ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರದ ಆರೋಪ; ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ 2 ಗುಂಪಿನ ಮಧ್ಯೆ ವಾಗ್ವಾದ

| Updated By: preethi shettigar

Updated on: Oct 04, 2021 | 7:59 AM

ಮತಾಂತರ ನಡೆಸುತ್ತಿದ್ದಾರೆ ಎಂದು 2 ಗುಂಪಿನ ಮಧ್ಯೆ ವಾಗ್ವಾದವಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಚಿತ್ರದುರ್ಗದ ಬಲ್ಲಾಳ‌ಸಮುದ್ರದಲ್ಲಿ ಮತಾಂತರ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕರೊಬ್ಬರು 2 ದಿನದ ಹಿಂದೆ ಧನಿ ಎತ್ತಿದ್ದರು.

ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರದ ಆರೋಪ; ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ 2 ಗುಂಪಿನ ಮಧ್ಯೆ ವಾಗ್ವಾದ
ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ ಆಕ್ರೋಶ
Follow us on

ಚಿತ್ರದುರ್ಗ: ಇತ್ತೀಚೆಗೆ ರಾಜ್ಯದ ಹಲವೆಡೆ ಮತಾಂತರದ ಆರೋಪ ಕೇಳಿಬರುತ್ತಿದೆ. ಅಂತೆಯೇ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಲವಂತವಾಗಿ ಮತಾಂತರ ಮಾಡಿ‌ ದೇಶದ್ರೋಹ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಸ್ಥಳೀಯ ಯುವಕರು, ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತಾಂತರ ನಡೆಸುತ್ತಿದ್ದಾರೆ ಎಂದು 2 ಗುಂಪಿನ ಮಧ್ಯೆ ವಾಗ್ವಾದವಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಚಿತ್ರದುರ್ಗದ ಬಲ್ಲಾಳ‌ಸಮುದ್ರದಲ್ಲಿ ಮತಾಂತರ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕರೊಬ್ಬರು 2 ದಿನದ ಹಿಂದೆ ಧನಿ ಎತ್ತಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ವಿರೋಧ ವ್ಯಕ್ತಪಡಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿ ದೂರಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್
ಅಕ್ಟೋಬರ್ 1  ರಂದು ಚಿತ್ರದುರ್ಗದಲ್ಲಿಯೂ ಮತಾಂತರದ ಆರೋಪಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಇದಕ್ಕೆ ಮುಖ್ಯ ಕಾರಣ ಚಿತ್ರದುರ್ಗ ಜಿಲ್ಲೆಯ ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರ ನಡೆದಿರುವ ಬಗ್ಗೆ ಶಾಸಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಆರೋಪಿಸಿರುವುದೇ ಆಗಿದೆ.

ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಮತಾಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸುಡುಗಾಡು ಸಿದ್ಧ ಸಮುದಾಯದ ಜನರನ್ನು ಮತಾಂತರ ಮಾಡಲಾಗುತ್ತಿದೆ. ಕ್ರಿಶ್ಚಿಯನ್ ಧರ್ಮಕ್ಕೆ 40-50 ಕುಟುಂಬಗಳನ್ನು ಮತಾಂತರ ಮಾಡಲಾಗಿದೆ. ಜನರಿಂದ ಈ ಬಗ್ಗೆ ದೂರು ಕೂಡ ಬಂದಿದೆ ಎಂದು ಶಾಸಕ ಗೂಳಿಹಟ್ಟಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ:
ಚಿತ್ರದುರ್ಗ: ಮತಾಂತರ ಆರೋಪ; ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿ ದೂರಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್

ಮತಾಂತರಕ್ಕೆ ಯತ್ನಿಸಿದ್ದ ನಾಲ್ವರ ವಿರುದ್ಧ ಎಫ್ಐಆರ್ ಪ್ರಕರಣ; ಪ್ರತಿದೂರು ನೀಡಲು ಮುಂದಾದ ಕ್ರೈಸ್ತ ಪಾದ್ರಿಗಳು

Published On - 7:54 am, Mon, 4 October 21