AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಚುರಿಟಿ ಹಣ ಕೇಳಲು ಹೋದ‌ ಯುವಕನನ್ನು ಕೂಡಿ ಹಾಕಿದ ಮ್ಯಾನೇಜರ್; ರಾತ್ರಿ 9 ರವರೆಗೆ ಬ್ಯಾಂಕನಲ್ಲೇ ಯುವಕ ಬಂಧಿ

ಸಹಾರಾ ಇಂಡಿಯಾ ಬ್ಯಾಂಕ್ ಮ್ಯಾನೇಜರ್ ತಿರುಪತಿ, ಯುವಕ ವಿಕಾಸ್​ ಮೇಲೆ ದರ್ಪ ತೋರಿದ್ದು, ಬ್ಯಾಂಕಿನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾರೆ. ನಿನ್ನೆ ಸಂಜೆ 5 ರಿಂದ ರಾತ್ರಿ 9ರವರೆಗೆ ಬ್ಯಾಂಕಲ್ಲೇ ವಿಕಾಸ್ ಬಂಧಿಯಾಗಿದ್ದಾನೆ.

ಮೆಚುರಿಟಿ ಹಣ ಕೇಳಲು ಹೋದ‌ ಯುವಕನನ್ನು ಕೂಡಿ ಹಾಕಿದ ಮ್ಯಾನೇಜರ್; ರಾತ್ರಿ 9 ರವರೆಗೆ ಬ್ಯಾಂಕನಲ್ಲೇ ಯುವಕ ಬಂಧಿ
ಬ್ಯಾಂಕ್ ಮ್ಯಾನೇಜರ್ ತಿರುಪತಿ
TV9 Web
| Edited By: |

Updated on:Oct 24, 2021 | 8:00 AM

Share

ಚಿತ್ರದುರ್ಗ: ಮೆಚುರಿಟಿ ಹಣ ಕೇಳಲು ಹೋದ‌ ಯುವಕನನ್ನು ಬ್ಯಾಂಕ್ ಒಳಗೆ ಕೂಡಿ ಹಾಕಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಸಹಾರಾ ಇಂಡಿಯಾ ಬ್ಯಾಂಕ್ ಮ್ಯಾನೇಜರ್ ತಿರುಪತಿ, ಯುವಕ ವಿಕಾಸ್​ ಮೇಲೆ ದರ್ಪ ತೋರಿದ್ದು, ಬ್ಯಾಂಕಿನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾರೆ. ನಿನ್ನೆ ಸಂಜೆ 5 ರಿಂದ ರಾತ್ರಿ 9ರವರೆಗೆ ಬ್ಯಾಂಕಲ್ಲೇ ವಿಕಾಸ್ ಬಂಧಿಯಾಗಿದ್ದಾನೆ.

ರಾತ್ರಿ ನಗರ ಪೊಲೀಸರು ಸಹಾರಾ ಇಂಡಿಯಾ ಬ್ಯಾಂಕ್​ಗೆ ಬಂದ ಮೇಲೆ ವಿಕಾಸ್​ನನ್ನು ಬಿಡುಗಡೆ ಮಾಡಲಾಗಿದೆ. ಆದರೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮ್ಯಾನೇಜರ್ ತಿರುಪತಿ ಹೇಳುವುದೇ ಬೇರೆ. ಬ್ಯಾಂಕಿನ ವಹಿವಾಟು ವಿಚಾರ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಕೋರ್ಟಿನಲ್ಲಿ ಪ್ರಕರಣ ಇತ್ಯರ್ಥ ಬಳಿಕ ಮೆಚುರಿಟಿ ಹಣ ನೀಡುತ್ತೇವೆ. ಈ ಬಗ್ಗೆ ಮಾಹಿತಿ ನೀಡಿದರೂ ವಿಕಾಸ್ ಹಠ ಹಿಡಿದು ಕುಳಿತರು. ಹೀಗಾಗಿ ಬ್ಯಾಂಕ್ ಸುರಕ್ಷತೆ ದೃಷ್ಟಿಯಿಂದ ಬೀಗ ಹಾಕಿದೇನೆ ಎಂದು ತಿಳಿಸಿದ್ದಾರೆ. ಚಿತ್ರದುರ್ಗ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಂಗಳೂರಿನ ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ ನಿಗದಿತ ಸಮಯಕ್ಕಿಂತ ಹೆಚ್ಚು ತೆರೆಯಲಾಗಿದ್ದ ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಮಂಗಳೂರಿನ ಎಂಜಿ ರಸ್ತೆಯಲ್ಲಿರುವ ಓನೆಕ್ಸ್ ಪಬ್​ನಲ್ಲಿ ಜೋರಾಗಿ ಧ್ವನಿವರ್ಧಕ ಬಳಸಿದ್ದು, ಅಕ್ಕಪಕ್ಕದವರಿಗೆ ಕಿರಿಕಿರಿ ಉಂಟುಮಾಡಿದೆ. ಅಲ್ಲದೇ ಪಬ್​ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುವುದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಮತ್ತು ದೇವಸ್ಥಾನಕ್ಕೆ ಹೋಗಿ ಬರುವ ದಾರಿಯಲ್ಲಿ ಕಿರಿಕಿರಿ ಉಂಟಾಗುತ್ತಿದೆ. ಹೀಗಾಗಿ ಸಾರ್ವಜನಿಕರು ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ಪಬ್ ಮೇಲೆ ದಾಳಿ ಮಾಡಿದ್ದಾರೆ.

ಮಂಗಳೂರು ಸಿಸಿಬಿ ಇನ್ಸ್​ಪೆಕ್ಟರ್​ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆಸಿದ್ದು, ದಾಳಿ ವೇಳೆ ಧ್ವನಿವರ್ಧಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಅಬಕಾರಿ ಕಾಯ್ದೆ, ಕೆಪಿ ಕಾಯ್ದೆ, ಎಪಿಡೆಮಿಕ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 ಇದನ್ನೂ ಓದಿ: ಅಮರಿಂದರ್​ ಸಿಂಗ್​​ ಪಾಕ್​ ಗೆಳತಿ ಅರೂಸಾ ಅಲಂಗೆ ಐಎಸ್​ಐ ಲಿಂಕ್​ ಆರೋಪ; ಫೋಟೋ ಮೂಲಕ ಕಾಂಗ್ರೆಸ್​ಗೆ ತಿರುಗೇಟು ಕೊಟ್ಟ ಕ್ಯಾಪ್ಟನ್​

ವಿಜಯಪುರ: ಯುವಕನ ಕೊಲೆ; ಭೀಮಾತೀರದಲ್ಲಿ ಕೇಳಿಬಂತು ಮರ್ಯಾದೆ ಹತ್ಯೆ ಆರೋಪ

Published On - 7:58 am, Sun, 24 October 21

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?