AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ACB Raid: ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಅಬಕಾರಿ ಡಿಸಿ ನಾಗಶಯನ

ಎಸಿಬಿ ಡಿವೈಎಸ್ಪಿ ಮಂಜುನಾಥ್, ಸಿಪಿಐ ಮಧುಸೂದನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಬಾರ್ ಮಾಲೀಕ, ಉದ್ಯಮಿ, ಮಾಜಿ‌ ಜಿ.ಪಂ‌ ಸದಸ್ಯ ಬಾಬುರೆಡ್ಡಿ ಬಳಿ 2ಲಕ್ಷ 28ಸಾವಿರ ರೂ. ಪಡೆಯುವ ವೇಳೆ ಅಬಕಾರಿ ಡಿಸಿ ನಾಗಶಯನ ಎಸಿಬಿ ಬಲೆಗೆ ಬಿದ್ದಿದ್ದಾರೆ.

ACB Raid: ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಅಬಕಾರಿ ಡಿಸಿ ನಾಗಶಯನ
ಎಸಿಬಿ ದಾಳಿ
Follow us
TV9 Web
| Updated By: ಆಯೇಷಾ ಬಾನು

Updated on:May 10, 2022 | 9:53 PM

ಚಿತ್ರದುರ್ಗ: ಜಿಲ್ಲೆಯ ಅಬಕಾರಿ ಡಿಸಿ ಎಸಿಬಿ (ACB Raid) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನಗರದ ಜೆಸಿಆರ್ ಬಡಾವಣೆಯ ಕಚೇರಿಯಲ್ಲಿ ಅಬಕಾರಿ ಡಿಸಿ ನಾಗಶಯನ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅಬಕಾರಿ ಡಿಸಿ ವಾಹನ ಚಾಲಕ ಮೌಸಿನ್ ಖಾನ್ ಬಳಿ ಬಾರ್ ಲೈಸನ್ಸ್ ರಿನಿವಲ್ ಗಾಗಿ 3ಲಕ್ಷ 28 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 1ಲಕ್ಷ 28 ಸಾವಿರ ರೂಪಾಯಿ ಮುಂಗಡ ಪಡೆದಿದ್ದರು. ಬಾರ್ ಮಾಲೀಕ, ಉದ್ಯಮಿ, ಮಾಜಿ‌ ಜಿ.ಪಂ‌ ಸದಸ್ಯ ಬಾಬುರೆಡ್ಡಿ ಬಳಿ 2ಲಕ್ಷ 28ಸಾವಿರ ರೂ. ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಎಸಿಬಿ ಡಿವೈಎಸ್ಪಿ ಮಂಜುನಾಥ್, ಸಿಪಿಐ ಮಧುಸೂದನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಅಬಕಾರಿ ಡಿಸಿ ನಾಗಶಯನ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಅಬಕಾರಿ ಡಿಸಿ ನಾಗಶಯನ ಪತ್ನಿ ಕವಿತಾ ಐಪಿಎಸ್ ಅಧಿಕಾರಿಯಾಗಿದ್ದಾರೆ. ಅಲ್ಲದೆ ನಾಗಶಯನ ರಾಜಕೀಯ ವಲಯದಲ್ಲೂ ಭಾರೀ ಪ್ರಭಾವಿಗಳ ಹಿನ್ನಲೆ ಹೊಂದಿದ್ದಾರೆ.

ಎಸಿಬಿ ಬಲೆಗೆ ಬಿದ್ದ ಮೈಸೂರು ಪಾಲಿಕೆ ಅಧಿಕಾರಿ ಇನ್ನು ಮತ್ತೊಂದು ಕಡೆ ಮೈಸೂರು ಪಾಲಿಕೆ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ ಎಸ್​ಪಿ ವಿ.ಜೆ.ಸುಜೀತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ್ದು 3 ಸಾವಿರ ಲಂಚ ಪಡೆಯುವಾಗ ಪಾಲಿಕೆ ವಲಯ ಕಚೇರಿ 4ರ ಜೆಇ ಗುರುಸಿದ್ದಯ್ಯ ಎಸಿಬಿ ಬಲೆಗೆ ಬಿದ್ದಿದ್ದಾರೆ. ಗೋಕುಲಂ 2 ನೇ ಹಂತದ ಮನೆಗೆ ಪ್ಲಾನ್ ಮಂಜೂರು ಮಾಡಲು 6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗುರುಸಿದ್ದಯ್ಯ 3 ಸಾವಿರ ಪಡೆದಿದ್ದರು. ತಮ್ಮ ಕಚೇರಿಯಲ್ಲೇ 3 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಸಿಕ್ಕಿಬಿದ್ದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:19 pm, Tue, 10 May 22

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್