AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಹಿತಿ ಬಿ.ಎಲ್.ವೇಣುಗೆ ಸಹಿಷ್ಣು ಹಿಂದೂ ಹೆಸರಿನಲ್ಲಿ ಎಚ್ಚರಿಕೆ ಪತ್ರ

ಸಾಹಿತಿ ಬಿ.ಎಲ್.ವೇಣುಗೆ ಸಹಿಷ್ಣು ಹಿಂದೂ ಹೆಸರಿನಲ್ಲಿ 2 ಪುಟಗಳ ಕೈಬರಹದ ಎಚ್ಚರಿಕೆ ಪತ್ರ ಬರೆಯಲಾಗಿದ್ದು, ನಗರದ ಕೆಳಗೋಟೆ ಬಡಾವಣೆಯ ಮನೆಗೆ ಪತ್ರ ಬಂದಿದೆ.

ಸಾಹಿತಿ ಬಿ.ಎಲ್.ವೇಣುಗೆ ಸಹಿಷ್ಣು ಹಿಂದೂ ಹೆಸರಿನಲ್ಲಿ ಎಚ್ಚರಿಕೆ ಪತ್ರ
ಸಾಹಿತಿ ಬಿ.ಎಲ್.ವೇಣು
TV9 Web
| Edited By: |

Updated on: Jun 11, 2022 | 9:01 AM

Share

ಚಿತ್ರದುರ್ಗ: ಸಾಹಿತಿ ಬಿ.ಎಲ್.ವೇಣುಗೆ ಸಹಿಷ್ಣು ಹಿಂದೂ ಹೆಸರಿನಲ್ಲಿ 2 ಪುಟಗಳ ಕೈಬರಹದ ಎಚ್ಚರಿಕೆ ಪತ್ರ ಬರೆಯಲಾಗಿದ್ದು, ನಗರದ ಕೆಳಗೋಟೆ ಬಡಾವಣೆಯ ಮನೆಗೆ ಪತ್ರ ಬಂದಿದೆ. ಎಸ್​ಡಿಪಿಐ, ಪಿಎಫ್​ಐ, ಸಿಎಫ್​ಐ ಜತೆ ಸೇರಿಕೊಂಡಿದ್ದೀರಿ. ದೇಶದ್ರೋಹಿಗಳ ಗುಂಪನ್ನು ಬೆಂಬಲಿಸುತ್ತಿದ್ದೀರಿ ಎಂದು ಎಚ್ಚರಿಕೆ ನೀಡಲಾಗಿದೆ. ಸಿದ್ದರಾಮಯ್ಯ, ಹೆಚ್.​ಡಿ. ಕುಮಾರಸ್ವಾಮಿ ನೆರವಾಗುತ್ತಿದ್ದೀರಿ ಎಂದು ಉಲ್ಲೇಖ ಮಾಡಲಾಗಿದೆ. ಸಾವರ್ಕರ್ ಬಗ್ಗೆ ಹಗುರವಾಗಿ ಮಾತಾಡಿದ್ದಕ್ಕೆ ಕ್ಷಮೆ ಕೇಳಬೇಕು. ಪಠ್ಯ ಪರಿಷ್ಕರಣೆ ಬಗ್ಗೆ ಸಾಹಿತಿ ಬಿ.ಎಲ್.ವೇಣು ಟೀಕೆಗೆ ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಮಕ್ಕಳ ಮನಸ್ಸಲ್ಲಿ ವಿಷಬೀಜ ಬಿತ್ತಬೇಡಿ ಎಂಬ ಹೇಳಿಕೆ‌ಗೆ ಕಿಡಿಕಾರಲಾಗಿದ್ದು, 61 ಜನ ದುಷ್ಟಕೂಟದ ಸಾಹಿತಿಗಳಿಗೆ ತಿಳಿ ಹೇಳಿ ಎಂದು ಸಲಹೆ ಕೂಡ ನೀಡಲಾಗಿದೆ. ಎರಡು ಪುಟಗಳ ಕೈಬರಹದ ಪತ್ರದಲ್ಲಿ ಯಾವುದೇ ವಿಳಾಸವಿಲ್ಲ. ಎಳೆ ಮಕ್ಕಳ ಮನಸಿನಲ್ಲಿ ವಿಷಬೀಜ ಬಿತ್ತಬೇಡಿ ಎಂಬ ಹೇಳಿಕೆ ನೀಡಿದ್ದೀರಿ. ಪಾಳೆಗಾರರ ಇತಿಹಾಸಕ್ಕೆ ಸಂಬಂಧಿಸಿದಂತೆ ಕಾದಂಬರಿ ರಚಿಸಿದ ನಿಮ್ಮ ಬಗ್ಗೆ ಅಪಾರ ಗೌರವವಿದೆ. ಆದರೆ, ನೀವು 61 ಸಾಹಿತಿಗಳ ದುಷ್ಟಕೂಟ ಸೇರಿಕೊಂಡಿದ್ದೀರಿ. ಎಡಪಂಥೀಯರು, ನಕ್ಸಲ್‌ವಾದಿಗಳು, ಭಯೋತ್ಪಾದಕರ ಜೊತೆ ಸೇರಿ ಎಸ್‌ಡಿಪಿಐನಂತಹ ದೇಶದ್ರೋಹಿ ಗುಂಪು ಬೆಂಬಲಿಸುತ್ತಿದ್ದೀರಿ ಎಂದು ಪತ್ರದಲ್ಲಿ ಉಲ್ಲೇಖವಿದೆ.

ಇದನ್ನೂ ಓದಿ: Baramulla: ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ

ನೀವೊಬ್ಬ ಹಿಂದೂವಾಗಿ ಹಿಂದೂಗಳ ವಿರುದ್ಧ ಮಾತನಾಡುವುದನ್ನು ಬಿಡಿಬೇಕು. ದೇಶದ್ರೋಹಿಗಳಿಗೆ ಮೊದಲು ಬುದ್ದಿವಾದ ಹೇಳಿ, ರಾಜಕೀಯ ನಾಯಕರಿಗೆ, ಮುಸ್ಲಿಂ ಧರ್ಮದ ಗುರುಗಳಿಗೆ ನೀತಿಪಾಠ ಹೇಳಿ. ಸಾವರ್ಕರ್ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಪತ್ರದಲ್ಲಿ ಸೂಚನೆ ನೀಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!