AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ACB Raid: ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಅಬಕಾರಿ ಡಿಸಿ ನಾಗಶಯನ

ಎಸಿಬಿ ಡಿವೈಎಸ್ಪಿ ಮಂಜುನಾಥ್, ಸಿಪಿಐ ಮಧುಸೂದನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಬಾರ್ ಮಾಲೀಕ, ಉದ್ಯಮಿ, ಮಾಜಿ‌ ಜಿ.ಪಂ‌ ಸದಸ್ಯ ಬಾಬುರೆಡ್ಡಿ ಬಳಿ 2ಲಕ್ಷ 28ಸಾವಿರ ರೂ. ಪಡೆಯುವ ವೇಳೆ ಅಬಕಾರಿ ಡಿಸಿ ನಾಗಶಯನ ಎಸಿಬಿ ಬಲೆಗೆ ಬಿದ್ದಿದ್ದಾರೆ.

ACB Raid: ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಅಬಕಾರಿ ಡಿಸಿ ನಾಗಶಯನ
ಎಸಿಬಿ ದಾಳಿ
TV9 Web
| Edited By: ಆಯೇಷಾ ಬಾನು|

Updated on:May 10, 2022 | 9:53 PM

Share

ಚಿತ್ರದುರ್ಗ: ಜಿಲ್ಲೆಯ ಅಬಕಾರಿ ಡಿಸಿ ಎಸಿಬಿ (ACB Raid) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನಗರದ ಜೆಸಿಆರ್ ಬಡಾವಣೆಯ ಕಚೇರಿಯಲ್ಲಿ ಅಬಕಾರಿ ಡಿಸಿ ನಾಗಶಯನ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅಬಕಾರಿ ಡಿಸಿ ವಾಹನ ಚಾಲಕ ಮೌಸಿನ್ ಖಾನ್ ಬಳಿ ಬಾರ್ ಲೈಸನ್ಸ್ ರಿನಿವಲ್ ಗಾಗಿ 3ಲಕ್ಷ 28 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 1ಲಕ್ಷ 28 ಸಾವಿರ ರೂಪಾಯಿ ಮುಂಗಡ ಪಡೆದಿದ್ದರು. ಬಾರ್ ಮಾಲೀಕ, ಉದ್ಯಮಿ, ಮಾಜಿ‌ ಜಿ.ಪಂ‌ ಸದಸ್ಯ ಬಾಬುರೆಡ್ಡಿ ಬಳಿ 2ಲಕ್ಷ 28ಸಾವಿರ ರೂ. ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಎಸಿಬಿ ಡಿವೈಎಸ್ಪಿ ಮಂಜುನಾಥ್, ಸಿಪಿಐ ಮಧುಸೂದನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಅಬಕಾರಿ ಡಿಸಿ ನಾಗಶಯನ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಅಬಕಾರಿ ಡಿಸಿ ನಾಗಶಯನ ಪತ್ನಿ ಕವಿತಾ ಐಪಿಎಸ್ ಅಧಿಕಾರಿಯಾಗಿದ್ದಾರೆ. ಅಲ್ಲದೆ ನಾಗಶಯನ ರಾಜಕೀಯ ವಲಯದಲ್ಲೂ ಭಾರೀ ಪ್ರಭಾವಿಗಳ ಹಿನ್ನಲೆ ಹೊಂದಿದ್ದಾರೆ.

ಎಸಿಬಿ ಬಲೆಗೆ ಬಿದ್ದ ಮೈಸೂರು ಪಾಲಿಕೆ ಅಧಿಕಾರಿ ಇನ್ನು ಮತ್ತೊಂದು ಕಡೆ ಮೈಸೂರು ಪಾಲಿಕೆ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ ಎಸ್​ಪಿ ವಿ.ಜೆ.ಸುಜೀತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ್ದು 3 ಸಾವಿರ ಲಂಚ ಪಡೆಯುವಾಗ ಪಾಲಿಕೆ ವಲಯ ಕಚೇರಿ 4ರ ಜೆಇ ಗುರುಸಿದ್ದಯ್ಯ ಎಸಿಬಿ ಬಲೆಗೆ ಬಿದ್ದಿದ್ದಾರೆ. ಗೋಕುಲಂ 2 ನೇ ಹಂತದ ಮನೆಗೆ ಪ್ಲಾನ್ ಮಂಜೂರು ಮಾಡಲು 6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗುರುಸಿದ್ದಯ್ಯ 3 ಸಾವಿರ ಪಡೆದಿದ್ದರು. ತಮ್ಮ ಕಚೇರಿಯಲ್ಲೇ 3 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಸಿಕ್ಕಿಬಿದ್ದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:19 pm, Tue, 10 May 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ