AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಿರು ಸಾಗಣೆಯ ದುಷ್ಪರಿಣಾಮ: ವಿಚಿತ್ರ ಪರಿಸ್ಥಿತಿಯಲ್ಲಿ ಚಿತ್ರದುರ್ಗ ತಾಲೂಕಿನ ಗ್ರಾಮಸ್ಥರು, ಲಾರಿ ಮಾಲೀಕರು! ಪರಿಹಾರವೇನು?

ಚಿತ್ರದುರ್ಗ ತಾಲೂಕಿನ ಬಹುತೇಕ ಗ್ರಾಮಗಳ ಜನರು ಅದಿರು ಧೂಳಿನಿಂದ ರೋಗಕ್ಕೆ ತುತ್ತಾಗುತ್ತಿದ್ದಾರೆ. ಜಮೀನುಗಳಲ್ಲಿನ ಬೆಳೆಗಳೂ ಹಾಳಾಗುತ್ತಿವೆ. ಜನರ ಬದುಕು ಬರ್ಬಾದಾಗಿ ಹೋಗಿದೆ ಅಂತಾರೆ. ಈ ಮಧ್ಯೆ ಅದೇ ಗ್ರಾಮಗಳಲ್ಲಿ ಅನೇಕ ಜನರು ತಾವೂ ಅದಿರು ಸಾಗಣೆ ಮಾಡಿಯಾದ್ರೂ ಬದುಕು ಕಟ್ಟಿಕೊಳುತ್ತೇವೆ. 52 ಲಾರಿ ಕೊಂಡಿದ್ದೇವೆ. ಅದಿರು ಸಾಗಣೆಗೆ ಅವಕಾಶ ಕೊಡಿ ಎನ್ನುತ್ತಿದ್ದಾರೆ. ಆದ್ರೆ, ಗಣಿ ಕಂಪನಿಗಳವರು ಸ್ಥಳೀಯರು ಲಾರಿಗಳಿಗೆ ಅವಕಾಶ ನೀಡುತ್ತಿಲ್ಲ. ಇದಕ್ಕೆ ಪರಿಹಾರವೇನು?

ಅದಿರು ಸಾಗಣೆಯ ದುಷ್ಪರಿಣಾಮ: ವಿಚಿತ್ರ ಪರಿಸ್ಥಿತಿಯಲ್ಲಿ ಚಿತ್ರದುರ್ಗ ತಾಲೂಕಿನ ಗ್ರಾಮಸ್ಥರು, ಲಾರಿ ಮಾಲೀಕರು! ಪರಿಹಾರವೇನು?
ಅದಿರು ಸಾಗಣೆ: ವಿಚಿತ್ರ ಪರಿಸ್ಥಿತಿಯಲ್ಲಿ ಚಿತ್ರದುರ್ಗ ತಾಲೂಕಿನ ಗ್ರಾಮಸ್ಥರು
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಸಾಧು ಶ್ರೀನಾಥ್​

Updated on: Mar 14, 2024 | 10:54 AM

ಅದಿರು ಗಣಿಗಾರಿಕೆ (Ore) ಎಂಬುದು ಪರಿಸರದ ಮೇಲೆ ಭಾರೀ ದುಷ್ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲ, ಗಣಿ ಲಾರಿಗಳ (Ore Transportation) ಓಡಾಟದ ಪರಿಣಾಮ ಜನ ಜೀವನಕ್ಕೂ ಸಂಕಟ ತಂದೊಡ್ಡಿದೆ. ಆದ್ರೂ, ಯಾರೊಬ್ಬರೂ ಹೇಳೋರಿಲ್ಲ, ಕೇಳೋರಿಲ್ಲ. ಈ ಕುರಿತು ವರದಿ ಇಲ್ಲಿದೆ ನೋಡಿ. ಗಣಿ ಲಾರಿಗಳ ಧೂಳಿನಿಂದ ಜಮೀನುಗಳಲ್ಲಿ ಬೆಳೆದ ಬೆಳೆ ಹಾಳು. ಪರಿಸರ ಪೂರ್ಣ ಧೂಳುಮಯ, ಎಲ್ನೋಡಿದ್ರೂ ಕೆಂಪೇ ಕೆಂಪು. ಜನಜೀವನ ಮತ್ತು ಆರೋಗ್ಯದ ಮೇಲೂ ಭಾರೀ ದುಷ್ಪರಿಣಾಮ ಬೀರಿದೆ ಎಂದು ಜನರ ಆಕ್ರೋಶ. ಹೌದು, ಕೋಟೆನಾಡು ಚಿತ್ರದುರ್ಗ (Chitradurga) ತಾಲೂಕಿನ ಭೀಮಸಮುದ್ರ ಗ್ರಾಮದ ಆಸುಪಾಸಿನಲ್ಲೇ ಪ್ರತಿಷ್ಠಿತ ಮೂರು ಅದಿರು ಗಣಿಗಳಿವೆ. ನಿತ್ಯ ನೂರಾರು ಅದಿರು ಸಾಗಣೆ ಲಾರಿಗಳು (Lorry Owners) ಓಡಾಡುತ್ತವೆ.

ಹೀಗಾಗಿ, ಭೀಮಸಮುದ್ರ, ಡಿ. ಮದಕರಿಪುರ ಸೇರಿದಂತೆ ಬಹುತೇಕ ಗ್ರಾಮಗಳ ಜನರು ಅದಿರು ಧೂಳಿನಿಂದ ಇಲ್ಲದ ರೋಗಕ್ಕೆ ತುತ್ತಾಗುತ್ತಿದ್ದಾರೆ. ಅಲ್ಲದೆ ಜಮೀನುಗಳಲ್ಲಿನ ಬೆಳೆಗಳೂ ಸಂಪೂರ್ಣ ಕೆಂಪಾಗಿ ಹಾಳಾಗುತ್ತಲೇ ಇವೆ. ಈ ಭಾಗದ ಜನರ ಬದುಕೇ ಬರ್ಬಾದಾಗಿ ಹೋಗಿದೆ ಅಂತಾರೆ ಇವ್ರು.

Also Read: ಇಲ್ಲಿ ಸರಿ-ತಪ್ಪು ಯಾರದ್ದು!? ಕಾಲಿಂದ ಒದ್ದು ಅಂಬುಲೆನ್ಸ್ ಚಾಲಕನ ಮೇಲೆ ಬೆಂಗಳೂರು ದಂಪತಿ ಹಲ್ಲೆ‌! ಬಂಧನ, ಬಿಡುಗಡೆ

ಇನ್ನು ಭೀಮಸಮುದ್ರ, ಡಿ.ಮದಕರಿಪುರ ಮತ್ತು ಇತರೆ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಈ ಬಗ್ಗೆ ದೂರು ನೀಡಿದ್ದಾರೆ. ಅಲ್ಲದೆ ಅನೇಕ ಗ್ರಾಮದ ಜನರು ಸಹ ಅದಿರು ಸಾಗಣೆ ಮಾಡಿಯಾದ್ರೂ ಬದುಕು ಕಟ್ಟಿಕೊಳ್ಳೋಣ ಎಂದು ಲಾರಿ ಕೊಂಡುಕೊಂಡಿದ್ದೇವೆ. ಸುಮಾರು 52ಕ್ಕೂ ಹೆಚ್ಚು ಕುಟುಂಬಸ್ಥರು ಲಾರಿ ಕೊಂಡಿದ್ದೇವೆ. ಆದ್ರೆ, ಗಣಿ ಕಂಪನಿಗಳವರು ಮಾತ್ರ ಸ್ಥಳೀಯರು ಲಾರಿಗಳಿಗೆ ಅವಕಾಶ ನೀಡುತ್ತಿಲ್ಲ. ಹೀಗಾಗಿ. ಅದಿರು ಸಾಗಣೆಗಾದರೂ ಅವಕಾಶ ನೀಡಿದರೆ ಬದುಕು ನಡೆಯುತ್ತದೆ.

ಒಟ್ಟಾರೆಯಾಗಿ ಕೋಟೆನಾಡಿನಲ್ಲಿ ಗಣಿಗಾರಿಕೆ ಪರಿಸರ, ಕೃಷಿ ಮತ್ತು ಜನಜೀವನಕ್ಕೆ ಕಂಟಕವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಗಣಿ ಲಾರಿಗಳ ದುಷ್ಪರಿಣಾಮ ತಡೆಯಬೇಕು. ಅಂತೆಯೇ ಸ್ಥಳೀಯರಿಗೆ ಲಾರಿಗಳ ಮೂಲಕ ಅದಿರು ಸಾಗಣೆಗೆ ಅವಕಾಶ ಕಲ್ಪಿಸಬೇಕೆಂಬುದು ಗ್ರಾಮೀಣ ಜನರ ಆಗ್ರಹವಾಗಿದೆ. ಈ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತ, ಗಣಿ ಕಂಪನಿಗಳು ಯಾವ ತೀರ್ಮಾನ ಕೈಗೊಳ್ಳಲಿದ್ದಾರೆಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ