AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಶಾಸಕರು, ಸ್ವಾಮೀಜಿ ಕೊಲೆಗೆ ಸಂಚು; ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ

ಅಪರಿಚಿತರು ಕೆಎಸ್​ಪಿ ಆ್ಯಪ್ ಮೂಲಕ ಜಿಲ್ಲಾ ಪೊಲೀಸ್ ಕಚೇರಿಗೆ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ತನಿಖೆ ನಡೆಸಿ ಆರೋಪಿಗಳನ್ನ ಪತ್ತೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.

ಚಿತ್ರದುರ್ಗದಲ್ಲಿ ಶಾಸಕರು, ಸ್ವಾಮೀಜಿ ಕೊಲೆಗೆ ಸಂಚು; ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ
ಬಿಜೆಪಿ ಶಾಸಕ ಎಂ.ಚಂದ್ರಪ್ಪ, ಬೋವಿಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ
TV9 Web
| Edited By: |

Updated on:Jul 16, 2022 | 9:54 AM

Share

ಚಿತ್ರದುರ್ಗ: ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ (M Chandrappa) ಹಾಗೂ ಬೋವಿಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳ (Siddharameshwar Shri) ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಬೆದರಿಕೆ ಸಂದೇಶ ಬಂದಿದೆ ಎಂದು ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಮಾಹಿತಿ ನೀಡಿದ್ದಾರೆ. ಅಪರಿಚಿತರು ಕೆಎಸ್​ಪಿ ಆ್ಯಪ್ ಮೂಲಕ ಜಿಲ್ಲಾ ಪೊಲೀಸ್ ಕಚೇರಿಗೆ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ತನಿಖೆ ನಡೆಸಿ ಆರೋಪಿಗಳನ್ನ ಪತ್ತೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಸದ್ಯ ಈ ಕುರಿತು ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆದರಿಕೆ ಸಂದೇಶದ ಬಗ್ಗೆ ಟಿವಿ9 ಜೊತೆ ಮಾತನಾಡಿದ ಬಿಜೆಪಿ ಶಾಸಕ ಹೊಳಲ್ಕೆರೆ ಎಂ.ಚಂದ್ರಪ್ಪ, ‘ಬಾರದು ಬಪ್ಪದು ತಪ್ಪದು. ಸದಾ ಸಾರ್ವಜನಿಕರ ಮದ್ಯೆಯಿದ್ದು ಜನಪರ ಕಾರ್ಯಗಳಲ್ಲಿ ತೊಡಗಿರುತ್ತೇನೆ. ಉತ್ತಮ ಕೆಲಸ ಮಾಡುವುದೇ ತಪ್ಪು ಎಂಬಂತೆ ಬೆದರಿಕೆ ಒಡ್ಡುವವರ ಬಗ್ಗೆ ನಾನೇನು ಹೇಳಲ್ಲ. ನಮ್ಮ ಕಾರ್ಯಕರ್ತರು ಹೊಳಲ್ಕೆರೆ ಠಾಣೆಗೆ ದೂರು ನೀಡಿದ್ದಾರೆಂದು ಕೇಳಿದ್ದೇನೆ. ಬೆದರಿಕೆ ಸಂದೇಶ ಪರಿಶೀಲಿಸಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ’ ಎಂದರು.

ಇದನ್ನೂ ಓದಿ: Viral Video: 2000 ಬಿಯರ್ ಬಾಟಲ್ ರಸ್ತೆಗೆ ಬಿದ್ದು ಪುಡಿಪುಡಿ; ಕ್ಲೀನ್ ಮಾಡಿದ ‘ಹೀರೋಗಳಿಗೆ’ ಧನ್ಯವಾದ ಹೇಳಿದ ಕಂಪನಿ

ಇದನ್ನೂ ಓದಿ
Image
Sankashti Chaturthi 2022: ಸಂಕಷ್ಟಿ ಚತುರ್ಥಿ ಬಗ್ಗೆ ನಿಮಗೆಷ್ಟು ಗೊತ್ತು?; ಮಹತ್ವ, ಪೂಜಾ ವಿಧಿ ಮಾಹಿತಿ ಇಲ್ಲಿದೆ
Image
Virat Kohli: ಕೊಹ್ಲಿಯನ್ನು ಭಾರತ ತಂಡದಿಂದ ಕೈಬಿಡುವವರು ಇನ್ನೂ ಹುಟ್ಟಿಲ್ಲ ಎಂದ ಪಾಕ್ ಕ್ರಿಕೆಟಿಗ
Image
Bundelkhand Expressway: ಉತ್ತರಪ್ರದೇಶದಲ್ಲಿ ಪ್ರಧಾನಿ ಮೋದಿಯಿಂದ ಇಂದು ಬುಂದೇಲ್​ಖಂಡ್​ ಎಕ್ಸ್​ಪ್ರೆಸ್​ ವೇ ಉದ್ಘಾಟನೆ
Image
ಜು.31ರೊಳಗೆ ಈದ್ಗಾ ಮೈದಾನ ಸರ್ಕಾರದ ಸ್ವತ್ತೆಂದು ಘೋಷಿಸಬೇಕು; ಬಿಬಿಎಂಪಿ, ಸರ್ಕಾರಕ್ಕೆ ಡೆಡ್​ಲೈನ್​

ಚಲನಶೀಲತೆ‌ವುಳ್ಳವರು, ಸಮಾಜಮುಖಿ ಕಾರ್ಯಗಳಲ್ಲಿ ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳಿಗೆ ಈ ರೀತಿ ಸುದ್ದಿಗಳು ಬರುತ್ತಿರುತ್ತವೆ. ಅಂಜಿಕೆ, ಆತಂಕ ಪಡುವ ವಿಚಾರ ಅಲ್ಲ. ನಾವು ಸಮಾಜಮುಖಿಯಾಗಿ ಸಮಾಜದ ಜತೆಗೆ ಇರುವುದರಿಂದ ಈ ಬೆದರಿಕೆ ಸಂದೇಶವನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ. ಪೊಲೀಸ್ ಇಲಾಖೆಗೇ ಸಂದೇಶ ಹೋಗಿರುವುದರಿಂದ ಪೊಲೀಸರು ಗಂಭೀರವಾಗಿ ತೆಗೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಬೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದರು.

ಇದನ್ನೂ ಓದಿ: Russian Missile Attack: ಉಕ್ರೇನ್​ನ ಡ್ನಿಪ್ರೊ ಮೇಲೆ ರಷ್ಯನ್ ಕ್ಷಿಪಣಿ ದಾಳಿ; ಮೂವರು ಸಾವು, 15 ಮಂದಿಗೆ ಗಾಯ

Published On - 9:45 am, Sat, 16 July 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?