ಚಿತ್ರದುರ್ಗದಲ್ಲಿ ಆಂಧ್ರ ಮೂಲದ ಕಂಪನಿಯಿಂದ ವಂಚನೆ: ಉದ್ಯೋಗ ನೀಡುವ ನೆಪದಲ್ಲಿ ಕೋಟ್ಯಂತರ ರೂ ವಂಚನೆ

ಉದ್ಯೋಗ, ವಿಶೇಷ‌ ಪ್ಯಾಕೇಜ್ ನೆಪದಲ್ಲಿ ಜನರಿಂದ ಹಣ ಸಂಗ್ರಹಿಸಿ ಆಂಧ್ರ ಮೂಲದ ಕಂಪನಿಯೊಂದು ಸುಮಾರು 60 ರಿಂದ 70 ಕೋಟಿ ರೂ. ವಂಚಿಸಿರುವಂತಹ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಇದೇ ರೀತಿಯ ವಂಚನೆ ಪ್ರಕರಣಗಳು ಇತ್ತೀಗೆಚೆ ರಾಜ್ಯದಲ್ಲಿ ಹೆಚ್ಚುತ್ತಿವೆ. ಹಾವೇರಿ, ರಾಯಚೂರು, ತುಮಕೂರಿನಲ್ಲೂ ವಂಚನೆ ನಡೆದಿತ್ತು.

ಚಿತ್ರದುರ್ಗದಲ್ಲಿ ಆಂಧ್ರ ಮೂಲದ ಕಂಪನಿಯಿಂದ ವಂಚನೆ: ಉದ್ಯೋಗ ನೀಡುವ ನೆಪದಲ್ಲಿ ಕೋಟ್ಯಂತರ ರೂ ವಂಚನೆ
ವಂಚನೆ
Image Credit source: tv9 kannada
Edited By:

Updated on: Jun 18, 2026 | 3:21 PM

ಚಿತ್ರದುರ್ಗ, ಜೂನ್​​ 18: ಇತ್ತೀಚೆಗೆ ಬೆಳಗಾವಿಯ ಶಿವಾನಂದ ನೀಲಣ್ಣವರ ಶಿವಂ ಅಸೋಸಿಯೇಟ್ ಕಂಪನಿಯಿಂದ ಸಾವಿರಾರು ಕೋಟಿ ರೂ ವಂಚನೆ (Fraud) ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಬಳಿಕ ಹಾವೇರಿ, ರಾಯಚೂರು ಮತ್ತು ತುಮಕೂರಿನಲ್ಲೂ ದುಷ್ಕರ್ಮಿಗಳು ಜನರಿಗೆ ಲಕ್ಷಾಂತರ ರೂ ವಂಚಿಸಿದ್ದರು. ಇದೀಗ ಚಿತ್ರದುರ್ಗದಲ್ಲಿ (chitradurga) ಆಂಧ್ರ ಮೂಲದ ಕಂಪನಿಯಿಂದ ಸುಮಾರು 470 ಜನರಿಂದ 60 ರಿಂದ 70 ಕೋಟಿ ರೂ ಹಣ ಸಂಗ್ರಹಿಸಿ ವಂಚಿಸಲಾಗಿದೆ. ಸದ್ಯ ವಂಚನೆಗೊಳಗಾದ ಜನರು ಜಿಲ್ಲಾ ಪೊಲೀಸ್​ ಕಛೇರಿಗೆ ದೂರು ನೀಡಿದ್ದಾರೆ.

ಮುಖ್ಯಾಂಶಗಳು

  • ಚಿತ್ರದುರ್ಗದಲ್ಲಿ ಮಹಾವಂಚನೆ ಬೆಳಕಿಗೆ
  • ಉದ್ಯೋಗ, ವಿಶೇಷ‌ ಪ್ಯಾಕೇಜ್ ನೆಪದಲ್ಲಿ ವಂಚನೆ
  • ನ್ಯಾಯ ಕೊಡಿಸುವಂತೆ ಅಳಲು ತೋಡಿಕೊಂಡ ಸಂತ್ರಸ್ತ ಜನರು

ನಡೆದಿದ್ದೇನು?

ಆಂಧ್ರ ಮೂಲದ ಎಸ್‌ಎಲ್‌ವಿ ಕಂಪನಿ ಉದ್ಯೋಗ ಹಾಗೂ ವಿಶೇಷ ಪ್ಯಾಕೇಜ್ ಆಮಿಷ ತೋರಿಸಿ ಚಿತ್ರದುರ್ಗದ ಸುಮಾರು 470 ಜನರಿಗೆ 60 ರಿಂದ 70 ಕೋಟಿ ರೂ ವಂಚಿಸಿದೆ. ರಾಜೇಶ್ ಬೊಮ್ಮಾಲ ಎಂಬುವವನು ಅಮಾಯಕ ಜನರಿಗೆ ವಂಚಿಸಿದ್ದಾನೆ.

ಇದನ್ನೂ ಓದಿ: ಮನೆಯಲ್ಲೇ ಪ್ಯಾಕಿಂಗ್ ಕೆಲಸ ಅಂತ ನಂಬಿಸಿ 10 ಕೋಟಿ ರೂ. ಎಗರಿಸಿದ್ರು: ಹಾವೇರಿಯ ‘SLV ಮಹಿಳಾ ಮಾರ್ಟ್’ ಮಾಲೀಕರ ಮಹಾಮೋಸ

ಈ ರಾಜೇಶ್ ಬೊಮ್ಮಾಲ ಫೇಸ್​ಬುಕ್​ ಮತ್ತು ಇನ್​ಸ್ಟಾಗ್ರಾಂನಲ್ಲಿ ಕಂಪನಿ ಬಗ್ಗೆ ಆಕರ್ಷಕ ಪ್ರಚಾರ ಮಾಡಿದ್ದಾನೆ. ಇದನ್ನು ನಂಬಿ ನೂರಾರು ಕೂಲಿಕಾರ್ಮಿಕರು, ಗೃಹಿಣಿಯರು, ನಿರುದ್ಯೋಗಿ ಯುವಕರು ಫೈನಾನ್ಸ್​ನಲ್ಲಿ ಸಾಲ ಮಾಡಿ ಕಂಪನಿಗೆ ಹಣ ಕಟ್ಟಿದ್ದಾರೆ.

ಚಿನ್ನಾಭರಣ, ಆಸ್ತಿಪತ್ರ ಒತ್ತೆಯಿಟ್ಟು ಹಣ ತುಂಬಿದ ಜನ

ಅಷ್ಟೇ ಅಲ್ಲದೆ ಇನ್ನು ಕೆಲವರು ಚಿನ್ನಾಭರಣ, ಆಸ್ತಿಪತ್ರವನ್ನೂ ಒತ್ತೆಯಿಟ್ಟು ಕಂಪನಿಗೆ ಹಣ ತುಂಬಿದ್ದರು. ಆದರೆ ಇದೀಗ ವಂಚಕರು ಹಣದೊಂದಿಗೆ ರಾತ್ರೋರಾತ್ರಿ ಎಸ್ಕೇಪ್ ಆಗಿದ್ದು, ಜನರಿಗೆ ದಿಕ್ಕು ತೋಚದಂತಾಗಿದೆ. ಹಾವೇರಿ, ರಾಯಚೂರು, ತುಮಕೂರು ಮಾದರಿಯಲ್ಲೇ ಚಿತ್ರದುರ್ಗದಲ್ಲೂ ವಂಚನೆ ನಡೆದಿದೆ. ಸದ್ಯ ನ್ಯಾಯ ಕೊಡಿಸುವಂತೆ ಸಂತ್ರಸ್ತ ಜನರು ಅಳಲು ತೋಡಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us