AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕ ಇಳಿಸಿಕೊಳ್ಳಿ, ಇದು ಟಫ್ ಜಾಬ್: ಚಿತ್ರದುರ್ಗ ಪೊಲೀಸರಿಗೆ ಎಡಿಜಿಪಿ ಅಲೋಕ್​ಕುಮಾರ್ ಫಿಟ್​ನೆಸ್ ಪಾಠ

ತೂಕ ಇಳಿಸಿಕೊಳ್ಳಿ. ಇದು ಟಫ್ ಜಾಬ್​ ಎಂದು ತಾಕೀತು ಮಾಡಿದರು. ಫುಡ್ ಕಂಟ್ರೋಲ್ ಮಾಡಿ, ವ್ಯಾಯಾಮ ಮಾಡಿ ಎಂದು ಸಲಹೆ ನೀಡಿದರು.

ತೂಕ ಇಳಿಸಿಕೊಳ್ಳಿ, ಇದು ಟಫ್ ಜಾಬ್: ಚಿತ್ರದುರ್ಗ ಪೊಲೀಸರಿಗೆ ಎಡಿಜಿಪಿ ಅಲೋಕ್​ಕುಮಾರ್ ಫಿಟ್​ನೆಸ್ ಪಾಠ
ಚಿತ್ರದುರ್ಗದಲ್ಲಿ ಪೊಲೀಸರಿಗೆ ಫಿಟ್​ನೆಸ್ ಪಾಠ ಮಾಡಿದ ಎಡಿಜಿಪಿ ಅಲೋಕ್​ಕುಮಾರ್
TV9 Web
| Edited By: |

Updated on: Nov 02, 2022 | 3:33 PM

Share

ಚಿತ್ರದುರ್ಗ: ನಗರದಲ್ಲಿ ಬುಧವಾರ ಕಾನೂನು ವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ತೂಕ ಇಳಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳುವಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಾಕೀತು ಮಾಡಿದರು. ಹಿರಿಯೂರು ಡಿವೈಎಸ್​ಪಿ ರೋಷನ್ ಜಮೀರ್, ಚಿತ್ರದುರ್ಗ ಡಿವೈಎಸ್​ಪಿ ಅನಿಲ್​, ಚಳ್ಳಕೆರೆ ಡಿವೈಎಸ್​ಪಿ ರಮೇಶ್, ಡಿಸಿಆರ್​ಬಿ ಡಿವೈಎಸ್​ಪಿ ಲೋಕೇಶ್​, ಎಸ್​ಪಿ ಕಚೇರಿ ಸಿಪಿಐ ನಾಗರಾಜ್​ ಅವರಗೆ ಫಿಟ್​ನೆಸ್ ಪಾಠ ಮಾಡಿದರು. ಹಿರಿಯೂರು ಸಿಪಿಐ ಆನಂದ್​ ಅವರಿಗೆ ಸ್ಲಿಮ್ ಆಗಿದ್ದೀರಿ ಎಂದರು. ಐಜಿಪಿ ತ್ಯಾಗರಾಜನ್, ಎಸ್​ಪಿ ಕೆ.ಪರಶುರಾಮ್​ ಲೈಟ್​ ವೇಯ್ಟ್​ ಇದ್ದಾರೆ. ಉಳಿದವರು ಹೆವಿ ವೇಯ್ಟ್ ಆಗಿದ್ದೀರಿ. ತೂಕ ಇಳಿಸಿಕೊಳ್ಳಿ. ಇದು ಟಫ್ ಜಾಬ್​ ಎಂದು ತಾಕೀತು ಮಾಡಿದರು. ಫುಡ್ ಕಂಟ್ರೋಲ್ ಮಾಡಿ, ವ್ಯಾಯಾಮ ಮಾಡಿ ಎಂದು ಸಲಹೆ ನೀಡಿದರು.

ಚಿತ್ರದುರ್ಗ ಎಸ್​ಪಿ ಕಚೇರಿಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದಾಗ ಪೊಲೀಸರು ಗೌರವ ವಂದನೆ ಸಲ್ಲಿಸಿ ಸ್ವಾಗತಿಸಿದರು. ಪೂರ್ವ ವಲಯ ಐಜಿಪಿ ತ್ಯಾಗರಾಜನ್, ಎಸ್​ಪಿ ಕೆ.ಪರಶುರಾಮ್ ಉಪಸ್ಥಿತರಿದ್ದರು.

ಚಿತ್ರದುರ್ಗ ಭೇಟಿಯ ವೇಳೆ ಜಿಲ್ಲೆಯಲ್ಲಿ ದಾಖಲಾಗಿರುವ ನಾಲ್ಕೂ ಪೋಕ್ಸೋ ಪ್ರಕರಣಗಳ ತನಿಖೆಯ ಪ್ರಗತಿಯ ಬಗ್ಗೆ ಅಲೋಕ್​ಕುಮಾರ್ ಪರಿಶೀಲಿಸಲಿದ್ದಾರೆ. ಮುರುಘಾ ಶರಣದ ವಿರುದ್ಧ ಈಗಾಗಲೇ 2 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಸಂಜೆ 5ಕ್ಕೆ ಸಾರ್ವಜನಿಕರಿಂದ ಅಲೋಕ್​ ಕುಮಾರ್ ಅವರು ಅಹವಾಲು ಸ್ವೀಕರಿಸಲಿದ್ದಾರೆ. ಸಂಜೆ 7ರ ನಂತರ ಚಿತ್ರದುರ್ಗ ಜಿಲ್ಲೆಯ ವಿವಿಧ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಇಂದು (ನ 2) ಅವರು ಚಿತ್ರದುರ್ಗದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ 8ಕ್ಕೆ ಪೊಲೀಸ್ ಪರೇಡ್​ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದ ನಂತರ ಜಿಲ್ಲಾ ಮೀಸಲು ಪಡೆಯ ಕೇಂದ್ರ ಕಚೇರಿಗೆ ಭೇಟಿ ನೀಡಿ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಚರ್ಚಿಸಲಿದ್ದಾರೆ. ನಂತರ ಶಿವಮೊಗ್ಗಕ್ಕೆ ತೆರಳಲಿದ್ದಾರೆ.

ಮುರುಘಾ ಶರಣರನ್ನು ಕಸ್ಟಡಿಗೆ ಕೇಳಲಿರುವ ಪೊಲೀಸರು

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ 2ನೇ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಶರಣರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ. ಈ ಸಂಬಂಧ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ಗೆ ಪೊಲೀಸರು ಮನವಿ ಸಲ್ಲಿಸಿದ್ದಾರೆ. ನ್ಯಾಯಾಲಯ ಸೂಚಿಸಿದರೆ ಮುರುಘಾ ಶ್ರೀಗಳನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಮುಂದುವರಿಸಲಿದ್ದಾರೆ.

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ