AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕ ಇಳಿಸಿಕೊಳ್ಳಿ, ಇದು ಟಫ್ ಜಾಬ್: ಚಿತ್ರದುರ್ಗ ಪೊಲೀಸರಿಗೆ ಎಡಿಜಿಪಿ ಅಲೋಕ್​ಕುಮಾರ್ ಫಿಟ್​ನೆಸ್ ಪಾಠ

ತೂಕ ಇಳಿಸಿಕೊಳ್ಳಿ. ಇದು ಟಫ್ ಜಾಬ್​ ಎಂದು ತಾಕೀತು ಮಾಡಿದರು. ಫುಡ್ ಕಂಟ್ರೋಲ್ ಮಾಡಿ, ವ್ಯಾಯಾಮ ಮಾಡಿ ಎಂದು ಸಲಹೆ ನೀಡಿದರು.

ತೂಕ ಇಳಿಸಿಕೊಳ್ಳಿ, ಇದು ಟಫ್ ಜಾಬ್: ಚಿತ್ರದುರ್ಗ ಪೊಲೀಸರಿಗೆ ಎಡಿಜಿಪಿ ಅಲೋಕ್​ಕುಮಾರ್ ಫಿಟ್​ನೆಸ್ ಪಾಠ
ಚಿತ್ರದುರ್ಗದಲ್ಲಿ ಪೊಲೀಸರಿಗೆ ಫಿಟ್​ನೆಸ್ ಪಾಠ ಮಾಡಿದ ಎಡಿಜಿಪಿ ಅಲೋಕ್​ಕುಮಾರ್
TV9 Web
| Edited By: |

Updated on: Nov 02, 2022 | 3:33 PM

Share

ಚಿತ್ರದುರ್ಗ: ನಗರದಲ್ಲಿ ಬುಧವಾರ ಕಾನೂನು ವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ತೂಕ ಇಳಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳುವಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಾಕೀತು ಮಾಡಿದರು. ಹಿರಿಯೂರು ಡಿವೈಎಸ್​ಪಿ ರೋಷನ್ ಜಮೀರ್, ಚಿತ್ರದುರ್ಗ ಡಿವೈಎಸ್​ಪಿ ಅನಿಲ್​, ಚಳ್ಳಕೆರೆ ಡಿವೈಎಸ್​ಪಿ ರಮೇಶ್, ಡಿಸಿಆರ್​ಬಿ ಡಿವೈಎಸ್​ಪಿ ಲೋಕೇಶ್​, ಎಸ್​ಪಿ ಕಚೇರಿ ಸಿಪಿಐ ನಾಗರಾಜ್​ ಅವರಗೆ ಫಿಟ್​ನೆಸ್ ಪಾಠ ಮಾಡಿದರು. ಹಿರಿಯೂರು ಸಿಪಿಐ ಆನಂದ್​ ಅವರಿಗೆ ಸ್ಲಿಮ್ ಆಗಿದ್ದೀರಿ ಎಂದರು. ಐಜಿಪಿ ತ್ಯಾಗರಾಜನ್, ಎಸ್​ಪಿ ಕೆ.ಪರಶುರಾಮ್​ ಲೈಟ್​ ವೇಯ್ಟ್​ ಇದ್ದಾರೆ. ಉಳಿದವರು ಹೆವಿ ವೇಯ್ಟ್ ಆಗಿದ್ದೀರಿ. ತೂಕ ಇಳಿಸಿಕೊಳ್ಳಿ. ಇದು ಟಫ್ ಜಾಬ್​ ಎಂದು ತಾಕೀತು ಮಾಡಿದರು. ಫುಡ್ ಕಂಟ್ರೋಲ್ ಮಾಡಿ, ವ್ಯಾಯಾಮ ಮಾಡಿ ಎಂದು ಸಲಹೆ ನೀಡಿದರು.

ಚಿತ್ರದುರ್ಗ ಎಸ್​ಪಿ ಕಚೇರಿಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದಾಗ ಪೊಲೀಸರು ಗೌರವ ವಂದನೆ ಸಲ್ಲಿಸಿ ಸ್ವಾಗತಿಸಿದರು. ಪೂರ್ವ ವಲಯ ಐಜಿಪಿ ತ್ಯಾಗರಾಜನ್, ಎಸ್​ಪಿ ಕೆ.ಪರಶುರಾಮ್ ಉಪಸ್ಥಿತರಿದ್ದರು.

ಚಿತ್ರದುರ್ಗ ಭೇಟಿಯ ವೇಳೆ ಜಿಲ್ಲೆಯಲ್ಲಿ ದಾಖಲಾಗಿರುವ ನಾಲ್ಕೂ ಪೋಕ್ಸೋ ಪ್ರಕರಣಗಳ ತನಿಖೆಯ ಪ್ರಗತಿಯ ಬಗ್ಗೆ ಅಲೋಕ್​ಕುಮಾರ್ ಪರಿಶೀಲಿಸಲಿದ್ದಾರೆ. ಮುರುಘಾ ಶರಣದ ವಿರುದ್ಧ ಈಗಾಗಲೇ 2 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಸಂಜೆ 5ಕ್ಕೆ ಸಾರ್ವಜನಿಕರಿಂದ ಅಲೋಕ್​ ಕುಮಾರ್ ಅವರು ಅಹವಾಲು ಸ್ವೀಕರಿಸಲಿದ್ದಾರೆ. ಸಂಜೆ 7ರ ನಂತರ ಚಿತ್ರದುರ್ಗ ಜಿಲ್ಲೆಯ ವಿವಿಧ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಇಂದು (ನ 2) ಅವರು ಚಿತ್ರದುರ್ಗದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ 8ಕ್ಕೆ ಪೊಲೀಸ್ ಪರೇಡ್​ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದ ನಂತರ ಜಿಲ್ಲಾ ಮೀಸಲು ಪಡೆಯ ಕೇಂದ್ರ ಕಚೇರಿಗೆ ಭೇಟಿ ನೀಡಿ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಚರ್ಚಿಸಲಿದ್ದಾರೆ. ನಂತರ ಶಿವಮೊಗ್ಗಕ್ಕೆ ತೆರಳಲಿದ್ದಾರೆ.

ಮುರುಘಾ ಶರಣರನ್ನು ಕಸ್ಟಡಿಗೆ ಕೇಳಲಿರುವ ಪೊಲೀಸರು

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ 2ನೇ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಶರಣರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ. ಈ ಸಂಬಂಧ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ಗೆ ಪೊಲೀಸರು ಮನವಿ ಸಲ್ಲಿಸಿದ್ದಾರೆ. ನ್ಯಾಯಾಲಯ ಸೂಚಿಸಿದರೆ ಮುರುಘಾ ಶ್ರೀಗಳನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಮುಂದುವರಿಸಲಿದ್ದಾರೆ.

Follow Us
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ