AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ದ್ವಿಗುಣಗೊಳಿಸಿ ಕೊಡುವುದಾಗಿ ವಂಚನೆ! ಚಿತ್ರದುರ್ಗ ನಗರಸಭೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲು

ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್, ಮೂರ್ತಿ, ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ. ಚಂದ್ರಶೇಖರ್ ಹಲವು ವಂಚನೆ ಕೇಸ್​ನಲ್ಲಿ ಭಾಗಿಯಾಗಿದ್ದಾರಂತೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಣ ದ್ವಿಗುಣಗೊಳಿಸಿ ಕೊಡುವುದಾಗಿ ವಂಚನೆ! ಚಿತ್ರದುರ್ಗ ನಗರಸಭೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲು
ನಗರಸಭೆ ಜೆಡಿಎಸ್ ಸದಸ್ಯ ಚಂದ್ರಶೇಖರ್
TV9 Web
| Edited By: sandhya thejappa|

Updated on:Dec 07, 2021 | 10:56 AM

Share

ಚಿತ್ರದುರ್ಗ: ಹಣ ದ್ವಿಗುಣಗೊಳಿಸಿ ಕೊಡುವುದಾಗಿ ಆಮಿಷವೊಡ್ಡಿ ವಂಚನೆ ಮಾಡಿದ ಆರೋಪದಡಿಯಲ್ಲಿ ಚಿತ್ರದುರ್ಗ ನಗರಸಭೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಗರಸಭೆ ಜೆಡಿಎಸ್ ಸದಸ್ಯ ಚಂದ್ರಶೇಖರ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. 6 ಲಕ್ಷ ಹಣ ಪಡೆದು 18 ಲಕ್ಷ ನೀಡುವುದಾಗಿ ನಂಬಿಸಿ ವಂಚನೆ ಮಾಡಿದ್ದಾರಂತೆ. ದೊಡ್ಡಬಳ್ಳಾಪುರದ ನಾಗರಾಜ್ಗೆ ನಗರಸಭೆ ಜೆಡಿಎಸ್ ಸದಸ್ಯ ಚಂದ್ರಶೇಖರ್ 18 ಲಕ್ಷ ಇದೆ ಎಂದು ಹೇಳಿ ಬ್ಯಾಗ್ ನೀಡಿ ವಂಚನೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್, ಮೂರ್ತಿ, ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ. ಚಂದ್ರಶೇಖರ್ ಹಲವು ವಂಚನೆ ಕೇಸ್​ನಲ್ಲಿ ಭಾಗಿಯಾಗಿದ್ದಾರಂತೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆನ್​ಲೈನ್ ಮೂಲಕ ಲಕ್ಷಾಂತರ ರೂಪಾಯಿ ವಂಚನೆ ಆನ್​ಲೈನ್ ಮೂಲಕ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ವಿಜಯಪುರ ಸಿಇಎನ್ ಪೊಲೀಸರು ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ. ಆಂಥೋನಿ ಎಂಬ ನೈಜೀರಿಯಾ ಪ್ರಜೆ ಬಂಧನಕ್ಕೊಳಗಾಗಿದ್ದಾನೆ. ಈತ ಆನ್​ಲೈನ್​ ಮೂಲಕ ಕೊಲ್ಹಾರ ಪಟ್ಟಣದ ಕಿರಣ ಕಲ್ಲಪ್ಪ ದೇಸಾಯಿಗೆ ವಂಚನೆ ಮಾಡಿದ್ದಾನಂತೆ. ಸುಮಾರು 16 ಲಕ್ಷ ರೂ. ಹಣ ವಂಚನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಔಷಧ ನೀಡುವ ವಿಚಾರದಲ್ಲಿ ವಂಚನೆ ಮಾಡಿದ್ದಾಗಿ ಕಿರಣ ದೇಸಾಯಿ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಂಥೋನಿ ಗುಜರಾತಿನಲ್ಲಿ ಕೆಲಸದ ನಿಮಿತ್ಯ ವಾಸವಿದ್ದ. ಔಷಧ ನೀಡುವ ವಿಚಾರದಲ್ಲಿ ನಂಬಿಸಿ ಮೋಸ ಮಾಡಿದ್ದಾನಂತೆ. ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗುಜರಾತಿನಲ್ಲಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿ ತಂದಿದ್ದಾರೆ.

ಇದನ್ನೂ ಓದಿ

ಮ್ಯಾನ್ ಹೋಲ್​ನಲ್ಲಿ ಕಾರ್ಮಿಕನನ್ನ ಇಳಿಸಿ ಚರಂಡಿ ಸ್ವಚ್ಛಗೊಳಿಸಲು ಮುಂದಾದ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

72 ಗಂಟೆ ಮೊದಲು ಮಾಡಿಸಿದ ಟೆಸ್ಟ್​ಗೆ ಮಾನ್ಯತೆ ಇಲ್ಲ; ಕೆಲ ವಿದೇಶಿಗರ ಫ್ಲೈಟ್ ಟಿಕೆಟ್ ಕ್ಯಾನ್ಸಲ್

Published On - 10:49 am, Tue, 7 December 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್