ಹಾಯಾಗಿದ್ದ ದಂಪತಿ ಬಾಳಲ್ಲಿ ಬಿರುಗಾಳಿಯಂತೆ ಮೂರನೆಯವ ಎಂಟ್ರಿ ಕೊಟ್ಟ, ಗರ್ಭಿಣಿಯಾದ ಬಳಿಕ ನಡು ನೀರಲ್ಲಿ ಕೈಬಿಟ್ಟ

ಹೊಳಲ್ಕೆರೆ ಪಟ್ಟಣದಲ್ಲಿ ವಂಚಕನೋರ್ವ ಮಹಿಳೆಯನ್ನು ನಂಬಿಸಿ ಬದುಕನ್ನು ಬೀದಿಗೆ ತಂದಿರುವ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಯಾರ ನೆರವೂ ಇಲ್ಲದೆ ಒಬ್ಬಂಟಿಯಾಗಿ ಬದುಕುವ ದುಃಸ್ಥಿತಿ ಎದುರಾಗಿದೆ. ಹೀಗಾಗಿ, ಪೊಲೀಸ್ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಹಾಯಾಗಿದ್ದ ದಂಪತಿ ಬಾಳಲ್ಲಿ ಬಿರುಗಾಳಿಯಂತೆ ಮೂರನೆಯವ ಎಂಟ್ರಿ ಕೊಟ್ಟ, ಗರ್ಭಿಣಿಯಾದ ಬಳಿಕ ನಡು ನೀರಲ್ಲಿ ಕೈಬಿಟ್ಟ
ಹಾಯಾಗಿದ್ದ ದಂಪತಿ ಬಾಳಲ್ಲಿ ಬಿರುಗಾಳಿಯಂತೆ ಮೂರನೆಯವ ಎಂಟ್ರಿ ಕೊಟ್ಟ
Edited By: ಸಾಧು ಶ್ರೀನಾಥ್​

Updated on: Jan 05, 2024 | 10:55 AM

ಮದುವೆಯಾಗಿ ಹಾಯಾಗಿದ್ದವರ ಬದುಕಿನಲ್ಲಿ ಬಿರುಗಾಳಿಯಂತೆ ಮೂರನೇಯವನು ಎಂಟ್ರಿ ಆಗಿದ್ದನು. ನಾನೇ ಬಾಳು ಕೊಡುತ್ತೇನೆಂದು ಮಹಿಳೆಗೆ ನಂಬಿಸಿ ಜೋಡಿ (Couple) ಅಗಲು ಬಯಸಿದ್ದನು. ಆದ್ರೆ, ಗರ್ಭಿಣಿಯಾದ (Pregnant) ಬಳಿಕ ನಡು ನೀರಲ್ಲಿ ಕೈಬಿಟ್ಟು ಹೋಗಿದ್ದಾನೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಕುರಿತು ವರದಿ ಇಲ್ಲಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ. ನಂಬಿಸಿ ನಡು ನೀರಲ್ಲಿ ಕೈಬಿಟ್ಟವನ ವಿರುದ್ಧ ಹಿಡಿಶಾಪ. ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ. ಈ ದೃಶ್ಯಗಳು ಕಂಡು ಬಂದಿದ್ದು ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆಯಲ್ಲಿ. ಹೌದು, ಹೊಳಲ್ಕೆರೆ ಪಟ್ಟಣದ (Holalkere, Chitradurga) ಹೊಸದುರ್ಗ ರೋಡ್ ನಿವಾಸಿ ದಿವ್ಯ 2015ರಲ್ಲಿ ಚಿಕನ್ ಅಂಗಡಿ ವ್ಯಾಪಾರಿ ರಾಜು ಜತೆ ಮದುವೆಯಾಗಿದ್ದರು. ಎರಡು ವರ್ಷ ಕಾಲ ಚೆನ್ನಾಗಿಯೇ ಜೀವಿಸಿದ್ದರು.

ಆದ್ರೆ, 2016ರಲ್ಲಿ ವಸಂತ್ ನಾಯ್ಕ್ ಎಂಬ ಮೂರನೇ ವ್ಯಕ್ತಿ ಇಬ್ಬರ ನಡುವೆ ಎಂಟ್ರಿ ಆಗಿದ್ದನಂತೆ. ಮೋಹಕ್ಕೆ ಮರುಳಾದ ದಿವ್ಯ, ವಸಂತ್ ನಾಯ್ಕ್ ಬೆನ್ನು ಬಿದ್ದಿದ್ದಳು. ರಾಜುಗೆ ಡೈವರ್ಸ್ ಕೊಟ್ಟು ನನ್ನ ಜತೆ ಬಾಳ್ವೆ ಮಾಡುವಂತೆ ನಂಬಿಸಿದ್ದ ವಸಂತ್ 2019ರಲ್ಲಿ ಡೈವರ್ಸ್ ಕೊಡಿಸಿ ದಿವ್ಯಳ ಜತೆ ಅವಳಹಟ್ಟಿ ಗ್ರಾಮದಲ್ಲಿ ವಾಸವಾಗಿದ್ದನು. ಆದ್ರೆ, ದಿವ್ಯ ಗರ್ಭಿಣಿಯಾದ ವಿಷಯ ತಿಳಿಯುತ್ತಿದ್ದಂತೆ ಗರ್ಭಪಾತ ಮಾಡಿಸುವಂತೆ ಗಲಾಟೆ ಶುರು ಮಾಡಿದ್ದಾನೆ. ತನ್ನ ಮೊದಲ ಪತ್ನಿ ಜತೆ ಸೇರಿ ದೌರ್ಜನ್ಯ ನಡೆಸುತ್ತಿದ್ದಾನೆ. ಎರಡು ತಿಂಗಳಿಂದ ನನ್ನ ಬಿಟ್ಟು ಹೋಗಿದ್ದಾನೆ ಎಂದು ದಿವ್ಯ ಆರೋಪಿಸಿದ್ದಾಳೆ.

ಇನ್ನು ಹೊಳಲ್ಕೆರೆ ಠಾಣೆಗೆ ದಿವ್ಯ ದೂರು ನೀಡಿದ್ದಾರೆ. ಆದ್ರೆ, ಪೊಲೀಸ್ರು ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಆರೋಪಿ ತಲೆ ಮರೆಸಿಕೊಂಡಿದ್ದಾನೆಂದು ಹೇಳಲಾಗುತ್ತಿದೆ. ಆದ್ರೆ, ಆರೋಪಿ ವಸಂತ್ ನಾಯ್ಕ್ ಮಹಿಳೆಯ ಬದುಕಿನಲ್ಲಿ ಚೆಲ್ಲಾಟ ಆಡಿದ್ದಾನೆ. ಅಂತೆಯೇ ದಿವ್ಯ ಗರ್ಭಿಣಿಯಾದ ಸಂದರ್ಭದಲ್ಲಿ ಅನೇಕ ಸಲ ಭ್ರೂಣ ಹತ್ಯೆ ಮಾಡಿರುವ ಶಂಕೆ ಇದೆ. ಈ ಬಗ್ಗೆಯೂ ಪೊಲೀಸ್ರು ತನಿಖೆ ನಡೆಸಬೇಕು ಎಂಬುದು ಇವ್ರ ಆಗ್ರಹ.

Also Read: ಅನೈತಿಕ ಸಂಬಂಧ: ಪರಸ್ಪರ ಕಿತ್ತಾಟ, ಇಬ್ಬರು ಆಸ್ಪತ್ರೆ ಪಾಲು, ಮಚ್ಚಿನೇಟು ತಿಂದ ಯುವಕನ ಸ್ಥಿತಿ ಗಂಭೀರ

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ವಂಚಕನೋರ್ವ ಮಹಿಳೆಯನ್ನು ನಂಬಿಸಿ ಬದುಕನ್ನು ಬೀದಿಗೆ ತಂದಿರುವ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಯಾರ ನೆರವೂ ಇಲ್ಲದೆ ಒಬ್ಬಂಟಿಯಾಗಿ ಬದುಕುವ ದುಃಸ್ಥಿತಿ ಎದುರಾಗಿದೆ. ಹೀಗಾಗಿ, ಪೊಲೀಸ್ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಸವರಾಜ ಮುದನೂರ್, ಚಿತ್ರದುರ್ಗ

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us