ಚಿತ್ರದುರ್ಗ: ಚಿಕ್ಕೆಬನ್ನೂರು ಬಳಿ ಭೀಕರ ಅಪಘಾತ, ನಾಲ್ವರ ಸಾವು

| Updated By: ವಿವೇಕ ಬಿರಾದಾರ

Updated on: Jun 15, 2024 | 11:05 AM

ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಬೆನ್ನೂರು ಬಳಿ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಲ್ಲಿದ್ದ ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ: ಚಿಕ್ಕೆಬನ್ನೂರು ಬಳಿ ಭೀಕರ ಅಪಘಾತ, ನಾಲ್ವರ ಸಾವು
ಅಪಘಾತದಲ್ಲಿ ಕಾರು ಜಖಂ
Follow us on

ಚಿತ್ರದುರ್ಗ, ಜೂನ್​ 15: ಚಿತ್ರದುರ್ಗ (Chitradurga) ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾರೆ. ಬೆಂಗಳೂರಿನ ತಣಸಂದ್ರ ಮೂಲದವರು ಪ್ರಜ್ವಲ್ ರೆಡ್ಡಿ(30), ಹರ್ಷಿತಾ(28), ನೋಹನ್ (2), ವಿಜಯರೆಡ್ಡಿ ಮೃತ ದುರ್ದೈವಿಗಳು. ಬೆಂಗಳೂರಿನಿಂದ ಗೋವಾಕ್ಕೆ ತೆರಳುವ ವೇಳೆ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರಿಗೆ  ಲಾರಿ ಡಿಕ್ಕಿ ಹೊಡೆದಿದೆ. ಕಾರಿಲ್ಲಿದ್ದ ಮೂವರು ಮೃತಪಟ್ಟಿದ್ದು, ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಸ್ತೆ ಅಪಘಾತ, ಬೈಕ್​ ಸವಾರ ಸಾವು

ಚಾಮರಾಜನಗರ: ರಸ್ತೆ ಅಪಘಾತದಲ್ಲಿ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಬಳಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ಗ್ರಾಮದ ಅರಣ್ (34) ಮೃತ ದುರ್ದೈವಿ. ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು,  ಬೈಕ್ ಸವಾರ ಸ್ಥಳದಲ್ಲೇ ಸಾವುಅರಣ್ ಗುಂಡ್ಲುಪೇಟೆಯಿಂದ ಮೈಸೂರಿನತ್ತ ತೆರಳುತ್ತಿದ್ದರು. ಲಾರಿ ತರಕಾರಿ ಲೋಡ್ ಹೊತ್ತುಕೊಂಡು ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿತ್ತು. ಓವರ್ ಟೇಕ್ ಮಾಡುವ ಬರದಲ್ಲಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಗುಂಡ್ಲುಪೇಟೆ ಪೊಲೀಸರು  ಸದ್ಯ ವಾಹನ ಜಪ್ತಿ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:29 am, Sat, 15 June 24