AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಚುರಿಟಿ ಹಣ ಕೇಳಲು ಹೋದ‌ ಯುವಕನನ್ನು ಕೂಡಿ ಹಾಕಿದ ಮ್ಯಾನೇಜರ್; ರಾತ್ರಿ 9 ರವರೆಗೆ ಬ್ಯಾಂಕನಲ್ಲೇ ಯುವಕ ಬಂಧಿ

ಸಹಾರಾ ಇಂಡಿಯಾ ಬ್ಯಾಂಕ್ ಮ್ಯಾನೇಜರ್ ತಿರುಪತಿ, ಯುವಕ ವಿಕಾಸ್​ ಮೇಲೆ ದರ್ಪ ತೋರಿದ್ದು, ಬ್ಯಾಂಕಿನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾರೆ. ನಿನ್ನೆ ಸಂಜೆ 5 ರಿಂದ ರಾತ್ರಿ 9ರವರೆಗೆ ಬ್ಯಾಂಕಲ್ಲೇ ವಿಕಾಸ್ ಬಂಧಿಯಾಗಿದ್ದಾನೆ.

ಮೆಚುರಿಟಿ ಹಣ ಕೇಳಲು ಹೋದ‌ ಯುವಕನನ್ನು ಕೂಡಿ ಹಾಕಿದ ಮ್ಯಾನೇಜರ್; ರಾತ್ರಿ 9 ರವರೆಗೆ ಬ್ಯಾಂಕನಲ್ಲೇ ಯುವಕ ಬಂಧಿ
ಬ್ಯಾಂಕ್ ಮ್ಯಾನೇಜರ್ ತಿರುಪತಿ
TV9 Web
| Edited By: |

Updated on:Oct 24, 2021 | 8:00 AM

Share

ಚಿತ್ರದುರ್ಗ: ಮೆಚುರಿಟಿ ಹಣ ಕೇಳಲು ಹೋದ‌ ಯುವಕನನ್ನು ಬ್ಯಾಂಕ್ ಒಳಗೆ ಕೂಡಿ ಹಾಕಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಸಹಾರಾ ಇಂಡಿಯಾ ಬ್ಯಾಂಕ್ ಮ್ಯಾನೇಜರ್ ತಿರುಪತಿ, ಯುವಕ ವಿಕಾಸ್​ ಮೇಲೆ ದರ್ಪ ತೋರಿದ್ದು, ಬ್ಯಾಂಕಿನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾರೆ. ನಿನ್ನೆ ಸಂಜೆ 5 ರಿಂದ ರಾತ್ರಿ 9ರವರೆಗೆ ಬ್ಯಾಂಕಲ್ಲೇ ವಿಕಾಸ್ ಬಂಧಿಯಾಗಿದ್ದಾನೆ.

ರಾತ್ರಿ ನಗರ ಪೊಲೀಸರು ಸಹಾರಾ ಇಂಡಿಯಾ ಬ್ಯಾಂಕ್​ಗೆ ಬಂದ ಮೇಲೆ ವಿಕಾಸ್​ನನ್ನು ಬಿಡುಗಡೆ ಮಾಡಲಾಗಿದೆ. ಆದರೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮ್ಯಾನೇಜರ್ ತಿರುಪತಿ ಹೇಳುವುದೇ ಬೇರೆ. ಬ್ಯಾಂಕಿನ ವಹಿವಾಟು ವಿಚಾರ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಕೋರ್ಟಿನಲ್ಲಿ ಪ್ರಕರಣ ಇತ್ಯರ್ಥ ಬಳಿಕ ಮೆಚುರಿಟಿ ಹಣ ನೀಡುತ್ತೇವೆ. ಈ ಬಗ್ಗೆ ಮಾಹಿತಿ ನೀಡಿದರೂ ವಿಕಾಸ್ ಹಠ ಹಿಡಿದು ಕುಳಿತರು. ಹೀಗಾಗಿ ಬ್ಯಾಂಕ್ ಸುರಕ್ಷತೆ ದೃಷ್ಟಿಯಿಂದ ಬೀಗ ಹಾಕಿದೇನೆ ಎಂದು ತಿಳಿಸಿದ್ದಾರೆ. ಚಿತ್ರದುರ್ಗ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಂಗಳೂರಿನ ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ ನಿಗದಿತ ಸಮಯಕ್ಕಿಂತ ಹೆಚ್ಚು ತೆರೆಯಲಾಗಿದ್ದ ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಮಂಗಳೂರಿನ ಎಂಜಿ ರಸ್ತೆಯಲ್ಲಿರುವ ಓನೆಕ್ಸ್ ಪಬ್​ನಲ್ಲಿ ಜೋರಾಗಿ ಧ್ವನಿವರ್ಧಕ ಬಳಸಿದ್ದು, ಅಕ್ಕಪಕ್ಕದವರಿಗೆ ಕಿರಿಕಿರಿ ಉಂಟುಮಾಡಿದೆ. ಅಲ್ಲದೇ ಪಬ್​ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುವುದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಮತ್ತು ದೇವಸ್ಥಾನಕ್ಕೆ ಹೋಗಿ ಬರುವ ದಾರಿಯಲ್ಲಿ ಕಿರಿಕಿರಿ ಉಂಟಾಗುತ್ತಿದೆ. ಹೀಗಾಗಿ ಸಾರ್ವಜನಿಕರು ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ಪಬ್ ಮೇಲೆ ದಾಳಿ ಮಾಡಿದ್ದಾರೆ.

ಮಂಗಳೂರು ಸಿಸಿಬಿ ಇನ್ಸ್​ಪೆಕ್ಟರ್​ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆಸಿದ್ದು, ದಾಳಿ ವೇಳೆ ಧ್ವನಿವರ್ಧಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಅಬಕಾರಿ ಕಾಯ್ದೆ, ಕೆಪಿ ಕಾಯ್ದೆ, ಎಪಿಡೆಮಿಕ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 ಇದನ್ನೂ ಓದಿ: ಅಮರಿಂದರ್​ ಸಿಂಗ್​​ ಪಾಕ್​ ಗೆಳತಿ ಅರೂಸಾ ಅಲಂಗೆ ಐಎಸ್​ಐ ಲಿಂಕ್​ ಆರೋಪ; ಫೋಟೋ ಮೂಲಕ ಕಾಂಗ್ರೆಸ್​ಗೆ ತಿರುಗೇಟು ಕೊಟ್ಟ ಕ್ಯಾಪ್ಟನ್​

ವಿಜಯಪುರ: ಯುವಕನ ಕೊಲೆ; ಭೀಮಾತೀರದಲ್ಲಿ ಕೇಳಿಬಂತು ಮರ್ಯಾದೆ ಹತ್ಯೆ ಆರೋಪ

Published On - 7:58 am, Sun, 24 October 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ