AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಹೂವಿನ ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಕಾಟ; ಅನ್ನದಾತನಿಗೆ ಮಹಾಮೋಸ, ಸಿಎಂಗೆ ದೂರು

ಹಬ್ಬ ಹುಣ್ಣಿಮೆ ಸಂದರ್ಭದಲ್ಲಿ ಹೂವಿಗೆ ಭಾರೀ ಡಿಮ್ಯಾಂಡ್ ಇದ್ದೇ ಇರುತ್ತದೆ. ಆದ್ರೆ, ಹೂವಿಗೆ ಡಿಮ್ಯಾಂಡ್ ಇರುವ ವೇಳೆಯೇ ಹೂವಿನ ಅಳತೆಯಲ್ಲಿ ಮಹಾ ಮೊಸ ನಡೆಯುತ್ತದೆ ಎಂದು ರೈತರು ಆರೋಪಿಸಿದ್ದಾರೆ. ಅಲ್ಲದೆ ಸಿಎಂಗೆ ಮನವಿಯನ್ನೂ ಸಲ್ಲಿಸಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ವರದಿ ಇಲ್ಲಿದೆ.

ಚಿತ್ರದುರ್ಗ ಹೂವಿನ ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಕಾಟ; ಅನ್ನದಾತನಿಗೆ ಮಹಾಮೋಸ, ಸಿಎಂಗೆ ದೂರು
ಚಿತ್ರದುರ್ಗ ಹೂವಿನ ಮಾರುಕಟ್ಟೆಯಲ್ಲಿ ರೈತರಿಗೆ ಮೋಸ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Aug 25, 2023 | 10:20 PM

Share

ಚಿತ್ರದುರ್ಗ, ಆ.25: ಕೋಟೆನಾಡು ಚಿತ್ರದುರ್ಗದಲ್ಲಿ ಬೆಳೆಯುವ ಹೂವಿಗೆ ಭಾರೀ ಡಿಮ್ಯಾಂಡ್​ಯಿದ್ದು, ಕಷ್ಟಪಟ್ಟು ಬೆಳೆದ ರೈತನಿಗೆ ಹೂವಿನ ಅಳತೆಯಲ್ಲಿ ಮೋಸವಾಗುತ್ತಿದ್ದು, ಹೂವಿನ ಮಾರುಕಟ್ಟೆಯಲ್ಲಿ (Flower  Market)ದಲ್ಲಾಳಿಗಳ ಕಾಟ, ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹೌದು, ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ, ದೊಡ್ಡಸಿದ್ದವ್ವನಹಳ್ಳಿ ಸೇರಿದಂತೆ ವಿವಿದೆಡೆ ನೂರಾರು ಎಕರೆ ಪ್ರದೇಶದಲ್ಲಿ ಸೇವಂತಿಗೆ, ಮಲ್ಲಿಗೆ ಸೇರಿದಂತೆ ವಿವಿಧ ಹೂಗಳನ್ನು ರೈತರು ಬೆಳೆಯುತ್ತಾರೆ. ಆದ್ರೆ, ಚಿತ್ರದುರ್ಗದ ಹೂವಿನ ಮಾರುಕಟ್ಟೆಗೆ ಹೂವು ತಂದ ಸಂದರ್ಭದಲ್ಲಿ ದಲ್ಲಾಳಿಗಳು, ವರ್ತಕರೂ ಹೂವಿನ ಅಳತೆಯಲ್ಲಿ ಮಹಾ ಮೋಸ ಮಾಡುತ್ತಿದ್ದಾರೆ.

ಹೂವು ಅಳೆಯುವ ವೇಳೆ ಮೋಸ

ಹೌದು, ಮಾರು ಹೂವು ಅಳೆಯುವ ವೇಳೆ ಎಂಟು, ಒಂಭತ್ತು ಅಡಿಯಷ್ಟು ಅಳೆದು ವಂಚಿಸುತ್ತಾರೆ. ಹೀಗಾಗಿ, ರೈತರು ಕಷ್ಟಪಟ್ಟು ಬೆಳೆದ ಹೂವಿನ ಬೆಳೆಗೆ ಸೂಕ್ತ ಬೆಲೆ ಸಿಗದೆ ಹೈರಾಣಾಗುವಂತಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಇನ್ನು ಶ್ರಾವಣ ಮಾಸ ಮತ್ತು ವಿವಿಧ ಹಬ್ಬದ ಸಂದರ್ಭಗಳಲ್ಲಿ ಹೂವಿಗೆ ಡಿಮ್ಯಾಂಡ್ ಇದ್ದೇ ಇರುತ್ತದೆ. ಈ ಸಲ ನಾಲ್ಕು ಕಾಸು ಲಾಭ ಮಾಡಿಕೊಳ್ಳಬಹುದೆಂಬ ಆಸೆಯಿಂದಿದ್ದ ರೈತನಿಗೆ ದಲ್ಲಾಳಿಗಳು, ವರ್ತಕರು ಸೇರಿ ವಂಚಿಸುತ್ತಾರೆ. ಈ ಬಗ್ಗೆ ಎಪಿಎಂಸಿ ಅಧಿಕಾರಿಗಳು, ತೂಕ ಮತ್ತು ಅಳತೆ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತಕ್ಕೆ ಅನೇಕ ಸಲ ದೂರು ನೀಡಿದ್ರೂ ಪ್ರಯೋಜನ ಆಗಲಿಲ್ಲ. ಅನೇಕ ಸಲ ಪ್ರತಿಭಟನೆ ಮಾಡಿದ್ರೂ ಪ್ರಯೋಜನ ಆಗಲಿಲ್ಲ.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ಸೇವಂತಿ ಹೂವಿಗೆ ಭಾರೀ ಬೇಡಿಕೆ; ರೈತರ ಮೊಗದಲ್ಲಿ ಮಂದಹಾಸ

ಇನ್ನು ಕುರಿತು ಮಾತನಾಡಿದ ರೈತ ಕಾಂತರಾಜ್ ‘ಎರಡು ದಿನದ ಹಿಂದೆ ಕೆಲ ಹೂವಿನ ಬೆಳೆಗಾರರು ಸೇರಿ ಬೆಂಗಳೂರಿಗೆ ಹೋಗಿ ಸಿಎಂ ಸಿದ್ಧರಾಮಯ್ಯ ಅವರಿಗೆ ಈ ಬಗ್ಗೆ ಮನವಿ ಕೊಟ್ಟು ಬಂದಿದ್ದೇವೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಿಎಂ ಕಚೇರಿಯಿಂದ ಅಧಿಕಾರಿಗಳಿಗೆ ಸೂಚನೆ ಕೂಡ ಬಂದಿದೆ. ಇನ್ನಾದ್ರೂ ರೈತರಿಗೆ ನ್ಯಾಯ ಸಿಗುತ್ತದೆಯೇ ನೋಡಬೇಕೆಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಮಾರುಕಟ್ಟೆಗೆ ಬಂದ ಹೂವಿನ ಬೆಳೆಗಾರರಿಗೆ ಅಳತೆಯಲ್ಲಿ ಮಹಾ ಮೋಸ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ, ಹೂವಿನ ಬೆಳೆಗಾರರು ನ್ಯಾಯಕ್ಕಾಗಿ ಸಿಎಂ ಸಿದ್ಧರಾಮಯ್ಯ ಮೊರೆ ಹೋಗಿದ್ದಾರೆ. ಸದ್ಯ ಸಿಎಂ ಕಚೇರಿಯಿಂದ ಕೃಷಿ ಉತ್ಪನ್ನ ಮಹಾಮಂಡಳಿಗೆ ಸೂಚನೆ ಹೋಗಿದ್ದು ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ