AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಸರ್ಕಾರಿ ಬಸ್​ ಮತ್ತು ಲಾರಿ ಮಧ್ಯೆ ಅಪಘಾತ: ಐವರ ಸಾವು

ಒಸರ್ಕಾರಿ ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ನಿಧರಾಗಿದ್ದಾರೆ.

ಚಿತ್ರದುರ್ಗ: ಸರ್ಕಾರಿ ಬಸ್​ ಮತ್ತು ಲಾರಿ ಮಧ್ಯೆ ಅಪಘಾತ: ಐವರ ಸಾವು
ಅಪಘಾತ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Sep 11, 2023 | 8:17 AM

Share

ಚಿತ್ರದುರ್ಗ: ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ಸರ್ಕಾರಿ ಬಸ್ (Government Bus) ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್​ (KKRTC) ರಾಯಚೂರಿನಿಂದ (Raichur) ಬೆಂಗಳೂರಿಗೆ (Bengaluru) ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ನಿಧರಾಗಿದ್ದಾರೆ. ಮತ್ತೊಬ್ಬರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವುಗೀಡಾಗಿದ್ದಾರೆ. ಐವರಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರಾಯಚೂರಿನ ಮಾಬಮ್ಮ(35), ಮಸ್ಕಿ ಮೂಲದ ರಮೇಶ್(40)‌, ಬೆಂಗಳೂರು ಮೂಲದ ಪಾರ್ವತಮ್ಮ(45) ಸೇರಿ ಐವರು ನಿಧನರಾಗಿದ್ದಾರೆ.  ಇನ್ನು ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಬೆಂಗಳೂರು: ಅಪಘಾತಕ್ಕೀಡಾದ ಆಟೋ ಚಾಲಕ ಚಿಕಿತ್ಸೆ ಪಡೆದು ಸ್ಥಳಕ್ಕೆ ಬರುವಷ್ಟರಲ್ಲಿ ಆಟೋ ಮಾಯ, ಸಹಾಯ ಪಡೆದವರೇ ಕದ್ದರು

 ಧಗ- ಧಗನೇ ಹೊತ್ತಿ ಉರಿದ ಖಾಸಗಿ ಬಸ್

ವಿಜಯನಗರ: ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಟೈರ್ ಬ್ಲಾಸ್ಟ್ ಆಗಿ ಖಾಸಗಿ ಬಸ್ ಹೊತ್ತಿ ಉರಿದಿದೆ. ಅದೃಷ್ಟವಷಾತ್ ಪ್ರಯಾಣಿಕರು ಪ್ರಾಣಾಪಯಾದಿಂದ ಪಾರಾಗಿದ್ದಾರೆ. ಇಂದು ಬೆಳಗಿನ ಜಾವ ಖಾಸಗಿ ಬಸ್ ಬೆಂಗಳೂರಿನಿಂದ ಹಟ್ಟಿ ಚಿನ್ನದಗಣಿಯ ಕಡೆ ಹೊರಟಿತ್ತು.  ಈ ವೇಳೆ ಟೈರ್ ಬ್ಲಾಸ್ಟ್ ಆಗಿ ಬೆಂಕಿ ಹೊತ್ತುಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿ ಇದ್ದ 30 ಜನ ಪ್ರಯಾಣಿಕರನ್ನು ಕೆಳಗಿ ಇಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅವಘಡ ಸಂಬವಿಸಿಲ್ಲ. ಕಾನಾಹೊಸಳ್ಳಿ ಪಿಎಸ್ಐ ಎರಿಯಪ್ಪ ನೇತೃತ್ವದಲ್ಲಿ ಎರಡು ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸಲಾಗಿದೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 am, Mon, 11 September 23

Follow Us
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!