AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಯಲ್ಲಿ ಹಿಂಬದಿ ಚಕ್ರ ಸಡಿಲಗೊಂಡಿರುವುದನ್ನ ನೋಡಿದ KSRTC ಬಸ್ ಚಾಲಕ, ಮುಂದೇನು ಮಾಡಿದರು ನೋಡಿ!

ಬಸ್ ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಕಿತ್ತೋಗಿರೋ ಚಕ್ರದೊಂದಿಗೆ ಚಲಿಸುತ್ತಿದ್ದ ಬಸ್ ಅನ್ನು ನಿಲ್ಲಿಸಿ ಅಪಾಯ ತಪ್ಪಿಸಿದ್ದಾರೆ ಚಾಲಕ ಅರುಣ್ ಮತ್ತು ನಿರ್ವಾಹಕ ಶರಣಪ್ಪ.

ಕನ್ನಡಿಯಲ್ಲಿ ಹಿಂಬದಿ ಚಕ್ರ ಸಡಿಲಗೊಂಡಿರುವುದನ್ನ ನೋಡಿದ KSRTC ಬಸ್ ಚಾಲಕ, ಮುಂದೇನು ಮಾಡಿದರು ನೋಡಿ!
ಚಳ್ಳಕೆರೆ: ಸಡಿಲಗೊಂಡ ಕೆಎಸ್​ಆರ್​ಟಿಸಿ ಬಸ್ಸಿನ ಹಿಂಬದಿ ಚಕ್ರ
TV9 Web
| Updated By: ಸಾಧು ಶ್ರೀನಾಥ್​|

Updated on:Dec 26, 2022 | 4:46 PM

Share

ಚಿತ್ರದುರ್ಗ: ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿದೆ. ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ ತಾಲೂಕಿನ ಅಲ್ಲಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್​ಆರ್​ಟಿಸಿ (KSRTC) ಬಸ್ (Bus)ನ ಹಿಂಬದಿಯ ಎಡ ವ್ಹೀಲ್ ಸಂಪೂರ್ಣ ಸಡಿಲಗೊಂಡು ಇನ್ನೇನು ಬಸ್ಸಿಂದ ಸಡಿಲಗೊಳ್ಳಬೇಕು (dismantle) ಸರಿಯಾಗಿ ಅದೇ ವೇಳೆ ಅಚಾನಕ್ಕಾಗಿ ಬಸ್ಸಿನ ಚಾಲಕ ಅರುಣ್ ಅವರು ತಮ್ಮ ಎಡ ಬದಿಗೆ ಇರುವ ಕನ್ನಡಿಯತ್ತ (ರೇರ್ ಮಿರರ್ –Rear Mirror) ಕಣ್ಣು ಹೊರಳಿಸಿದ್ದಾರೆ. ಸರಿಯಾಗಿ ಆಗ ಗೊತ್ತಾಗಿದೆ… ಅಯ್ಯೋ ಇನ್ನೇನು ಹಿಂಬದಿ ಚಕ್ರ ಕಳಚಿಬೀಳಲಿದೆ ಎಂಬುದು ಅವರ ಅರಿವಿಗೆ ಬಂದಿದೆ.

ಮತ್ತೆ ಹಿಂದೆಮುಂದೆ ನೋಡದೆ ಚಾಲಕ ಅರುಣ್ ಅವರು ಬಸ್ ಅನ್ನು ನಿಧಾನಕ್ಕೆ ತಹಬಂದಿಗೆ ತಂದವರೆ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿ, ದೀರ್ಘ ನಿಟ್ಟುಸಿರುಬಿಟ್ಟಿದ್ದಾರೆ. ಸಹೋದ್ಯೋಗಿ ನಿರ್ವಾಹಕ ಶರಣಪ್ಪ ಜೊತೆ ಮಾತನಾಡುತ್ತಾ, ಸಧ್ಯ ಬಚಾವ್ ಆದವಪ್ಪೋ! ಎಂದಿದ್ದಾರೆ.

ಕಿತ್ತೋಗಿರೋ ಚಕ್ರದೊಂದಿಗೆ ಚಲಿಸುತ್ತಿದ್ದ ಬಸ್…

ಕಿತ್ತೋಗಿರೋ ಚಕ್ರದೊಂದಿಗೆ ಚಲಿಸುತ್ತಿದ್ದ ಬಸ್ ಅನ್ನು ನಿಲ್ಲಿಸಿ ಅಪಾಯ ತಪ್ಪಿಸಿದ್ದಾರೆ. ಚಾಲಕ ಅರುಣ್ ಮತ್ತು ನಿರ್ವಾಹಕ ಶರಣಪ್ಪಗೆ ಕೃತಜ್ಞತೆ ಹೇಳಿದ್ದಾರೆ ಪ್ರಯಾಣಿಕರು. ಅಂದಹಾಗೆ ಬಸ್ ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಎಲ್ಲರೂ ಈಗ ಸುರಕ್ಷಿತ, ಸುರಕ್ಷಿತ! ಸದ್ಯಕ್ಕೆ, ಸಾರಿಗೆ ಬಸ್ ನ ವ್ಹೀಲ್‌ ಸಡಿಲಗೊಂಡು ನಿಂತಿರುವ ಬಸ್ ನ ವಿಡಿಯೋ ವೈರಲ್ ಆಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:38 pm, Mon, 26 December 22

ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ