AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಅರೆಬೆತ್ತಲೆ ಸ್ಥಿತಿಯಲ್ಲೇ ರೌಡಿಶೀಟರ್​ನನ್ನು ಪೊಲೀಸ್​ ಠಾಣೆಗೆ ಕರೆತಂದ ಆರೋಪ; ವಿಡಿಯೋ ವೈರಲ್

ಠಾಣೆಗೆ ಬರುವಂತೆ ಹೆಡ್ ಕಾನ್ಸ್​ಟೇಬಲ್ ಚಂದ್ರಾನಾಯ್ಕ್ ಸೂಚಿಸಿದ್ದಾರೆ. ಈ ವೇಳೆ ಅರೆಬೆತ್ತಲೆ ಸ್ಥಿತಿಯಲ್ಲೇ ಕೈಲಿ ಜಗ್ ಹಿಡಿದುಕೊಂಡು ಪೊಲೀಸರ ಜತೆ ಠಾಣೆಗೆ ಆಗಮಿಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚಿತ್ರದುರ್ಗ: ಅರೆಬೆತ್ತಲೆ ಸ್ಥಿತಿಯಲ್ಲೇ ರೌಡಿಶೀಟರ್​ನನ್ನು ಪೊಲೀಸ್​ ಠಾಣೆಗೆ ಕರೆತಂದ ಆರೋಪ; ವಿಡಿಯೋ ವೈರಲ್
ಹೆಡ್ ಕಾನ್ಸ್​ಟೇಬಲ್​ ಚಂದ್ರಾನಾಯ್ಕ್ ಮತ್ತು ವೇಣುಗೋಪಾಲ್​
TV9 Web
| Edited By: |

Updated on:Dec 20, 2021 | 11:39 AM

Share

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ರೌಡಿಶೀಟರ್ (Rowdy Sheeter) ವೇಣುಗೋಪಾಲ್ ಎಂಬ ವ್ಯಕ್ತಿಯನ್ನು ಅರೆಬೆತ್ತಲೆ ಸ್ಥಿತಿಯಲ್ಲೇ ಪೊಲೀಸರು ಠಾಣೆಗೆ ಕರೆತಂದ ಘಟನೆ ನಡೆದಿದೆ. ಪಕ್ಕದ ಮನೆಯವರಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣುಗೋಪಾಲ್ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿತ್ತು. ಹೀಗಾಗಿ ಹೆಡ್ ಕಾನ್ಸ್​ಟೇಬಲ್​ ಚಂದ್ರಾನಾಯ್ಕ್ ಆರೋಪಿ ವೇಣುಗೋಪಾಲ್ ಬಂಧನಕ್ಕೆ ತೆರಳಿದ್ದಾರೆ. ಈ ವೇಳೆ ಅರೆಬೆತ್ತಲೆ ಸ್ಥಿತಿಯಲ್ಲೇ ವೇಣುಗೋಪಾಲ್​ನನ್ನು ಠಾಣೆಗೆ ಕರೆತಂದಿದ್ದಾರೆ.

ಪೊಲೀಸರು ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಸ್ನಾನಕ್ಕೆ ಹೋಗಿದ್ದ ವೇಣುಗೋಪಾಲ್, ಅದೇ ಅರೆಬೆತ್ತಲೆ ಸ್ಥಿತಿಯಲ್ಲಿ ಹೊರ ಬಂದಿದ್ದಾರೆ. ಠಾಣೆಗೆ ಬರುವಂತೆ ಹೆಡ್ ಕಾನ್ಸ್​ಟೇಬಲ್ ಚಂದ್ರಾನಾಯ್ಕ್ ಸೂಚಿಸಿದ್ದಾರೆ. ಈ ವೇಳೆ ಅದೇ ಅರೆಬೆತ್ತಲೆ ಸ್ಥಿತಿಯಲ್ಲೇ ಕೈಲಿ ಜಗ್ ಹಿಡಿದುಕೊಂಡು ಪೊಲೀಸರ ಜತೆ ಠಾಣೆಗೆ ಆಗಮಿಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರ್​ಎಸ್​ಎಸ್​ ಕಾರ್ಯಕರ್ತ ವೇಣುಗೋಪಾಲ್ ಮೇಲೆ ಪೊಲೀಸರು ಅನಾಗರಿಕ ವರ್ತನೆ ತೋರಿದ್ದಾರೆಂದು ಆರೋಪಿಸಿ ಕೆಲವರು ಕಿಡಿ ಕಾರಿದ್ದಾರೆ. ಇನ್ನೂ ಕೆಲವರು ರೌಡಿಶೀಟರ್ ಆಗಿರುವ ವೇಣುಗೋಪಾಲ್ ದುರುದ್ದೇಶದಿಂದ ಅರೆಬೆತ್ತಲೆಯಾಗಿ ಬಂದು ಹುಚ್ಚಾಟ ಮೆರೆದಿದ್ದಾನೆ. ಆ ಮೂಲಕ ಕರ್ತವ್ಯ ನಿರತ ಪೊಲೀಸರ ಮನೋಸ್ಥೈರ್ಯ ಕುಗ್ಗಿಸಲು ಯತ್ನಿಸಿದ್ದಾನೆಂದು ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದಾರೆ.

ಕಳೆದ ಶನಿವಾರ ಈ ಘಟನೆ ನಡೆದಿದ್ದು, ಸದ್ಯ ಜಾಮೀನು ಪಡೆದು ಆರೋಪಿ ವೇಣುಗೋಪಾಲ ಬಿಡುಗಡೆಗೊಂಡಿದ್ದಾರೆ. ಪಿಎಸ್​ಐ ಮಹೇಶ ಹೊಸಪೇಟೆ, ಹೆಡ್ ಕಾನ್ಸ್​ಟೇಬಲ್ ಚಂದ್ರಾನಾಯ್ಕ್ ದುರುದ್ದೇಶದಿಂದ ನನ್ನನ್ನು ಅರೆಬೆತ್ತಲೆ ಮೆರವಣಿಗೆ ಮಾಡಿದ್ದಾರೆ. ಸ್ನಾನ ಮಾಡಿ ಬರುತ್ತೇನೆಂದರೂ ಬಿಡದೆ ಪಿಎಸ್​ಐ ಸೂಚನೆ ಮೇರೆಗೆ ಪೊಲೀಸ್ ಕಾನ್ಸ್​ಟೇಬಲ್ ನನ್ನನ್ನು ಅರೆಬೆತ್ತಲೆಯಾಗಿಯೇ ಠಾಣೆಗೆ ಕರೆದೊಯ್ದಿದ್ದು, ಅನಾಗರಿಕ ವರ್ತನೆ ತೋರಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡುತ್ತೇನೆ ಎಂದು ವೇಣುಗೋಪಾಲ್ ಹೇಳಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಚಲಿಸುವ ರೈಲಿನಿಂದ ಪ್ಲಾಟ್​ಫಾರಂನಲ್ಲಿ ಇಳಿಯುವ ಯತ್ನ, ಬಿಬಿಎಂಪಿ ಎಂಜಿನಿಯರ್​ ಸ್ಥಳದಲ್ಲೇ ಸಾವು

ಶಾಲೆ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕುಡಿದ ಮತ್ತಿನಲ್ಲಿ ಸ್ನೇಹಿತರೇ ಕೊಲೆ ಮಾಡಿರುವ ಶಂಕೆ

Published On - 11:37 am, Mon, 20 December 21

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು