AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾ ಶರಣರ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿ, ಡಿಸಿ, ಎಸ್​ಪಿಗೆ ದೂರು: ಪ್ರಕರಣ ಮತ್ತಷ್ಟು ಗಂಭೀರ

ಚಿತ್ರದುರ್ಗ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಾಮಾಜಿಕ ಕಾರ್ಯಕರ್ತ ಮಧು ಎನ್ನುವವರು ದೂರು ನೀಡಿದ್ದಾರೆ.

ಮುರುಘಾ ಶರಣರ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿ, ಡಿಸಿ, ಎಸ್​ಪಿಗೆ ದೂರು: ಪ್ರಕರಣ ಮತ್ತಷ್ಟು ಗಂಭೀರ
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು
TV9 Web
| Edited By: |

Updated on:Oct 14, 2022 | 11:43 AM

Share

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪೊಕ್ಸೋ ಪ್ರಕರಣದಲ್ಲಿ (POCSO Case) ಜೈಲು ಸೇರಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ (Murugha Mutt) ವಿರುದ್ಧ ಇಂದು ಮತ್ತೆರೆಡು ದೂರು ದಾಖಲಾಗಿದೆ. ಚಿತ್ರದುರ್ಗ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಾಮಾಜಿಕ ಕಾರ್ಯಕರ್ತ ಮಧು ಎನ್ನುವವರು ದೂರು ನೀಡಿದ್ದಾರೆ. ಮತ್ತೊಂದೆಡೆ ಮೈಸೂರಿನಲ್ಲಿ ಮುರುಘಾ ಮಠದ ಅಡುಗೆ ಸಹಾಯಕಿಯೊಬ್ಬರು ತನ್ನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪ ಹೊರಿಸಿ ದೂರು ದಾಖಲಿಸಿದ್ದು, ಪ್ರಕರಣವನ್ನು ಸದ್ಯ ಚಿತ್ರದುರ್ಗಕ್ಕೆ ವರ್ಗಾಯಿಸಲಾಗಿದೆ.

ವಸತಿ ಶಾಲೆಯ ಬಾಲಕಿ ಮೇಲೆ ಲೌಂಗಿಕ‌ ದೌರ್ಜನ್ಯ ಆರೋಪದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ದೌರ್ಜನ್ಯ ಅನುಭವಿಸಿರುವ ಬಾಲಕಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾಳೆ. ದೂರು ಸ್ವೀಕರಿಸಿರುವ ಮಕ್ಕಳ ಕಲ್ಯಾಣ‌ ಸಮಿತಿಯು ಹಿಂಬರಹ ನೀಡಿದ್ದು, ಈಗಾಗಲೇ ವಿದ್ಯಾರ್ಥಿನಿಗೆ ಆಪ್ತ ಸಮಾಲೋಚನೆ ಮಾಡಿದ್ದೇವೆ. ಆಕೆ ತನ್ನ ಮೇಲೆ ಯಾವುದೇ ದೌರ್ಜನ್ಯ ನಡೆದಿಲ್ಲ ಎಂದು ತಿಳಿಸಿರುವುದಾಗಿ ಹೇಳಿದೆ.

ಮತ್ತೊಂದು ಪ್ರಕರಣ

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ದಾಖಲಾಗಿ, ಚಿತ್ರದುರ್ಗಕ್ಕೆ ವರ್ಗಾವಣೆ ಆಗಿರುವ ಮತ್ತೊಂದು ಪ್ರಕರಣವೂ ಮೊದಲ ಪ್ರಕರಣದ ರೀತಿಯಲ್ಲಿಯೇ ಇದೆ ಎಂದು ಒಡನಾಡಿ ಸಂಸ್ಥೆಯ ಸ್ಟಾನ್​ಲಿ ಹೇಳಿದ್ದಾರೆ.

ಎರಡೂವರೆ ವರ್ಷಗಳಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ನಿನ್ನೆಯಷ್ಟೇ (ಅ 13) ಮಕ್ಕಳು ನಮ್ಮ ಬಳಿಗೆ ಬಂದಿದ್ದರು. ಬಾಲಕಿಯು ಮಠದಲ್ಲಿ ಓದುತ್ತಿದ್ದಳು. ಆಕೆಯ ಪೋಷಕರು ಕೂಲಿ ಕೆಲಸ ಮಾಡುತ್ತಿದ್ದರು. ಮುರುಘಾ ಶ್ರೀಗಳಂಥ ಹಿರಿಯ ಪ್ರಭಾವಿಗಳ ವಿರುದ್ಧ ನಾವು ಹೇಗೆ ಮಾತನಾಡುವುದು ಎಂಬ ಭಾವನೆಯಿಂದ ಮಕ್ಕಳು ಮಾತನಾಡಿರಲಿಲ್ಲ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಮಠದಲ್ಲಿರುವ ಇತರ ಮಕ್ಕಳ ಕೌನ್ಸೆಲಿಂಗ್ ಮಾಡಿದರೆ ಇನ್ನಷ್ಟು ಪ್ರಕರಣಗಳು ಹೊರಬರುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟರು.

ಮಠದಲ್ಲಿ ಕೆಲವರವನ್ನು ರಕ್ಷಣೆ ಮಾಡುತ್ತಿರುವುದು ಕಂಡು ಬರುತ್ತಿದೆ. ನ್ಯಾಯಾಧೀಶರು ಮಠಕ್ಕೆ ಹೋಗಿ ಮಾತನಾಡಬೇಕು. ಪ್ರಕರಣವನ್ನು ಚಿತ್ರದುರ್ಗ ಠಾಣೆಗೆ ವರ್ಗಾಯಿಸಲಾಗಿದೆ, ಆದರೆ ಮಕ್ಕಳು ಮೈಸೂರಿನಲ್ಲೇ ಇರುತ್ತಾರೆ. ಪೋಷಕರು ಇರುವುದರಿಂದ ಬಾಲ ಮಂದಿರಕ್ಕೆ ಹೋಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಪ್ರಕರಣ ವರ್ಗಾವಣೆ

ಲೈಂಗಿಕ ಕಿರುಕುಳ ಆರೋಪದ ಮೇಲೆ ಜೈಲಿನಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ತಡರಾತ್ರಿ ಮೈಸೂರಿನ ನಜರಬಾದ್ ಠಾಣೆಯಲ್ಲಿ ಮತ್ತೊಂದು ಎಫ್​ಐಆರ್ ದಾಖಲಿಸಲಾಗಿದೆ. ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಮಠದಲ್ಲಿ ಅಡುಗೆ ಸಹಾಯಕಿ ಆಗಿದ್ದ ಮಹಿಳೆ ತನ್ನ ಓರ್ವ ಮಗಳನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ದೂರು ದಾಖಲಿಸಿದ್ದಾರೆ. ತನ್ನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ ಇನ್ನಿಬ್ಬರು ಬಾಲಕಿಯರು ಸೇರಿದಂತೆ ಒಟ್ಟು ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Published On - 11:43 am, Fri, 14 October 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ