AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರದ ಆರೋಪ; ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ 2 ಗುಂಪಿನ ಮಧ್ಯೆ ವಾಗ್ವಾದ

ಮತಾಂತರ ನಡೆಸುತ್ತಿದ್ದಾರೆ ಎಂದು 2 ಗುಂಪಿನ ಮಧ್ಯೆ ವಾಗ್ವಾದವಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಚಿತ್ರದುರ್ಗದ ಬಲ್ಲಾಳ‌ಸಮುದ್ರದಲ್ಲಿ ಮತಾಂತರ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕರೊಬ್ಬರು 2 ದಿನದ ಹಿಂದೆ ಧನಿ ಎತ್ತಿದ್ದರು.

ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರದ ಆರೋಪ; ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ 2 ಗುಂಪಿನ ಮಧ್ಯೆ ವಾಗ್ವಾದ
ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ ಆಕ್ರೋಶ
TV9 Web
| Edited By: |

Updated on:Oct 04, 2021 | 7:59 AM

Share

ಚಿತ್ರದುರ್ಗ: ಇತ್ತೀಚೆಗೆ ರಾಜ್ಯದ ಹಲವೆಡೆ ಮತಾಂತರದ ಆರೋಪ ಕೇಳಿಬರುತ್ತಿದೆ. ಅಂತೆಯೇ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಲವಂತವಾಗಿ ಮತಾಂತರ ಮಾಡಿ‌ ದೇಶದ್ರೋಹ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಸ್ಥಳೀಯ ಯುವಕರು, ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತಾಂತರ ನಡೆಸುತ್ತಿದ್ದಾರೆ ಎಂದು 2 ಗುಂಪಿನ ಮಧ್ಯೆ ವಾಗ್ವಾದವಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಚಿತ್ರದುರ್ಗದ ಬಲ್ಲಾಳ‌ಸಮುದ್ರದಲ್ಲಿ ಮತಾಂತರ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕರೊಬ್ಬರು 2 ದಿನದ ಹಿಂದೆ ಧನಿ ಎತ್ತಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ವಿರೋಧ ವ್ಯಕ್ತಪಡಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿ ದೂರಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅಕ್ಟೋಬರ್ 1  ರಂದು ಚಿತ್ರದುರ್ಗದಲ್ಲಿಯೂ ಮತಾಂತರದ ಆರೋಪಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಇದಕ್ಕೆ ಮುಖ್ಯ ಕಾರಣ ಚಿತ್ರದುರ್ಗ ಜಿಲ್ಲೆಯ ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರ ನಡೆದಿರುವ ಬಗ್ಗೆ ಶಾಸಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಆರೋಪಿಸಿರುವುದೇ ಆಗಿದೆ.

ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಮತಾಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸುಡುಗಾಡು ಸಿದ್ಧ ಸಮುದಾಯದ ಜನರನ್ನು ಮತಾಂತರ ಮಾಡಲಾಗುತ್ತಿದೆ. ಕ್ರಿಶ್ಚಿಯನ್ ಧರ್ಮಕ್ಕೆ 40-50 ಕುಟುಂಬಗಳನ್ನು ಮತಾಂತರ ಮಾಡಲಾಗಿದೆ. ಜನರಿಂದ ಈ ಬಗ್ಗೆ ದೂರು ಕೂಡ ಬಂದಿದೆ ಎಂದು ಶಾಸಕ ಗೂಳಿಹಟ್ಟಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ಚಿತ್ರದುರ್ಗ: ಮತಾಂತರ ಆರೋಪ; ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿ ದೂರಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್

ಮತಾಂತರಕ್ಕೆ ಯತ್ನಿಸಿದ್ದ ನಾಲ್ವರ ವಿರುದ್ಧ ಎಫ್ಐಆರ್ ಪ್ರಕರಣ; ಪ್ರತಿದೂರು ನೀಡಲು ಮುಂದಾದ ಕ್ರೈಸ್ತ ಪಾದ್ರಿಗಳು

Published On - 7:54 am, Mon, 4 October 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ