AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾ ಶರಣರ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿ, ಡಿಸಿ, ಎಸ್​ಪಿಗೆ ದೂರು: ಪ್ರಕರಣ ಮತ್ತಷ್ಟು ಗಂಭೀರ

ಚಿತ್ರದುರ್ಗ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಾಮಾಜಿಕ ಕಾರ್ಯಕರ್ತ ಮಧು ಎನ್ನುವವರು ದೂರು ನೀಡಿದ್ದಾರೆ.

ಮುರುಘಾ ಶರಣರ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿ, ಡಿಸಿ, ಎಸ್​ಪಿಗೆ ದೂರು: ಪ್ರಕರಣ ಮತ್ತಷ್ಟು ಗಂಭೀರ
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 14, 2022 | 11:43 AM

Share

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪೊಕ್ಸೋ ಪ್ರಕರಣದಲ್ಲಿ (POCSO Case) ಜೈಲು ಸೇರಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ (Murugha Mutt) ವಿರುದ್ಧ ಇಂದು ಮತ್ತೆರೆಡು ದೂರು ದಾಖಲಾಗಿದೆ. ಚಿತ್ರದುರ್ಗ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಾಮಾಜಿಕ ಕಾರ್ಯಕರ್ತ ಮಧು ಎನ್ನುವವರು ದೂರು ನೀಡಿದ್ದಾರೆ. ಮತ್ತೊಂದೆಡೆ ಮೈಸೂರಿನಲ್ಲಿ ಮುರುಘಾ ಮಠದ ಅಡುಗೆ ಸಹಾಯಕಿಯೊಬ್ಬರು ತನ್ನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪ ಹೊರಿಸಿ ದೂರು ದಾಖಲಿಸಿದ್ದು, ಪ್ರಕರಣವನ್ನು ಸದ್ಯ ಚಿತ್ರದುರ್ಗಕ್ಕೆ ವರ್ಗಾಯಿಸಲಾಗಿದೆ.

ವಸತಿ ಶಾಲೆಯ ಬಾಲಕಿ ಮೇಲೆ ಲೌಂಗಿಕ‌ ದೌರ್ಜನ್ಯ ಆರೋಪದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ದೌರ್ಜನ್ಯ ಅನುಭವಿಸಿರುವ ಬಾಲಕಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾಳೆ. ದೂರು ಸ್ವೀಕರಿಸಿರುವ ಮಕ್ಕಳ ಕಲ್ಯಾಣ‌ ಸಮಿತಿಯು ಹಿಂಬರಹ ನೀಡಿದ್ದು, ಈಗಾಗಲೇ ವಿದ್ಯಾರ್ಥಿನಿಗೆ ಆಪ್ತ ಸಮಾಲೋಚನೆ ಮಾಡಿದ್ದೇವೆ. ಆಕೆ ತನ್ನ ಮೇಲೆ ಯಾವುದೇ ದೌರ್ಜನ್ಯ ನಡೆದಿಲ್ಲ ಎಂದು ತಿಳಿಸಿರುವುದಾಗಿ ಹೇಳಿದೆ.

ಮತ್ತೊಂದು ಪ್ರಕರಣ

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ದಾಖಲಾಗಿ, ಚಿತ್ರದುರ್ಗಕ್ಕೆ ವರ್ಗಾವಣೆ ಆಗಿರುವ ಮತ್ತೊಂದು ಪ್ರಕರಣವೂ ಮೊದಲ ಪ್ರಕರಣದ ರೀತಿಯಲ್ಲಿಯೇ ಇದೆ ಎಂದು ಒಡನಾಡಿ ಸಂಸ್ಥೆಯ ಸ್ಟಾನ್​ಲಿ ಹೇಳಿದ್ದಾರೆ.

ಎರಡೂವರೆ ವರ್ಷಗಳಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ನಿನ್ನೆಯಷ್ಟೇ (ಅ 13) ಮಕ್ಕಳು ನಮ್ಮ ಬಳಿಗೆ ಬಂದಿದ್ದರು. ಬಾಲಕಿಯು ಮಠದಲ್ಲಿ ಓದುತ್ತಿದ್ದಳು. ಆಕೆಯ ಪೋಷಕರು ಕೂಲಿ ಕೆಲಸ ಮಾಡುತ್ತಿದ್ದರು. ಮುರುಘಾ ಶ್ರೀಗಳಂಥ ಹಿರಿಯ ಪ್ರಭಾವಿಗಳ ವಿರುದ್ಧ ನಾವು ಹೇಗೆ ಮಾತನಾಡುವುದು ಎಂಬ ಭಾವನೆಯಿಂದ ಮಕ್ಕಳು ಮಾತನಾಡಿರಲಿಲ್ಲ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಮಠದಲ್ಲಿರುವ ಇತರ ಮಕ್ಕಳ ಕೌನ್ಸೆಲಿಂಗ್ ಮಾಡಿದರೆ ಇನ್ನಷ್ಟು ಪ್ರಕರಣಗಳು ಹೊರಬರುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟರು.

ಮಠದಲ್ಲಿ ಕೆಲವರವನ್ನು ರಕ್ಷಣೆ ಮಾಡುತ್ತಿರುವುದು ಕಂಡು ಬರುತ್ತಿದೆ. ನ್ಯಾಯಾಧೀಶರು ಮಠಕ್ಕೆ ಹೋಗಿ ಮಾತನಾಡಬೇಕು. ಪ್ರಕರಣವನ್ನು ಚಿತ್ರದುರ್ಗ ಠಾಣೆಗೆ ವರ್ಗಾಯಿಸಲಾಗಿದೆ, ಆದರೆ ಮಕ್ಕಳು ಮೈಸೂರಿನಲ್ಲೇ ಇರುತ್ತಾರೆ. ಪೋಷಕರು ಇರುವುದರಿಂದ ಬಾಲ ಮಂದಿರಕ್ಕೆ ಹೋಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಪ್ರಕರಣ ವರ್ಗಾವಣೆ

ಲೈಂಗಿಕ ಕಿರುಕುಳ ಆರೋಪದ ಮೇಲೆ ಜೈಲಿನಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ತಡರಾತ್ರಿ ಮೈಸೂರಿನ ನಜರಬಾದ್ ಠಾಣೆಯಲ್ಲಿ ಮತ್ತೊಂದು ಎಫ್​ಐಆರ್ ದಾಖಲಿಸಲಾಗಿದೆ. ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಮಠದಲ್ಲಿ ಅಡುಗೆ ಸಹಾಯಕಿ ಆಗಿದ್ದ ಮಹಿಳೆ ತನ್ನ ಓರ್ವ ಮಗಳನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ದೂರು ದಾಖಲಿಸಿದ್ದಾರೆ. ತನ್ನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ ಇನ್ನಿಬ್ಬರು ಬಾಲಕಿಯರು ಸೇರಿದಂತೆ ಒಟ್ಟು ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Published On - 11:43 am, Fri, 14 October 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್