AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa: ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಯಾರೆಂಬ ತೀರ್ಮಾನ; ಯಡಿಯೂರಪ್ಪ

ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಮರಳಿದ ಬಳಿಕವಷ್ಟೇ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ನಿರ್ಧರಿಸಲಾಗುವುದು ಎಂದು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದರು.

Ganapathi Sharma
|

Updated on: Mar 20, 2023 | 5:32 PM

Share

ಹಿರಿಯೂರು: ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಮರಳಿದ ಬಳಿಕವಷ್ಟೇ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ನಿರ್ಧರಿಸಲಾಗುವುದು ಎಂದು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದರು. ಚುನಾವಣಾ ಪ್ರಚಾರ ಮತ್ತು ರೋಡ್​ಶೋದಲ್ಲಿ ಭಾಗವಹಿಸುವ ಸಲುವಾಗಿ ಚಿತ್ರದುರ್ಗದ ಹಿರಿಯೂರಿಗೆ (Hiriyur) ಆಗಮಿಸಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಬಿಜೆಪಿ ಪರ ಉತ್ತಮ ವಾತಾವರಣ ಇದೆ. 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ (BJP) ಗೆಲ್ಲಲಿದೆ. ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ನಂತರವಷ್ಟೇ ಮುಖ್ಯಮಂತ್ರಿ ಯಾರೆಂಬ ತೀರ್ಮಾನ ಆಗಲಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್​​ನಲ್ಲಿ ‘ನಾನೇ ಸಿಎಂ’ ಎಂಬುದಾಗಿ ಕೆಲವರು ಬೊಬ್ಬೆ ಹೊಡೆಯುತ್ತಿದ್ದಾರೆ. ಕೆಲವರು ಮುಂದಿನ ಸಿಎಂ ನಾವೇ ಎನ್ನುವುದರಲ್ಲಿ ಅರ್ಥವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯಗೆ ಬಿಎಸ್​​ವೈವೈ ಪರೋಕ್ಷ ಟಾಂಗ್ ಕೊಟ್ಟರು.

ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಬರಲಿದ್ದು ಅದ್ಭುತ ಕಾರ್ಯಕ್ರಮ ಆಗಲಿದೆ. ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ ಸರಿಸಮ ಅಲ್ಲ ಎಂದು ಅವರು ಹೇಳಿದ್ದಾರೆ. ಹಿರಿಯೂರು ಶಾಸಕಿ ಬಿಜೆಪಿ ತೊರೆಯುವ ವದಂತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಶಾಸಕಿ ಪೂರ್ಣಿಮಾ ನಮ್ಮ ಜತೆಗಿದ್ದಾರೆ ಎಂದರು. ಜತೆಗೆ ಪೂರ್ಣಿಮಾ ಹೆಗಲ ಮೇಲೆ ಕೈಹಾಕಿ‌ ಭರವಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ:  Belagavi: ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ 3,000 ರೂ. ನಿರುದ್ಯೋಗ ಭತ್ಯೆ; ರಾಹುಲ್ ಗಾಂಧಿ ಘೋಷಣೆ

ಹಿರಿಯೂರಿಗೆ ತೆರಳುವುದಕ್ಕೂ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನರೇಂದ್ರ ಮೋದಿ ಅವರಿಗೆ ಹೋಲಿಸಿದ್ದು ಸರಿಯಲ್ಲ ಎಂದು ಹೇಳಿದ್ದಾರೆ. ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಬಗ್ಗೆ ಲೇವಡಿ ಮಾಡಿರುವ ಬಿಎಸ್​​ವೈ, ಕಾಂಗ್ರೆಸ್​ಗೆ ಸರಿಯಾದ ನಾಯಕತ್ವವಿಲ್ಲದೆ 3 ರಾಜ್ಯಗಳಲ್ಲಿ ಸೋತಿದೆ. ಕರ್ನಾಟದಲ್ಲಿಯೂ ಅದೇ ಗತಿ ಆಗಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ಸಿಗೆ ಭವಿಷ್ಯವಿದೆ ಅಂತ ನನಗೆ ಅನಿಸುವುದಿಲ್ಲ. ಚುನಾವಣೆಯಲ್ಲಿ ಬಿಜೆಪಿ 140 ಸೀಟು ಗೆದ್ದರೆ ಕಾಂಗ್ರೆಸ್‌ನವರು ಎಲ್ಲಿದ್ದಾರೆ ಅಂತ ಹುಡುಕವ ಪರಿಸ್ಥಿತಿ ಬರಲಿದೆ. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ನೀರಿಕ್ಷೆಗೂ ಮೀರಿ ಜನ ಬೆಂಬಲ ನಮಗೆ ವ್ಯಕ್ತವಾಗುತ್ತಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ