AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ದ್ವಿಗುಣಗೊಳಿಸಿ ಕೊಡುವುದಾಗಿ ವಂಚನೆ! ಚಿತ್ರದುರ್ಗ ನಗರಸಭೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲು

ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್, ಮೂರ್ತಿ, ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ. ಚಂದ್ರಶೇಖರ್ ಹಲವು ವಂಚನೆ ಕೇಸ್​ನಲ್ಲಿ ಭಾಗಿಯಾಗಿದ್ದಾರಂತೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಣ ದ್ವಿಗುಣಗೊಳಿಸಿ ಕೊಡುವುದಾಗಿ ವಂಚನೆ! ಚಿತ್ರದುರ್ಗ ನಗರಸಭೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲು
ನಗರಸಭೆ ಜೆಡಿಎಸ್ ಸದಸ್ಯ ಚಂದ್ರಶೇಖರ್
TV9 Web
| Edited By: |

Updated on:Dec 07, 2021 | 10:56 AM

Share

ಚಿತ್ರದುರ್ಗ: ಹಣ ದ್ವಿಗುಣಗೊಳಿಸಿ ಕೊಡುವುದಾಗಿ ಆಮಿಷವೊಡ್ಡಿ ವಂಚನೆ ಮಾಡಿದ ಆರೋಪದಡಿಯಲ್ಲಿ ಚಿತ್ರದುರ್ಗ ನಗರಸಭೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಗರಸಭೆ ಜೆಡಿಎಸ್ ಸದಸ್ಯ ಚಂದ್ರಶೇಖರ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. 6 ಲಕ್ಷ ಹಣ ಪಡೆದು 18 ಲಕ್ಷ ನೀಡುವುದಾಗಿ ನಂಬಿಸಿ ವಂಚನೆ ಮಾಡಿದ್ದಾರಂತೆ. ದೊಡ್ಡಬಳ್ಳಾಪುರದ ನಾಗರಾಜ್ಗೆ ನಗರಸಭೆ ಜೆಡಿಎಸ್ ಸದಸ್ಯ ಚಂದ್ರಶೇಖರ್ 18 ಲಕ್ಷ ಇದೆ ಎಂದು ಹೇಳಿ ಬ್ಯಾಗ್ ನೀಡಿ ವಂಚನೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್, ಮೂರ್ತಿ, ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ. ಚಂದ್ರಶೇಖರ್ ಹಲವು ವಂಚನೆ ಕೇಸ್​ನಲ್ಲಿ ಭಾಗಿಯಾಗಿದ್ದಾರಂತೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆನ್​ಲೈನ್ ಮೂಲಕ ಲಕ್ಷಾಂತರ ರೂಪಾಯಿ ವಂಚನೆ ಆನ್​ಲೈನ್ ಮೂಲಕ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ವಿಜಯಪುರ ಸಿಇಎನ್ ಪೊಲೀಸರು ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ. ಆಂಥೋನಿ ಎಂಬ ನೈಜೀರಿಯಾ ಪ್ರಜೆ ಬಂಧನಕ್ಕೊಳಗಾಗಿದ್ದಾನೆ. ಈತ ಆನ್​ಲೈನ್​ ಮೂಲಕ ಕೊಲ್ಹಾರ ಪಟ್ಟಣದ ಕಿರಣ ಕಲ್ಲಪ್ಪ ದೇಸಾಯಿಗೆ ವಂಚನೆ ಮಾಡಿದ್ದಾನಂತೆ. ಸುಮಾರು 16 ಲಕ್ಷ ರೂ. ಹಣ ವಂಚನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಔಷಧ ನೀಡುವ ವಿಚಾರದಲ್ಲಿ ವಂಚನೆ ಮಾಡಿದ್ದಾಗಿ ಕಿರಣ ದೇಸಾಯಿ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಂಥೋನಿ ಗುಜರಾತಿನಲ್ಲಿ ಕೆಲಸದ ನಿಮಿತ್ಯ ವಾಸವಿದ್ದ. ಔಷಧ ನೀಡುವ ವಿಚಾರದಲ್ಲಿ ನಂಬಿಸಿ ಮೋಸ ಮಾಡಿದ್ದಾನಂತೆ. ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗುಜರಾತಿನಲ್ಲಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿ ತಂದಿದ್ದಾರೆ.

ಇದನ್ನೂ ಓದಿ

ಮ್ಯಾನ್ ಹೋಲ್​ನಲ್ಲಿ ಕಾರ್ಮಿಕನನ್ನ ಇಳಿಸಿ ಚರಂಡಿ ಸ್ವಚ್ಛಗೊಳಿಸಲು ಮುಂದಾದ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

72 ಗಂಟೆ ಮೊದಲು ಮಾಡಿಸಿದ ಟೆಸ್ಟ್​ಗೆ ಮಾನ್ಯತೆ ಇಲ್ಲ; ಕೆಲ ವಿದೇಶಿಗರ ಫ್ಲೈಟ್ ಟಿಕೆಟ್ ಕ್ಯಾನ್ಸಲ್

Published On - 10:49 am, Tue, 7 December 21

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ