AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಪೋಕ್ಸೋ ಕೇಸ್: ಮುರುಘಾ ಮಠದ ಸ್ವಾಮೀಜಿ 3 ದಿನ ಪೊಲೀಸ್​ ಕಸ್ಟಡಿಗೆ

ಮುರುಘಾಶ್ರೀ ವಿರುದ್ಧ 2ನೇ ಪೋಕ್ಸೋ ಪ್ರಕರಣ ಹಿನ್ನೆಲೆ ಮುರುಘಾ ಮಠದ ಸ್ವಾಮೀಜಿ 3 ದಿನ ಪೊಲೀಸ್​ ಕಸ್ಟಡಿಗೆ ನೀಡಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯದ ಆದೇಶ ಹೊರಡಿಸಿದೆ.

2ನೇ ಪೋಕ್ಸೋ ಕೇಸ್: ಮುರುಘಾ ಮಠದ ಸ್ವಾಮೀಜಿ 3 ದಿನ ಪೊಲೀಸ್​ ಕಸ್ಟಡಿಗೆ
ಮುರುಘಾಶ್ರೀ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 03, 2022 | 4:03 PM

Share

ಚಿತ್ರದುರ್ಗ: 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಯನ್ನು (Murugha Math Swamiji) 3 ದಿನ ಪೊಲೀಸ್​ ಕಸ್ಟಡಿಗೆ ನೀಡಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯದ ಆದೇಶ ಹೊರಡಿಸಿದೆ. ನವೆಂಬರ್ 5ರವರೆಗೆ ಮುರುಘಾ ಶರಣರು ಪೊಲೀಸ್ ಕಸ್ಟಡಿಯಲ್ಲಿರಲಿದ್ದು, ಚಿತ್ರದುರ್ಗದ ಡಿವೈಎಸ್​​ಪಿ ಕಚೇರಿಗೆ ಕರೆದೊಯ್ದು, ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ಮಾಡಲಿದ್ದಾರೆ. ಇನ್ನು ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರು ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ನಗರದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ನ 8ರವರೆಗೂ ವಿಸ್ತರಿಸಿದೆ. ಪ್ರಕರಣದ ಎ1 ಆರೋಪಿ ಡಾ. ಶಿವಮೂರ್ತಿ ಮುರುಘಾ ಶರಣರು, ಎ2 ಆರೋಪಿ ಮಹಿಳಾ ವಾರ್ಡನ್​ ಹಾಗೂ ಎ3 ಆರೋಪಿ ಪರಮಶಿವಯ್ಯ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳನ್ನು 8 ದಿನಗಳ ಪೊಲೀಸ್ ಕಸ್ಟಡಿಗೆ ಕೇಳಿದ್ದರು. ಈ ಕೋರಿಕೆಗೆ ಮುರುಘಾ ಶರಣರ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಪೊಲೀಸರಿಗೆ ಕೋರಿಕೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ಮಧ್ಯಾಹ್ನ 2.45ಕ್ಕೆ ಮುಂದೂಡಿತ್ತು. ಆರೋಪಿ ಮುರುಘಾ ಶರಣರು ನ್ಯಾಯಾಲದಯಲ್ಲಿಯೇ ವಿಚಾರಣೆ ಪೂರ್ಣಗೊಳ್ಳಲೆಂದು ಕಾದು ಕುಳಿತಿದ್ದಾರೆ.

ಶಿವಮೂರ್ತಿ ಮುರುಘಾ ಶರಣರ ಕಾಲಿಗೆ ಬಿದ್ದ ಭಕ್ತ

ನ್ಯಾಯಾಲಯದಿಂದ ಹಿಂದಿರುಗಲೆಂದು ಹೊರಗೆ ಬಂದ ಮುರುಘಾ ಶರಣರನ್ನು ಕೆಲ ಮುಖಂಡರು ಮಾತನಾಡಿಸಿದರು. ಈ ವೇಳೆ ಶರಣ ಸೇನೆ ಅಧ್ಯಕ್ಷ ಮರುಳಾರಾಧ್ಯ ಮುರುಘಾ ಶರಣರ ಕೈಗೆ ಚೀಟಿಯೊಂದನ್ನು ನೀಡಿದರು. ಮುಖಂಡರ ಜತೆ ಮಾತಾಡುವ ವೇಳೆ ಮುರುಘಾ ಶರಣರು ಮೆಲ್ಲಗೆ ನಸುನಕ್ಕಿದ್ದು ಎಲ್ಲರ ಗಮನ ಸೆಳೆಯಿತು. ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲೆಂದು ಕರೆತಂದ ವೇಳೆ ಭಕ್ತನೊಬ್ಬ ಅವರ ಕಾಲಿಗೆ ಅಡ್ಡಬಿದ್ದಿದ್ದು ಎಲ್ಲರ ಗಮನ ಸೆಳೆಯಿತು. ಚಿತ್ರದುರ್ಗ ಗ್ರಾಮಾಂತರ ಸಿಪಿಐ ಬಾಲಚಂದ್ರ ನಾಯ್ಕ್ ಮತ್ತು ತಂಡವು ನ್ಯಾಯಾಲಯದಲ್ಲಿ ಹಾಜರಿದ್ದು ಮುರುಘಾ ಶರಣರನ್ನು ವಶಕ್ಕೆ ಪಡೆಯಲು ಕೋರಿತು. ಗ್ರಾಮಾಂತರ ಠಾಣೆ ಪಿಎಸ್​ಐ ಶಿವಕುಮಾರ್ ನೇತೃತ್ವದಲ್ಲಿ ಸೆರೆಮನೆಯಿಂದ ನ್ಯಾಯಾಲಯದವರೆಗಿನ ಮಾರ್ಗಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

ಪ್ರಭಾರ ಪೀಠಾಧ್ಯಕ್ಷರಾಗಿ ಬಸವಪ್ರಭುಶ್ರೀ ನೇಮಕ

ಚಿತ್ರದುರ್ಗದ ಮುರುಘಾ ಮಠಕ್ಕೆ ಪ್ರಭಾರ ಪೀಠಾಧ್ಯಕ್ಷರ ನೇಮಕವಾಗಿದೆ. ಹಲವರ ವಿರೋಧದ ನಡುವೆಯೂ ಕಾನೂನು ಪ್ರಕ್ರಿಯೆ ಮೂಲಕ ಅಧಿಕೃತವಾಗಿ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಹೈಕೋರ್ಟ್ ಅನುಮತಿ ಪಡೆದು ಬಸವಪ್ರಭುಶ್ರೀ ನೇಮಕ ಕುರಿತು ಮುರುಘಾಮಠ ನಿನ್ನೆ (ಅಕ್ಟೋಬರ್ 16) ಅಧಿಕೃತ ಪ್ರಕಟಣೆ ಹೊರಡಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ಧಾರ್ಮಿಕ, ಸೇವಾ, ಪೂಜಾ ಕಾರ್ಯಗಳು ಮಠದ ಪರಂಪರೆ ಮುಂದುವರೆಸಿಕೊಂಡು ಹೋಗಲು ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:41 pm, Thu, 3 November 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್