AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗದಲ್ಲಿ ಎರಡು ಲಾರಿಗಳ ನಡುವೆ ಡಿಕ್ಕಿ: ಸಹ ಚಾಲಕ ಸೇರಿದಂತೆ 9 ಜಾನುವಾರು ಸಾವು

2 ಲಾರಿಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ, 9 ಜಾನುವಾರುಗಳು ಸಾವಪ್ಪಿರುವಂತಹ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೆಆರ್​ಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ. 

ದುರ್ಗದಲ್ಲಿ ಎರಡು ಲಾರಿಗಳ ನಡುವೆ ಡಿಕ್ಕಿ: ಸಹ ಚಾಲಕ ಸೇರಿದಂತೆ 9 ಜಾನುವಾರು ಸಾವು
2 ಲಾರಿಗಳ ನಡುವೆ ಅಪಘಾತ
ಗಂಗಾಧರ​ ಬ. ಸಾಬೋಜಿ
|

Updated on:Jun 23, 2023 | 1:21 PM

Share

ಚಿತ್ರದುರ್ಗ: 2 ಲಾರಿಗಳ ನಡುವೆ ಡಿಕ್ಕಿ (collision) ಹೊಡೆದ ಪರಿಣಾಮ ಓರ್ವ ವ್ಯಕ್ತಿ, 9 ಜಾನುವಾರುಗಳು ಸಾವಪ್ಪಿರುವಂತಹ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೆಆರ್​ಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ.  ಮಹರಾಷ್ಟ್ರದಿಂದ ಕೋಲಾರಕ್ಕೆ ಲಾರಿಯಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಮಹಾರಾಷ್ಟ್ರ ಮೂಲದ ಸಹ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೋರ್ವ ಚಾಲಕನಿಗೆ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

10 ಜಾನುವಾರುಗಳ ಪೈಕಿ 9 ಸಾವಪ್ಪಿದ್ದು, ಗಾಯಗೊಂಡಿರುವ 1 ಜಾನುವಾರನ್ನು ಚಳ್ಳಕೆರೆ ಬಳಿಯ ಗೋಶಾಲೆಗೆ ಶಿಫ್ಟ್ ಮಾಡಲಾಗಿದೆ. ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವು

ಚಿಲ್ಲರೆ ಕಾಸಿಗಾಗಿ ಜೋಡಿ ಕೊಲೆ: ಓರ್ವ ಬಂಧನ

ಮೈಸೂರು: ಚಿಲ್ಲರೆ ಕಾಸಿಗಾಗಿ ಜೋಡಿ ಕೊಲೆ ಮಾಡಿರುವಂತಹ ಘಟನೆ ನಗರದ ಹುಣಸೂರಿನಲ್ಲಿ ನಡೆದಿದೆ. ಕಬ್ಬಿಣದ ರಾಡ್​ನಿಂದ ಮಲಗಿದ್ದವರನ್ನ ಸೈಕೋ ವ್ಯಕ್ತಿ ಓರ್ವ ಹೊಡೆದು ಕೊಂದಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ಆಗಿದೆ. ಗಾಂಜಾ ನಶೆಯಲ್ಲಿ ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದ. ದಿನ ನಿತ್ಯ ಗಂಜಾ, ಸೆಲ್ಯೂಷನ್ ಸೇದಿ ಜನರಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರಿನಲ್ಲಿ ಅಪಾರ್ಟ್​ಮೆಂಟ್ ಮೇಲಿಂದ ಬಿದ್ದು ಮಹಿಳೆ ಆತ್ಮಹತ್ಯೆ

ಬೆಂಗಳೂರು: ನಗರದ ಅಪಾರ್ಟ್​ಮೆಂಟ್ ಮೇಲಿಂದ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಯಲಹಂಕ ಬಳಿಯ ನಾಗೇನಹಳ್ಳಿಯ ಅಪಾರ್ಟ್​​ಮೆಂಟ್​​ನಲ್ಲಿ ನಡೆದಿದೆ. ಉತ್ತರಪ್ರದೇಶದ ಲಖನೌ ಮೂಲದ ಅಮೃತಾ ಶರ್ಮಾ(27) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕುಟುಂಬದ ಜತೆ ಖಾಸಗಿ ಅಪಾರ್ಟ್​ಮೆಂಟ್​ನಲ್ಲಿ ಅಮೃತಾ ವಾಸವಿದ್ದರು.

ಇದನ್ನೂ ಓದಿ: ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಸುಲಿಗೆ ಆರೋಪ: ಕಾಂಗ್ರೆಸ್ ಮುಖಂಡ ಸೇರಿದಂತೆ 4 ಜನ ಅರೆಸ್ಟ್​​ ​

ನಿನ್ನೆ ರಾತ್ರಿ 10ರ ಸುಮಾರಿಗೆ ಅಪಾರ್ಟ್​ಮೆಂಟ್​ನಿಂದ ಅಮೃತ ಬಿದಿದ್ದಾರೆ. ಕೂಡಲೇ ಸ್ಥಳೀಯರು ಅಮೃತಾ ಶರ್ಮಾರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:02 pm, Fri, 23 June 23

ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ