Chitradurga News: 13 ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ; ಜಿಲ್ಲಾಸ್ಪತ್ರೆಗೆ ದಾಖಲು

ಚಳ್ಳಕೆರೆ ತಾಲೂಕಿನ ತೊರೆಕೋಲಮ್ಮನಹಳ್ಳಿಯ ಮಂಜುಳಾ-ಸಿದ್ದೇಶ್ ದಂಪತಿಯ 13ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ ಮಾಡಿದೆ. ಈ ವೇಳೆ ಮಗುವಿನ ಹಣೆ, ತಲೆ ಭಾಗದಲ್ಲಿ ಗಾಯವಾಗಿದ್ದು, ಗಾಬರಿಗೊಂಡ ತಾಯಿ ಜೋರಾಗಿ ಕೂಗಿದಾಗ ಕೋತಿ ಓಡಿ ಹೋಗಿದೆ.

Chitradurga News: 13 ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ; ಜಿಲ್ಲಾಸ್ಪತ್ರೆಗೆ ದಾಖಲು
ದಾಳಿಗೊಳಗಾದ ಶಿಶು
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 16, 2023 | 9:00 AM

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ(Challakere) ತಾಲೂಕಿನ ತೊರೆಕೋಲಮ್ಮನಹಳ್ಳಿಯ ಮಂಜುಳಾ-ಸಿದ್ದೇಶ್ ದಂಪತಿಯ 13ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ ಮಾಡಿದೆ. ಈ ವೇಳೆ ಮಗುವಿನ ಹಣೆ, ತಲೆ ಭಾಗದಲ್ಲಿ ಗಾಯವಾಗಿದ್ದು, ಗಾಬರಿಗೊಂಡ ತಾಯಿ ಜೋರಾಗಿ ಕೂಗಿದಾಗ ಕೋತಿ ಓಡಿ ಹೋಗಿದೆ. ಕೂಡಲೇ ಗಾಯಗೊಂಡ ಮಗುವನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಕಳೆದ ಒಂದು ವಾರದಿಂದ ಈ ಕೋತಿ ಗ್ರಾಮದಲ್ಲಿ ಕಾಣಿಸಿಕೊಂಡಿತ್ತು. ಇದೀಗ ಏಕಾಏಕಿ ಮನೆಗೆ ನುಗ್ಗಿ ಮಗುವಿನ ಮೇಲೆ ದಾಳಿ ಮಾಡಿದ್ದು, ಕೋತಿ ಸೆರೆಗೆ ತೊರೆಕೋಲಮ್ಮನಹಳ್ಳಿ ಗ್ರಾಮಸ್ಥರ ಆಗ್ರಹಿಸಿದ್ದಾರೆ.

ಬೇಕೆ ಬೇಕು, ನಮಗೆ ನಮ್ಮ ಟೀಚರ್ಸ್ ಬೇಕೆಂದು ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು

ತುಮಕೂರು: ಈಗಾಗಲೇ ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ಜೋರಾಗಿದೆ. ನಮ್ಮ ನೆಚ್ಚಿನ ಶಿಕ್ಷಕರನ್ನ ದಯವಿಟ್ಟು ವರ್ಗಾವಣೆ ಮಾಡಬೇಡಿ ಎಂದು ವಿದ್ಯಾರ್ಥಿಗಳು ಬೇಡಿಕೊಳ್ಳುತ್ತಿದ್ದಾರೆ. ಅದರಂತೆ ಜಿಲ್ಲೆಯ ಪಾವಗಡ ತಾಲ್ಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿಯೂ ಕೂಡ ವಿದ್ಯಾರ್ಥಿಗಳು ಕಂಬನಿ ಮಿಡಿದ ಘಟನೆ ನಡೆದಿದೆ. ಹೌದು ಪಾವಗಡದ ಚಿಕ್ಕನಾಯಕನಹಳ್ಳಿಯ ಸರ್ಕಾರಿ ಹಿರಿಯ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಮತ ಹಾಗೂ ಮಂಜುನಾಥ್ ಎಂಬ ಶಿಕ್ಷಕರನ್ನು ಬೇರೆ ಶಾಲೆಗೆ ವರ್ಗಾವಣೆಗೊಂಡ ಹಿನ್ನೆಲೆ ಪಾವಗಡದ ಬಿಇಒ ಕಚೇರಿ ಮುಂದೆ ನೆಚ್ಚಿನ ಶಿಕ್ಷಕರಿಗಾಗಿ ಮಕ್ಕಳು, ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೇರಿ ಪ್ರತಿಭಟನೆ ನಡೆಸಿ, ಕೂಡಲೇ ಇಬ್ಬರೂ ಶಿಕ್ಷಕರ ವರ್ಗವಣೆಯನ್ನು ರದ್ದು ಪಡಿಸುವಂತೆ ಬಿ.ಇ.ಒ.ಗೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us