AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಯಲ್ಲಿ ಹಿಂಬದಿ ಚಕ್ರ ಸಡಿಲಗೊಂಡಿರುವುದನ್ನ ನೋಡಿದ KSRTC ಬಸ್ ಚಾಲಕ, ಮುಂದೇನು ಮಾಡಿದರು ನೋಡಿ!

ಬಸ್ ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಕಿತ್ತೋಗಿರೋ ಚಕ್ರದೊಂದಿಗೆ ಚಲಿಸುತ್ತಿದ್ದ ಬಸ್ ಅನ್ನು ನಿಲ್ಲಿಸಿ ಅಪಾಯ ತಪ್ಪಿಸಿದ್ದಾರೆ ಚಾಲಕ ಅರುಣ್ ಮತ್ತು ನಿರ್ವಾಹಕ ಶರಣಪ್ಪ.

ಕನ್ನಡಿಯಲ್ಲಿ ಹಿಂಬದಿ ಚಕ್ರ ಸಡಿಲಗೊಂಡಿರುವುದನ್ನ ನೋಡಿದ KSRTC ಬಸ್ ಚಾಲಕ, ಮುಂದೇನು ಮಾಡಿದರು ನೋಡಿ!
ಚಳ್ಳಕೆರೆ: ಸಡಿಲಗೊಂಡ ಕೆಎಸ್​ಆರ್​ಟಿಸಿ ಬಸ್ಸಿನ ಹಿಂಬದಿ ಚಕ್ರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 26, 2022 | 4:46 PM

ಚಿತ್ರದುರ್ಗ: ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿದೆ. ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ ತಾಲೂಕಿನ ಅಲ್ಲಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್​ಆರ್​ಟಿಸಿ (KSRTC) ಬಸ್ (Bus)ನ ಹಿಂಬದಿಯ ಎಡ ವ್ಹೀಲ್ ಸಂಪೂರ್ಣ ಸಡಿಲಗೊಂಡು ಇನ್ನೇನು ಬಸ್ಸಿಂದ ಸಡಿಲಗೊಳ್ಳಬೇಕು (dismantle) ಸರಿಯಾಗಿ ಅದೇ ವೇಳೆ ಅಚಾನಕ್ಕಾಗಿ ಬಸ್ಸಿನ ಚಾಲಕ ಅರುಣ್ ಅವರು ತಮ್ಮ ಎಡ ಬದಿಗೆ ಇರುವ ಕನ್ನಡಿಯತ್ತ (ರೇರ್ ಮಿರರ್ –Rear Mirror) ಕಣ್ಣು ಹೊರಳಿಸಿದ್ದಾರೆ. ಸರಿಯಾಗಿ ಆಗ ಗೊತ್ತಾಗಿದೆ… ಅಯ್ಯೋ ಇನ್ನೇನು ಹಿಂಬದಿ ಚಕ್ರ ಕಳಚಿಬೀಳಲಿದೆ ಎಂಬುದು ಅವರ ಅರಿವಿಗೆ ಬಂದಿದೆ.

ಮತ್ತೆ ಹಿಂದೆಮುಂದೆ ನೋಡದೆ ಚಾಲಕ ಅರುಣ್ ಅವರು ಬಸ್ ಅನ್ನು ನಿಧಾನಕ್ಕೆ ತಹಬಂದಿಗೆ ತಂದವರೆ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿ, ದೀರ್ಘ ನಿಟ್ಟುಸಿರುಬಿಟ್ಟಿದ್ದಾರೆ. ಸಹೋದ್ಯೋಗಿ ನಿರ್ವಾಹಕ ಶರಣಪ್ಪ ಜೊತೆ ಮಾತನಾಡುತ್ತಾ, ಸಧ್ಯ ಬಚಾವ್ ಆದವಪ್ಪೋ! ಎಂದಿದ್ದಾರೆ.

ಕಿತ್ತೋಗಿರೋ ಚಕ್ರದೊಂದಿಗೆ ಚಲಿಸುತ್ತಿದ್ದ ಬಸ್…

ಕಿತ್ತೋಗಿರೋ ಚಕ್ರದೊಂದಿಗೆ ಚಲಿಸುತ್ತಿದ್ದ ಬಸ್ ಅನ್ನು ನಿಲ್ಲಿಸಿ ಅಪಾಯ ತಪ್ಪಿಸಿದ್ದಾರೆ. ಚಾಲಕ ಅರುಣ್ ಮತ್ತು ನಿರ್ವಾಹಕ ಶರಣಪ್ಪಗೆ ಕೃತಜ್ಞತೆ ಹೇಳಿದ್ದಾರೆ ಪ್ರಯಾಣಿಕರು. ಅಂದಹಾಗೆ ಬಸ್ ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಎಲ್ಲರೂ ಈಗ ಸುರಕ್ಷಿತ, ಸುರಕ್ಷಿತ! ಸದ್ಯಕ್ಕೆ, ಸಾರಿಗೆ ಬಸ್ ನ ವ್ಹೀಲ್‌ ಸಡಿಲಗೊಂಡು ನಿಂತಿರುವ ಬಸ್ ನ ವಿಡಿಯೋ ವೈರಲ್ ಆಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:38 pm, Mon, 26 December 22

ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?
ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?
Daily horoscope: ರವಿ ಮಿಥುನ ರಾಶಿಯಲ್ಲಿ, ಚಂದ್ರ ವೃಷಭ ರಾಶಿಯಲ್ಲಿ ಸಂಚಾರ
Daily horoscope: ರವಿ ಮಿಥುನ ರಾಶಿಯಲ್ಲಿ, ಚಂದ್ರ ವೃಷಭ ರಾಶಿಯಲ್ಲಿ ಸಂಚಾರ
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ