AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಿರು ಸಾಗಣೆಯ ದುಷ್ಪರಿಣಾಮ: ವಿಚಿತ್ರ ಪರಿಸ್ಥಿತಿಯಲ್ಲಿ ಚಿತ್ರದುರ್ಗ ತಾಲೂಕಿನ ಗ್ರಾಮಸ್ಥರು, ಲಾರಿ ಮಾಲೀಕರು! ಪರಿಹಾರವೇನು?

ಚಿತ್ರದುರ್ಗ ತಾಲೂಕಿನ ಬಹುತೇಕ ಗ್ರಾಮಗಳ ಜನರು ಅದಿರು ಧೂಳಿನಿಂದ ರೋಗಕ್ಕೆ ತುತ್ತಾಗುತ್ತಿದ್ದಾರೆ. ಜಮೀನುಗಳಲ್ಲಿನ ಬೆಳೆಗಳೂ ಹಾಳಾಗುತ್ತಿವೆ. ಜನರ ಬದುಕು ಬರ್ಬಾದಾಗಿ ಹೋಗಿದೆ ಅಂತಾರೆ. ಈ ಮಧ್ಯೆ ಅದೇ ಗ್ರಾಮಗಳಲ್ಲಿ ಅನೇಕ ಜನರು ತಾವೂ ಅದಿರು ಸಾಗಣೆ ಮಾಡಿಯಾದ್ರೂ ಬದುಕು ಕಟ್ಟಿಕೊಳುತ್ತೇವೆ. 52 ಲಾರಿ ಕೊಂಡಿದ್ದೇವೆ. ಅದಿರು ಸಾಗಣೆಗೆ ಅವಕಾಶ ಕೊಡಿ ಎನ್ನುತ್ತಿದ್ದಾರೆ. ಆದ್ರೆ, ಗಣಿ ಕಂಪನಿಗಳವರು ಸ್ಥಳೀಯರು ಲಾರಿಗಳಿಗೆ ಅವಕಾಶ ನೀಡುತ್ತಿಲ್ಲ. ಇದಕ್ಕೆ ಪರಿಹಾರವೇನು?

ಅದಿರು ಸಾಗಣೆಯ ದುಷ್ಪರಿಣಾಮ: ವಿಚಿತ್ರ ಪರಿಸ್ಥಿತಿಯಲ್ಲಿ ಚಿತ್ರದುರ್ಗ ತಾಲೂಕಿನ ಗ್ರಾಮಸ್ಥರು, ಲಾರಿ ಮಾಲೀಕರು! ಪರಿಹಾರವೇನು?
ಅದಿರು ಸಾಗಣೆ: ವಿಚಿತ್ರ ಪರಿಸ್ಥಿತಿಯಲ್ಲಿ ಚಿತ್ರದುರ್ಗ ತಾಲೂಕಿನ ಗ್ರಾಮಸ್ಥರು
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಸಾಧು ಶ್ರೀನಾಥ್​

Updated on: Mar 14, 2024 | 10:54 AM

ಅದಿರು ಗಣಿಗಾರಿಕೆ (Ore) ಎಂಬುದು ಪರಿಸರದ ಮೇಲೆ ಭಾರೀ ದುಷ್ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲ, ಗಣಿ ಲಾರಿಗಳ (Ore Transportation) ಓಡಾಟದ ಪರಿಣಾಮ ಜನ ಜೀವನಕ್ಕೂ ಸಂಕಟ ತಂದೊಡ್ಡಿದೆ. ಆದ್ರೂ, ಯಾರೊಬ್ಬರೂ ಹೇಳೋರಿಲ್ಲ, ಕೇಳೋರಿಲ್ಲ. ಈ ಕುರಿತು ವರದಿ ಇಲ್ಲಿದೆ ನೋಡಿ. ಗಣಿ ಲಾರಿಗಳ ಧೂಳಿನಿಂದ ಜಮೀನುಗಳಲ್ಲಿ ಬೆಳೆದ ಬೆಳೆ ಹಾಳು. ಪರಿಸರ ಪೂರ್ಣ ಧೂಳುಮಯ, ಎಲ್ನೋಡಿದ್ರೂ ಕೆಂಪೇ ಕೆಂಪು. ಜನಜೀವನ ಮತ್ತು ಆರೋಗ್ಯದ ಮೇಲೂ ಭಾರೀ ದುಷ್ಪರಿಣಾಮ ಬೀರಿದೆ ಎಂದು ಜನರ ಆಕ್ರೋಶ. ಹೌದು, ಕೋಟೆನಾಡು ಚಿತ್ರದುರ್ಗ (Chitradurga) ತಾಲೂಕಿನ ಭೀಮಸಮುದ್ರ ಗ್ರಾಮದ ಆಸುಪಾಸಿನಲ್ಲೇ ಪ್ರತಿಷ್ಠಿತ ಮೂರು ಅದಿರು ಗಣಿಗಳಿವೆ. ನಿತ್ಯ ನೂರಾರು ಅದಿರು ಸಾಗಣೆ ಲಾರಿಗಳು (Lorry Owners) ಓಡಾಡುತ್ತವೆ.

ಹೀಗಾಗಿ, ಭೀಮಸಮುದ್ರ, ಡಿ. ಮದಕರಿಪುರ ಸೇರಿದಂತೆ ಬಹುತೇಕ ಗ್ರಾಮಗಳ ಜನರು ಅದಿರು ಧೂಳಿನಿಂದ ಇಲ್ಲದ ರೋಗಕ್ಕೆ ತುತ್ತಾಗುತ್ತಿದ್ದಾರೆ. ಅಲ್ಲದೆ ಜಮೀನುಗಳಲ್ಲಿನ ಬೆಳೆಗಳೂ ಸಂಪೂರ್ಣ ಕೆಂಪಾಗಿ ಹಾಳಾಗುತ್ತಲೇ ಇವೆ. ಈ ಭಾಗದ ಜನರ ಬದುಕೇ ಬರ್ಬಾದಾಗಿ ಹೋಗಿದೆ ಅಂತಾರೆ ಇವ್ರು.

Also Read: ಇಲ್ಲಿ ಸರಿ-ತಪ್ಪು ಯಾರದ್ದು!? ಕಾಲಿಂದ ಒದ್ದು ಅಂಬುಲೆನ್ಸ್ ಚಾಲಕನ ಮೇಲೆ ಬೆಂಗಳೂರು ದಂಪತಿ ಹಲ್ಲೆ‌! ಬಂಧನ, ಬಿಡುಗಡೆ

ಇನ್ನು ಭೀಮಸಮುದ್ರ, ಡಿ.ಮದಕರಿಪುರ ಮತ್ತು ಇತರೆ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಈ ಬಗ್ಗೆ ದೂರು ನೀಡಿದ್ದಾರೆ. ಅಲ್ಲದೆ ಅನೇಕ ಗ್ರಾಮದ ಜನರು ಸಹ ಅದಿರು ಸಾಗಣೆ ಮಾಡಿಯಾದ್ರೂ ಬದುಕು ಕಟ್ಟಿಕೊಳ್ಳೋಣ ಎಂದು ಲಾರಿ ಕೊಂಡುಕೊಂಡಿದ್ದೇವೆ. ಸುಮಾರು 52ಕ್ಕೂ ಹೆಚ್ಚು ಕುಟುಂಬಸ್ಥರು ಲಾರಿ ಕೊಂಡಿದ್ದೇವೆ. ಆದ್ರೆ, ಗಣಿ ಕಂಪನಿಗಳವರು ಮಾತ್ರ ಸ್ಥಳೀಯರು ಲಾರಿಗಳಿಗೆ ಅವಕಾಶ ನೀಡುತ್ತಿಲ್ಲ. ಹೀಗಾಗಿ. ಅದಿರು ಸಾಗಣೆಗಾದರೂ ಅವಕಾಶ ನೀಡಿದರೆ ಬದುಕು ನಡೆಯುತ್ತದೆ.

ಒಟ್ಟಾರೆಯಾಗಿ ಕೋಟೆನಾಡಿನಲ್ಲಿ ಗಣಿಗಾರಿಕೆ ಪರಿಸರ, ಕೃಷಿ ಮತ್ತು ಜನಜೀವನಕ್ಕೆ ಕಂಟಕವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಗಣಿ ಲಾರಿಗಳ ದುಷ್ಪರಿಣಾಮ ತಡೆಯಬೇಕು. ಅಂತೆಯೇ ಸ್ಥಳೀಯರಿಗೆ ಲಾರಿಗಳ ಮೂಲಕ ಅದಿರು ಸಾಗಣೆಗೆ ಅವಕಾಶ ಕಲ್ಪಿಸಬೇಕೆಂಬುದು ಗ್ರಾಮೀಣ ಜನರ ಆಗ್ರಹವಾಗಿದೆ. ಈ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತ, ಗಣಿ ಕಂಪನಿಗಳು ಯಾವ ತೀರ್ಮಾನ ಕೈಗೊಳ್ಳಲಿದ್ದಾರೆಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು