AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಮುರುಘಾಶ್ರೀಗೆ ಎದೆನೋವು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ: ಬೆಂಗಳೂರಿಗೆ ಸ್ಥಳಾಂತರ ಸಾಧ್ಯತೆ

ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಶಿಫ್ಟ್ ಮಾಡಿದ್ದು, ಹಿರಿಯ ವೈದ್ಯೆ ರೂಪಾ, ಹೆರಿಗೆ ತಜ್ಞ ಡಾ ಶಿವಕುಮಾರ್ ಸೇರಿ ಮೂವರು ವೈದ್ಯರ ನೇತೃತ್ವದಲ್ಲಿ ಶ್ರೀಗಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

ಜೈಲಿನಲ್ಲಿ ಮುರುಘಾಶ್ರೀಗೆ ಎದೆನೋವು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ: ಬೆಂಗಳೂರಿಗೆ ಸ್ಥಳಾಂತರ ಸಾಧ್ಯತೆ
ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ
TV9 Web
| Edited By: |

Updated on:Sep 02, 2022 | 9:54 AM

Share

ಚಿತ್ರದುರ್ಗ: ಪೋಕ್ಸೋ ಕೇಸ್​ನಲ್ಲಿ ಮುರುಘಾಶ್ರೀಗಳ ಬಂಧನ ಪ್ರಕರಣ ಸಂಬಂಧ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ ಶ್ರೀಗಳ ವೈದ್ಯಕೀಯ ತಪಾಸಣೆ ಮಾಡಲಾಗುತ್ತಿದೆ. ಜಿಲ್ಲಾ ಕಾರಾಗೃಹದಿಂದ ಜಿಲ್ಲಾಸ್ಪತ್ರೆಗೆ ಮುರುಘಾಶ್ರೀ ಶಿಫ್ಟ್ ಮಾಡಿದ್ದು, ಹಿರಿಯ ವೈದ್ಯೆ ರೂಪಾ, ಹೆರಿಗೆ ತಜ್ಞ ಡಾ ಶಿವಕುಮಾರ್ ಸೇರಿ ಮೂವರು ವೈದ್ಯರ ನೇತೃತ್ವದಲ್ಲಿ ಶ್ರೀಗಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಇನ್ನೂ ಶ್ರೀಗಳ ಅಡ್ವೋಕೆಟ್ ಉಮೇಶ್​ ಚಿತ್ರದುರ್ಗ ಡಿಸ್ಟ್ರಿಕ್ಟ್ ಸರ್ಜನ್ ಡಾ. ಬಸವರಾಜ್​ರಿಂದ ಮಾಹಿತಿ ಪಡೆಯುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆ ಶಿಫ್ಟ್ ಮಾಡಿ ಎಂದು ಡಿಸ್ಟ್ರಿಕ್ಟ್ ಸರ್ಜನ್ ಡಾ. ಬಸವರಾಜ್ ಹೇಳಿದ್ದಾರೆ ಎಂದು ​ಅಡ್ವೋಕೆಟ್ ಉಮೇಶ್ ಮಾಹಿತಿ ನೀಡಿದರು. ಸ್ವಾಮೀಜಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಎಫ್​ಐಆರ್ ದಾಖಲಾದ 6 ದಿನಗಳ ಬಳಿಕ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದರು. 1ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನ ನ್ಯಾಯಾಧೀಶೆ ಹಾಗೂ ಮ್ಯಾಜಿಸ್ಟ್ರೇಟ್ ಕೋಮಲಾ ಅವರ ಮುಂದೆ ಹಾಜರುಪಡಿಸಿದರು. ಪೊಕ್ಸೊ ಕಾಯ್ದೆಯಡಿ (POCSO Act) ಪ್ರಕರಣ ದಾಖಲಾಗಿದ್ದು, ವಿಚಾರಣೆಗಾಗಿ ಮುರುಘಾ ಶರಣರನ್ನು 10 ದಿನಗಳ ಅವಧಿಗೆ ತಮ್ಮ ವಶಕ್ಕೆ ನೀಡಬೇಕು ಎಂದು ಕೋರಿ ಪೊಲೀಸರು ನ್ಯಾಯಾಲಯಕ್ಕೆ ಶುಕ್ರವಾರ ಮನವಿ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ: Murugha Shree Profile: ಕಾವಿಧಾರಿ ಶಿವಮೂರ್ತಿ ಮುರುಘಾ ಶರಣರ ಮೇಲಿನ ಕಾಮದ ಆರೋಪಕ್ಕಿದೆ ಲೋಭ, ಕ್ರೋಧದ ನಂಟು

ಇಂದು ಅಥವಾ ನಾಳೆ ಜಾಮೀನು ಕೋರಿ ಅರ್ಜಿ ಸಲ್ಲಿಸುತ್ತೇವೆ ಎಂದು ಚಿತ್ರದುರ್ಗದಲ್ಲಿ ಮಠದ ಪರ ವಕೀಲ ಉಮೇಶ್ ಹೇಳಿಕೆ ನೀಡಿದರು. ಜಾಮೀನು ಕೋರಿ ಸೆಷನ್ಸ್ ಕೋರ್ಟ್​ಗೆ ಅರ್ಜಿ ಸಲ್ಲಿಸುತ್ತೇವೆ. ಅನಾರೋಗ್ಯ ಹಿನ್ನೆಲೆ ಶ್ರೀಗಳಿಗೆ ವೈದ್ಯಕೀಯ ತಪಾಸಣೆ ಆಗಬೇಕಿದೆ. ಶ್ರೀಗಳು ತನಿಖೆಗೆ ಸಹಕಾರ ನೀಡುತ್ತಾರೆಂಬ ಅಂಶ ಸೇರಿದಂತೆ. ಇತರೆ ಅಂಶಗಳ ಆಧಾರದ ಮೇಲೆ ಜಾಮೀನಿಗೆ ಕೋರಿ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಹೇಳಿದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:51 am, Fri, 2 September 22

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ