಸೈ. ಸಾಮಾನ್ಯಜ್ಞಾನ (General knowledge )ದ ಪ್ರಶ್ನೋತ್ತರಗಳಿಗೂ ಜೈ. ಯಾವುದೇ ಪ್ರಶ್ನೆ ಕೇಳಿದ್ರೂ, ಫಟಾಫಟ್ ಉತ್ತರಿಸುವ ಜಾಣ ಬಾಲಕ. ಹೌದು, ಚಿತ್ರದುರ್ಗ (Chitradurga) ನಗರದ ಜೋಗಿಮಟ್ಟಿ ಬಡಾವಣೆಯ ನಿವಾಸಿ ಶೃತಿ, ವಿಜಯಕುಮಾರ್ ದಂಪತಿಯ ಪುತ್ರ ಹೇಮಂತ್ ಚಿಕ್ಕ ಎಂಬ ಬಾಲಕ ಚಿಕ್ಕವಯಸ್ಸಿನಲ್ಲೇ ತನ್ನ ಜಾಣ್ಮೆ ಮೂಲಕ ಗಮನಸೆಳೆಯುತ್ತಿದ್ದಾನೆ. ಒಂದು ಸಲ ಹೇಳಿದ್ರೆ, ಸಾಕು ಹೇಮಂತ್ ತನ್ನ ಸ್ಮೃತಿ ಪಟಲದಲ್ಲಿ ಮರೆಯದೇ ಸೇವ್ ಮಾಡಿಕೊಂಡು ಬಿಡುತ್ತಾನೆ. ಈಗ ರಾಮಾಯಣ, ಮಹಾಭಾರತಕ್ಕೆ ಸಂಬಂಧಿಸಿದ 1ಸಾವಿರ ಪ್ರಶ್ನೆ ಜೊತೆಗೆ ಸಾಮಾನ್ಯಜ್ಞಾನಕ್ಕೆ ಸಂಬಂಧಿಸಿದ 1ಸಾವಿರ ಪ್ರಶ್ನೆಗಳಿಗೆ ಉತ್ತರಿಸುತ್ತಾನೆ. ಹೀಗಾಗಿ, ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಕಲಾಂ ವರ್ಡ್ ರೆಕಾರ್ಡ್ ದಾಖಲಿಸಿದ್ದಾನೆಂದು ಹೇಮಂತ್ ತಾಯಿ ಶೃತಿಯವರು ಹೇಳುತ್ತಾರೆ.

ಇನ್ನು ಈ ಟ್ಯಾಲೆಂಟೆಡ್ ಬಾಯ್ ಹೇಮಂತ್ ಸದ್ಯ ಎರಡನೇ ತರಗತಿ ಓದುತ್ತಿದ್ದಾನೆ. ಆದ್ರೆ, ವಯಸ್ಸಿಗೆ ಮೀರಿದ ಬುದ್ಧಿವಂತಿಕೆ, ಮೆಮೊರಿ ಪವರ್ ಹೊಂದಿದ್ದಾನೆ. ರಾಮಾಯಣ ಮತ್ತು ಮಹಾಭಾರತದಲ್ಲಿ ಬರುವ ಪ್ರತಿ ಪಾತ್ರಗಳ ಹೆಸರನ್ನೂ ಹೇಳುತ್ತಾನಲ್ಲದೆ, ಪ್ರತಿ ಪ್ರಶ್ನೋತ್ತರಗಳಿಗೂ ಫಟಾಫಟ್ ಉತ್ತರ ನೀಡುತ್ತಾನೆ. ವಿವಿಧ ದೇಶ, ರಾಜಧಾನಿಗಳ ಹೆಸರು, ಗಾದೆಗಳು, ದೇಶದ ರಾಜಧಾನಿಗಳು, ಕರ್ನಾಟಕದ ಜಿಲ್ಲೆಗಳ ಹೆಸರು, ವಿಜ್ಞಾನಿಗಳು ಮತ್ತು ಸಂಶೋಧನೆಗಳು, ನದಿಗಳು, ಸಂವತ್ಸರಗಳು ಸೇರಿದಂತೆ ಅನೇಕ ಪ್ರಶ್ನೆಗಳಿಗೆ ಉತ್ತರಿಸುತ್ತಾನೆ.

ಇದನ್ನೂ ಓದಿ: India Book of Records ಗೆ ದಾಖಲು! ಧಾರವಾಡದ ಈ ಬಾಲಕಿಯ ಸಾಧನೆ ಏನು ಗೊತ್ತಾ?

ಇನ್ನು ಈ ಬಾಲಕ ಇಂಡಿಯನ್ ಆರ್ಮಿಗೆ ಸೇರಿ ಸೇವೆ ಸಲ್ಲಿಸುವ ಕನಸು ಹೊಂದಿದ್ದಾನೆ. ಮಗನ ಜಾಣ್ಮೆ, ಸಾಧನೆ ಕಂಡು ಪೋಷಕರು ದಿಲ್​ ಖುಷ್ ಆಗಿದ್ದಾರೆ. ಅಂತೆಯೇ ಮಗ ತನ್ನ ಕನಸಿನಂತೆ ಮುನ್ನಡೆದು ಸಾಧಿಸಲಿ ಎಂಬ ಆಶಯ ಹೊಂದಿದ್ದಾರೆ. ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ನಗರದ ಜೋಗಿಮಟ್ಟಿ ಬಡಾವಣೆಯ ನಿವಾಸಿ ಶೃತಿ ಮತ್ತು ವಿಜಯಕುಮಾರ್ ದಂಪತಿಯ ಪುತ್ರ ಹೇಮಂತ್ ವಿಶೇಷ ಟ್ಯಾಲೆಂಟ್ ಮೂಲಕ ಗಮನ ಸೆಳೆದಿದ್ದಾನೆ. ವಯಸ್ಸಿಗೆ ಮೀರಿದ ಪ್ರತಿಭೆ ಪ್ರದರ್ಶಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಕಲಾಂ ವರ್ಲ್ಡ್ ರೆಕಾರ್ಡ್ ಸೇರಿದ್ದು, ಹೆತ್ತವರಿಗೆ ಮಾತ್ರವಲ್ಲದೆ ದುರ್ಗಕ್ಕೆ ಕೀರ್ತಿ ತಂದಿದ್ದಾನೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Sun, 23 July 23

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು