ಜನಪ್ರಧಿನಿಧಿಗಳ ಹಗ್ಗಜಗ್ಗಾಟದಿಂದ ಭದ್ರಾ ಯೋಜನೆ ಬಹುತೇಕ ಸ್ಥಗಿತ: ನನಸಾಗುತ್ತಾ ಕೋಟೆನಾಡಿನ ಜನರ ದಶಕಗಳ ಕನಸು?

ಚಿತ್ರದುರ್ಗ ಜಿಲ್ಲೆಯ ಜನರ ಮೂರು ದಶಕಗಳ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಯಾಗಿದೆ. ಆದರೆ ಒಂದೂವರೆ ದಶಕ ಕಳೆದರೂ ಕಾಮಗಾರಿ ಮಾತ್ರ ಪುರ್ಣಗೊಂಡಿಲ್ಲ. ಬದಲಾಗಿ ಇತ್ತೀಚೆಗೆ ಅನುದಾನ ಕೊರತೆ, ಬಿಲ್ ಪೆಂಡಿಂಗ್ ಕಾರಣಕ್ಕೆ ಬಹುತೇಕ ಕಾಮಗಾರಿ ಸ್ಥಗಿತಗೊಂಡಿದೆ. ಜನಪ್ರತಿನಿಧಿಗಳು ಮತ್ತು ಸರ್ಕಾರಗಳು ಪ್ರತಿಷ್ಠೆ ಬಿಟ್ಟು ಕೋಟೆನಾಡಿಗೆ ಭದ್ರೆ ಹರಿಸಲು ತ್ವರಿತಗತಿಯ ಕ್ರಮ ಕೈಗೊಳ್ಳಬೇಕಿದೆ.

ಜನಪ್ರಧಿನಿಧಿಗಳ ಹಗ್ಗಜಗ್ಗಾಟದಿಂದ ಭದ್ರಾ ಯೋಜನೆ ಬಹುತೇಕ ಸ್ಥಗಿತ: ನನಸಾಗುತ್ತಾ ಕೋಟೆನಾಡಿನ ಜನರ ದಶಕಗಳ ಕನಸು?
ಭದ್ರಾ ಮೇಲ್ದಂಡೆ ಯೋಜನೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Nov 01, 2023 | 8:35 PM

ಚಿತ್ರದುರ್ಗ, ನವೆಂಬರ್​​​​​​​ 01: ಭದ್ರಾ ಮೇಲ್ದಂಡೆ ಯೋಜನೆ (Bhadra project) ಕೋಟೆನಾಡಿನ ಜನರ ಬಹು ದಶಕಗಳ ಕನಸು. ಆದ್ರೆ, ಜನಪ್ರಧಿನಿಧಿಗಳ ಹಗ್ಗಜಗ್ಗಾಟದಿಂದಾಗಿ ಭದ್ರಾ ಯೋಜನೆ ಬಹುತೇಕ ಸ್ಥಗಿತಗೊಂಡಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಕಮಿಷನ್​ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದು ಬಯಲುಸೀಮೆಯ ಜನರ ಸ್ಥಿತಿ ಇಬ್ಬರ ನಡುವೆ ಕೂಸು ಬಡವಾಯಿತು ಎಂಬಂತಾಗಿದೆ. ಈ ಕುರಿತಾದ ಒಂದು ವರದಿ ಇಲ್ಲಿದೆ ಮುಂದೆ ಓದಿ.

ಚಿತ್ರದುರ್ಗ ಜಿಲ್ಲೆಯ ಜನರ ಮೂರು ದಶಕಗಳ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಯಾಗಿದೆ. ಆದರೆ ಒಂದೂವರೆ ದಶಕ ಕಳೆದರೂ ಕಾಮಗಾರಿ ಮಾತ್ರ ಪುರ್ಣಗೊಂಡಿಲ್ಲ. ಬದಲಾಗಿ ಇತ್ತೀಚೆಗೆ ಅನುದಾನ ಕೊರತೆ, ಬಿಲ್ ಪೆಂಡಿಂಗ್ ಕಾರಣಕ್ಕೆ ಬಹುತೇಕ ಕಾಮಗಾರಿ ಸ್ಥಗಿತಗೊಂಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಬಿಡುಗಡೆ ಆಗಬೇಕಿರುವ 1950 ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ಬಾಕಿ ಇರಿಸಿಕೊಂಡಿದೆ.

ಇದನ್ನೂ ಓದಿ: 30 ಟಿಎಂಸಿ ಸಂಗ್ರಹ ಸಾಮರ್ಥ್ಯದ ಆ ಜಲಾಶಯದಲ್ಲಿ 22 ಟಿಎಂಸಿ ನೀರಿದೆ, ಬರಗಾಲದ ರೈತಾಪಿ ವರ್ಗ ಫುಲ್ ಖುಷ್​!

ಕಮಿಷನ್ ಬಂದ ಬಳಿಕ ಹಣ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಕಮಿಷನ್ ಕಲೆಕ್ಷನ್ ಗಾಗಿ ಅಧಿಕಾರಿಗಳಿಗೆ ಕರೆ ಮಾಡುತ್ತಿದ್ದಾರೆಂದು ಚಿತ್ರದುರ್ಗದ ಬಿಜೆಪಿ ಸಂಸದ , ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ರಾಜ್ಯ ಸರ್ಕಾರ, ಸಚಿವರು ಮತ್ತು ಶಾಸಕರ ವಿರುದ್ಧ ಹೆಸರು ಪ್ರಸ್ತಾಪಿಸದೆ ಆರೋಪಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ನಾನಾ ತೊಡಕುಗಳು ಎದುರಾಗಿವೆ. ಒಂದು ಕಡೆ ಅನುದಾನದ ಕೊರತೆ. ಮತ್ತೊಂದು ಕಡೆ ಬಿಲ್ ಬಾಕಿ ಉಳಿದಿದ್ದು ಕಾಮಗಾರಿ ಸ್ಥಗಿತಗೊಂಡಿದೆ. ಅಬ್ಬಿನಹೊಳೆ ಬಳಿ ಭೂಸ್ವಾಧೀನ ಪ್ರಕ್ರಿಯೆಯೂ ಹಾಗೆ ಉಳಿದಿದೆ. ಭದ್ರಾ ಯೋಜನೆಗೆ ಹಣ ಬಿಡುಗಡೆಗೆ ಕಮಿಷನ್ ಕಲೆಕ್ಷನ್​ಗೆ ಡಿಮ್ಯಾಂಡ್ ಮಾಡುತ್ತಿದ್ದಾರೆಂಬ ಕೇಂದ್ರ ಸಚಿವ ಎ.ನಾರಾಯಣಸ್ವಾಮಿಗೆ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಮಂಗಳಮುಖಿ ಬದುಕಿಗೆ ಕಳ್ಳರಿಂದ ಕೊಳ್ಳಿ

ಕೇಂದ್ರ ಸರ್ಕಾರದ ಬಜೆಟ್​ನಲ್ಲಿ ಭದ್ರಾ ಯೋಜನೆಗೆ 5300 ಕೋಟಿ ರೂ. ಘೋಷಣೆ ಮಾಡಿದ್ದು ಮೊದಲು ಬಿಡುಗಡೆ ಮಾಡಿಸಲಿ. ನಾವು 2 ಸಾವಿರ ಕೋಟಿ ರೂ. ಹಣವಿಟ್ಟುಕೊಂಡಿದ್ದೇವೆ. ಒಂದು ವರ್ಷದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ಬಯಲುಸೀಮೆ ಚಿತ್ರದುರ್ಗಕ್ಕೆ ಹರಿದು ಬರಬೇಕಿರುವ ಭದ್ರಾ ಮೇಲ್ದಂಡೆ ಯೋಜನೆ ಅನುದಾನವಿಲ್ಲದೆ ಬಹುತೇಕ ಕಾಮಗಾರಿ ಸ್ಥಗಿತಗೊಂಡಿದೆ. ಬಿಜೆಪಿ ಸಂಸದ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನಡುವೆ ಆರೋಪ ಪ್ರತ್ಯಾರೋಪಗಳ ಸಮರ ಶುರುವಾಗಿದೆ. ಇಬ್ಬರ ನಡುವೆ ಕೂಸು ಬಡವಾಯಿತೆಂಬ ಸ್ಥಿತಿ ದುರ್ಗದ ಜನರಿಗೆ ಎದುರಾಗಿದೆ. ಹೀಗಾಗಿ, ಜನಪ್ರತಿನಿಧಿಗಳು ಮತ್ತು ಸರ್ಕಾರಗಳು ಪ್ರತಿಷ್ಠೆ ಬಿಟ್ಟು ಕೋಟೆನಾಡಿಗೆ ಭದ್ರೆ ಹರಿಸಲು ತ್ವರಿತಗತಿಯ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ