Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೀಗ 82 ವರ್ಷ, ದೇವರು ಶಕ್ತಿ‌ಕೊಟ್ರೆ ಇನ್ನೊಂದು ವಿಧಾನಸಭೆ, ಲೋಕಸಭೆ ಚುನಾವಣೆ ಮಾಡ್ತೇನೆ:ಬಿಎಸ್​ವೈ

ಲೋಕಸಭಾ ಚುನಾವಣೆ ಹಿನ್ನಲೆ ಉಭಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದೆ. ಅದರಂತೆ ಇಂದು(ಏ.16) ಚಿತ್ರದುರ್ಗ(Chitradurga)ದಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಮುಖಂಡರ ಸಭೆಯಲ್ಲಿ ಬಿಎಸ್​ ಯಡಿಯೂರಪ್ಪ ಮಾತನಾಡಿ, ‘ಎಲ್ಲೆಡೆ ಮೋದಿ ಮೋದಿ ಘೋಷಣೆ ಕೇಳುತ್ತಿದ್ದು, ದೇವೇಗೌಡರು ಸಹ ರಾಜ್ಯದಲ್ಲಿ ಸಂಚರಿಸಿ ಮತಯಾಚನೆ‌ ಮಾಡುತ್ತಿದ್ದಾರೆ. ಅದರಂತೆ ಗೋವಿಂದ ಕಾರಜೋಳಗೆ ಗೆಲ್ಲಿಸಿದರೆ ನನಗೆ ಗೆಲ್ಲಿಸಿದಂತೆ ಎಂದರು.

ನನಗೀಗ 82 ವರ್ಷ, ದೇವರು ಶಕ್ತಿ‌ಕೊಟ್ರೆ ಇನ್ನೊಂದು ವಿಧಾನಸಭೆ, ಲೋಕಸಭೆ ಚುನಾವಣೆ ಮಾಡ್ತೇನೆ:ಬಿಎಸ್​ವೈ
ಬಿಎಸ್​ ಯಡಿಯೂರಪ್ಪ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 16, 2024 | 3:03 PM

ಚಿತ್ರದುರ್ಗ, ಏ.16: ನನಗೀಗ 82ವರ್ಷ, ದೇವರು ಶಕ್ತಿ‌ಕೊಟ್ಟರೆ ಇನ್ನೊಂದು ವಿಧಾನಸಭೆ, ಲೋಕಸಭೆ ಚುನಾವಣೆ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa) ಹೇಳಿದರು. ಚಿತ್ರದುರ್ಗ(Chitradurga)ದಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಗೋವಿಂದ ಕಾರಜೋಳಗೆ ಗೆಲ್ಲಿಸಿದರೆ ನನಗೆ ಗೆಲ್ಲಿಸಿದಂತೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಕಾಂಗ್ರೆಸ್ ಪಕ್ಷದ ಮುಂದಿನ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ, ಆದರೆ ಮೋದಿ ಎದುರು ಮತ್ತೊಂದು ಹೆಸರು ಹೇಳುವ ಧೈರ್ಯ ಇಲ್ಲ. ಹೀಗಾಗಿ ಕಾಂಗ್ರೆಸ್ ಸೋಲು ಒಪ್ಪಿಕೊಂಡಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದರು.

ಇನ್ನು ಹಂಪಿ ಉತ್ಸವದಂತೆ ಮದಕರಿ ನಾಯಕ ಉತ್ಸವ ಮಾಡುವ ಭರವಸೆ ನೀಡಿದ ಅವರು, ‘ಭದ್ರಾ ಯೋಜನೆಗೆ 5.300ಕೋಟಿ ಈವತ್ತಲ್ಲ‌, ನಾಳೆ ಬರಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷದಿಂದ ತಡವಾಗಿರಬಹುದು. ಮೋದಿ, ಅಮಿತ್ ಶಾ ಜೊತೆ ಮಾತಾಡಿ ಶೀಘ್ರ ಅನುದಾನ ತರುತ್ತೇವೆ ಎಂದರು. ಕಿಸಾನ್ ಸಮ್ಮಾನ್ ಯೋಜನೆ ಅಡಿ 4ಸಾವಿರ ರೂ.‌ಕೊಡುವುದನ್ನು ಸಿದ್ಧರಾಮಯ್ಯ ಸರ್ಕಾರ ನಿಲ್ಲಿಸಿದೆ. ಇದಷ್ಟೇ ಅಲ್ಲ, ದುಡ್ಡಿಲ್ಲದೆ ಕಾಂಗ್ರೆಸ್ ಸರ್ಕಾರ ಭಾಗ್ಯ ಲಕ್ಷ್ಮಿ ಯೋಜನೆ, ಹಾಲು ಉತ್ಪಾದನೆ ಪ್ರೋತ್ಸಾಹ ಧನ ಸೇರಿದಂತೆ ಹಲವು ಯೋಜನೆಗಳನ್ನು ನಿಲ್ಲಿಸಿದೆ.

ಇದನ್ನೂ ಓದಿ:ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ: ಬಿಎಸ್ ಯಡಿಯೂರಪ್ಪ

ಬಿಜೆಪಿ-ಜೆಡಿಎಸ್ ಹಾಲು-ಜೇನಿನಂತೆ ಒಂದಾಗಿ ಕೆಲಸ

ರಾಜಕೀಯ ದೊಂಬರಾಟ ಇನ್ಮುಂದೆ ನಡೆಯಲ್ಲ, ಜಾತಿ ವಿಷ ಬೀಜ ಬಿತ್ತಿ ಮತ ಪಡೆಯುವ ಕಾಂಗ್ರೆಸ್ ತಂತ್ರ, ಹಣ ಹೆಂಡದ ಬಲದಿಂದ ಮತ ಪಡೆಯುವ ಕಾಂಗ್ರೆಸ್ ಭರವಸೆ ನಡೆಯಲ್ಲ. ಈಗಾಗಲೇ ಬಿಜೆಪಿ-ಜೆಡಿಎಸ್ ರಾಜ್ಯದಲ್ಲಿ ಹಾಲು ಜೇನಿನಂತೆ ಒಂದಾಗಿ ಕೆಲಸ ಮಾಡುತ್ತಿದ್ದೇವೆ, ನಮ್ಮನ್ನು ಬೇರ್ಪಡಿಸುವ ಕಾಂಗ್ರೆಸ್ ತಂತ್ರ ನಡೆಯಲ್ಲ. ಹೀಗಾಗಿ ನೀವೆಲ್ಲ ಒಟ್ಟಾಗಿ ಬಿಜೆಪಿಗೆ ಮತದಾನ ಮಾಡಿಸಿ ಎಂದು ಮನವಿ ಮಾಡಿದರು. ಇನ್ನು ವಾತಾವರಣ ನಮಗೆ ತುಂಬಾ ಅನುಕೂಲಕರವಾಗಿದ್ದು, ಎಲ್ಲೆಡೆ ಮೋದಿ ಮೋದಿ ಘೋಷಣೆ ಕೇಳುತ್ತಿದೆ. ದೇವೇಗೌಡರು ಸಹ ರಾಜ್ಯದಲ್ಲಿ ಸಂಚರಿಸಿ ಮತಯಾಚನೆ‌ ಮಾಡುತ್ತಿದ್ದಾರೆ. ಕಾರಜೋಳ ಕನಿಷ್ಟ 2 ಲಕ್ಷ‌ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ಬೇಡ ಅಂದರೂ ಬಿಎಸ್ ವೈ, ವರಿಷ್ಠರು ಸ್ಪರ್ಧೆಗಿಳಿಸಿದ್ದಾರೆ

ಇದೇ ವೇಳೆ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿಯಾದ ಗೋವಿಂದ ಕಾರಜೋಳ ಮಾತನಾಡಿ, ‘20ವರ್ಷದಿಂದ ನನ್ನನ್ನ ಒಡಹುಟ್ಟಿದ ಸಹೋದರನಂತೆ ಬಿಎಸ್ ವೈ ಕಂಡಿದ್ದಾರೆ. ನನನ್ನು ಈ ಮಟ್ಟಕ್ಕೆ ಬೆಳೆಸಿದ್ದು ಬಿಎಸ್ ಯಡಿಯೂರಪ್ಪ. ನರೇಂದ್ರ ಮೋದಿ ಅವರು ಕಳಂಕರಹಿತ ರಾಜಕಾರಣಿ, ನೂರಾರು ದೇಶ ಮೆಚ್ಚಿ ಹೌದೌದು ಎನ್ನುವಂತೆ ಮೋದಿ ಆಡಳಿತವಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಎರಡು ದೈತ್ಯ ಶಕ್ತಿ ಒಂದಾಗಿವೆ. ‘ನಾನು ಬೇಡ ಅಂದರೂ ಬಿಎಸ್ ವೈ, ವರಿಷ್ಠರು ಸ್ಪರ್ಧೆಗಿಳಿಸಿದ್ದಾರೆ. ಯಾವ ಜನ್ಮದ ರುಣಾನುಬಂಧವೋ ಗೊತ್ತಿಲ್ಲ. ಬಸವಣ್ಣನ ನಾಡಿನಲ್ಲಿ ಹುಟ್ಟಿ‌ ಚಿತ್ರದುರ್ಗಕ್ಕೆ ಬಂದಿದ್ದೇನೆ. ಈ ಕ್ಷೇತ್ರದ ಜನರ ರುಣ ನನ್ನ ಮೇಲಿದೆ, ಆ ರುಣ ತೀರಿಸಲು ಭಗವಂತ ಅವಕಾಶ ನೀಡಿದ್ದಾನೆಂದು ಭಾವಿಸಿದ್ದೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Tue, 16 April 24

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್