AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಡೋ ಯಾತ್ರೆಯಲ್ಲಿ ಮಕ್ಕಳ ದುರುಪಯೋಗ : ಮಕ್ಕಳ ಆಯೋಗಕ್ಕೆ 50 ಪುಟಗಳ ಉತ್ತರ ನೀಡಲಾಗಿದೆ-ಡಿಕೆ ಶಿವಕುಮಾರ್

ಭಾರತ ಜೋಡೋ ಯಾತ್ರೆಯಲ್ಲಿ ಮಕ್ಕಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಮಕ್ಕಳ ಆಯೋಗದ ನೋಟಿಸ್​ಗೆ ಪಕ್ಷದಿಂದ 50 ಪುಟಗಳ ಉತ್ತರ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಜೋಡೋ ಯಾತ್ರೆಯಲ್ಲಿ ಮಕ್ಕಳ ದುರುಪಯೋಗ : ಮಕ್ಕಳ ಆಯೋಗಕ್ಕೆ 50 ಪುಟಗಳ ಉತ್ತರ ನೀಡಲಾಗಿದೆ-ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ
TV9 Web
| Edited By: |

Updated on:Oct 11, 2022 | 4:26 PM

Share

ಚಿತ್ರದುರ್ಗ: ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ​ ನಡೆಯುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ (Bharat Jodo Yatra) ಮಕ್ಕಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಕ್ಕಳ ಆಯೋಗದವರು ನೋಟಿಸ್​ ನೀಡಿದ್ದರು. ನೋಟಿಸ್​ಗೆ ಪಕ್ಷದಿಂದ 50 ಪುಟಗಳ ಉತ್ತರ ನೀಡಲಾಗಿದೆ ಎಂದು ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar)​ ಹೇಳಿದ್ದಾರೆ. ಸಾಣಿಕೆರೆ ಗ್ರಾಮದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಭಾರತ್​ ಜೋಡೋ ಯಾತ್ರೆಯಲ್ಲಿ ಪಕ್ಷ, ಜಾತಿ, ಧರ್ಮ ಇಲ್ಲ. ಮಕ್ಕಳೊಂದಿಗೆ ಬಂದು ಯಾರು ಬೇಕಾದರೂ ಭಾಗಿಯಾಗಹುದು ಎಂದು ಹೇಳಿದರು.

ಗಾಂಧಿ ಕುಟುಂಬದ ಮೊಮ್ಮಗನ ಯಾತ್ರೆಗೆ ಜನರು ಬರುತ್ತಿದ್ದಾರೆ. ರಾಜಕಾರಣಕ್ಕೆ ಮಕ್ಕಳನ್ನು ಬಳಸಿಕೊಳ್ಳುವ ಅಗತ್ಯ ಕಾಂಗ್ರೆಸ್​ಗಿಲ್ಲ. ಮಕ್ಕಳ ಅಭಿವೃದ್ಧಿಗಾಗಿ ಕಾಂಗ್ರೆಸ್​ ಹಲವು ಯೋಜನೆ ರೂಪಿಸಿದೆ. ರಾಜಕೀಯಕ್ಕಾಗಿ ಮಕ್ಕಳ ಆಯೋಗಕ್ಕೆ ದೂರು ದಾಖಲಿಸಿದ್ದಾರೆ. ಜನರು ತೋರುವ ಪ್ರೀತಿ ಸಹಿಸದೇ ದೂರು ದಾಖಲಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಜನರು ನೋವು, ನಲಿವು ಹಂಚಿಕೊಳ್ಳುತ್ತಿದ್ದಾರೆ. ಕಾಡುಗೊಲ್ಲ ಸಮುದಾಯದವರು ಸಹ ರಾಹುಲ್ ಗಾಂಧಿ ಜೊತೆ ಇದ್ದಾರೆ. ಕೆಲ ನಿವೃತ್ತ ಸೈನಿಕರೂ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ನಿನ್ನೆ ಹಿರಿಯೂರು ಬಳಿ ಅಪಘಾತದಲ್ಲಿ ಕೈ ಕಾರ್ಯಕರ್ತ ರಮೇಶ ಸಾವಾಗಿತ್ತು. ಕುಟುಂಬಕ್ಕೆ 10 ಲಕ್ಷ ರೂಪಾಯಿಯನ್ನು ಪಕ್ಷದಿಂದ ನೀಡುತ್ತೇವೆ. ಯಾತ್ರೆ ಬಳಿಕ‌ ನಾನೇ ರಮೇಶ ಮನೆಗೆ ತೆರಳಿ ಪರಿಹಾರ ಹಣ ನೀಡುತ್ತೇವೆ.

ರಾಹುಲ್​ ಗಾಂಧಿಯವರು ನರೇಗಾ ಕೂಲಿಕಾರ್ಮಿಕರ ಸಮಸ್ಯೆ ಆಲಿಸಿದರು. ಅಂಗನವಾಡಿ, ಆಶಾ ಕಾರ್ಯಕರ್ತರ ಸಮಸ್ಯೆ ಆಲಿಸಿದರು. ಚಿಂದಿ ಹಾಯುವವರ ಸಮಸ್ಯೆ ಆಲಿಸಿದರು. ಸರ್ಕಾರದಿಂದ ಯಾವ ನೆರವು ಬೇಕೆಂದು ಚರ್ಚಿಸಿದರು. ಕಾಲಲ್ಲಿ ಬರೆದು ಶಿಕ್ಷಕಿಯಾದ ಲಕ್ಷ್ಮೀದೇವಿ ಜತೆಯೂ ಚರ್ಚೆ ಮಾಡಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶ ಒಗ್ಗೂಡಲಿದೆ. ಎಐಸಿಸಿ ಚುನಾವಣೆ ಹಿನ್ನೆಲೆ, ಯಾತ್ರೆಯಲ್ಲಿ ಪಾಲ್ಗೊಳ್ಳುವವರಿಗೆ ಪ್ರತ್ಯೇಕ ಮತದಾನಕ್ಕೆ ಅವಕಾಶ ನೀಡಲಾಗಿದೆ. ರಾಹುಲ್ ಗಾಂಧಿ ಸೇರಿ‌ ಇತರರಿಂದ ಪ್ರತ್ಯೇಕ ಕೇಂದ್ರದಲ್ಲಿ ಮತದಾನ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Tue, 11 October 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ