AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾ ಮಠ ಅಧೀನ ಸಂಸ್ಥೆ ಎಸ್​​ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಉದ್ಯಮಿ ಭರತ್ ನೇಮಕ

ವಿದೇಶದಲ್ಲಿ ಕಾರ್ಯ ನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.

ಮುರುಘಾ ಮಠ ಅಧೀನ ಸಂಸ್ಥೆ ಎಸ್​​ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಉದ್ಯಮಿ ಭರತ್ ನೇಮಕ
ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ
TV9 Web
| Edited By: |

Updated on:Dec 03, 2022 | 8:38 AM

Share

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ(Murugha Mutt) ಅಧೀನ ಸಂಸ್ಥೆಯಾಗಿರುವ ಎಸ್​​ಜೆಎಂ ವಿದ್ಯಾಪೀಠದ(SJM Vidyapeeth) ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್​ ಅವರನ್ನು ನೇಮಕ ಮಾಡಲಾಗಿದೆ. ವಿದೇಶದಲ್ಲಿ ಕಾರ್ಯ ನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿ ಬಸವಪ್ರಭು ಶ್ರೀಗಳು, ಎಸ್​​ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎಸ್​.ಬಿ.ವಸ್ತ್ರದಮಠ ಉಪಸ್ಥಿತರಿದ್ದರು.

ಮುರುಘಾಶ್ರೀ ವಜಾಕ್ಕೆ ಹೆಚ್ಚಿದ ಒತ್ತಡ

ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾಶ್ರೀಯನ್ನು ಚಿತ್ರದುರ್ಗ ಮುರುಘಾಮಠದ ಪೀಠಾದ್ಯಕ್ಷ ಸ್ಥಾನದಿಂದ‌‌ ವಜಾ ಮಾಡಲು ಒತ್ತಡ ಹೆಚ್ಚಾಗಿದೆ. ಹೀಗಾಗಿ ಇಂದು ಚಿತ್ರದುರ್ಗದಲ್ಲಿ ವೀರಶೈವ ಲಿಂಗಾಯತ ಸಮಾಜದ ಸಭೆ ನಡೆಯಲಿದೆ. ಮಾಜಿ ಸಚಿವ ಎಚ್.ಏಕಾಂತಯ್ಯ ನೇತೃತ್ವದಲ್ಲಿ ಚಿತ್ರದುರ್ಗ ತಾಲೂಕಿನ ಸಿಬಾರ ಬಳಿಯ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಸಭೆ ನಡೆಯಲಿದೆ.

ಇದನ್ನೂ ಓದಿ: ಚಿತ್ರದುರ್ಗ: ಮುರುಘಾ ಮಠದಲ್ಲಿದ್ದ 22 ಮಕ್ಕಳು ನಾಪತ್ತೆ, ಈ ಮಕ್ಕಳು ಮಠದ ಪಾಲಾಗಿದ್ದು ಹೇಗೆಂಬುದೇ ಪ್ರಶ್ನೆ

ಇಂದು ಬೆಳಗ್ಗೆ 10:30ಕ್ಕೆ ಮಾಜಿ ಸಚಿವ‌ ಏಕಾಂತಯ್ಯ ಸಭೆ ಕರೆದಿದ್ದಾರೆ. ಸೆಪ್ಟೆಂಬರ್ 29ರಂದು ಎಚ್.ಏಕಾಂತಯ್ಯ ನೇತೃತ್ವದಲ್ಲಿ ಸಭೆ ನಡೆದಿತ್ತು. ಅಕ್ಟೋಬರ್ 14ರಂದು ಸಿಎಂ ಭೇಟಿಯಾಗಿ ಮಠಕ್ಕೆ ಆಡಳಿತಾಧಿಕಾರಿ‌ ನೇಮಿಸುವಂತೆ ಮನವಿ ಸಲ್ಲಿಸಿದ್ದರು. ಪೀಠಾದ್ಯಕ್ಷ ಸ್ಥಾನದಿಂದ ಮುರುಘಾಶ್ರೀ ವಜಾಗೊಳಿಸಲು ಆಗ್ರಹಿಸಿದ್ದರು. ಮಠದ ಪೂಜಾ ಕೈಂಕರ್ಯ, ಎಸ್ ಜೆ ಎಂ ವಿದ್ಯಾಸಂಸ್ಥೆಯ ಆಡಳಿತಾತ್ಮಕ ದೃಷ್ಠಿಯಿಂದ ಕ್ರಮಕ್ಕೆ ಮನವಿ ಮಾಡಿದ್ದರು. ಈವರೆಗೆ ಸರ್ಕಾರದಿಂದ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಇಂದು ವೀರಶೈವ ಲಿಂಗಾಯತ ಸಮಾಜದ ಸಭೆ ಕರೆಯಲಾಗಿದೆ. ಸರ್ಕಾರ ಈವರೆಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಮಠ, ವಿದ್ಯಾಪೀಠದ ಹಣ, ಸ್ವತ್ತು ದುರುಪಯೋಗ ಸಾಧ್ಯತೆ ಆರೋಪ ಸಂಬಂಧ ಸಭೆಯಲ್ಲಿ ಚರ್ಚಿಸಿ ಮುಂದಿನ ನಡೆಯ ಬಗ್ಗೆ ನಿರ್ಣಯ ಕೈಗೊಳ್ಳಲಾಗುತ್ತೆ.

3ನೇ ಆರೋಪಿ ಫೋಟೋಗ್ರಾಫರ್​ ಮಯೂರ್ ಬಂಧನ

ಮುರುಘಾಶ್ರೀ ವಿರುದ್ಧ ಸುಳ್ಳು ದೂರು ದಾಖಲಿಸಲು ಪಿತೂರಿ ಕೇಸ್​ಗೆ ಸಂಬಂಧಿಸಿ ಚಿತ್ರದುರ್ಗ ಗ್ರಾಮಾಂತರ ಪೊಲೀಸರು 3ನೇ ಆರೋಪಿ ಫೋಟೋಗ್ರಾಫರ್​ ಮಯೂರ್ ಎಂಬುವವರನ್ನು ಬಂಧಿಸಿದ್ದಾರೆ. ಪಿತೂರಿ ಕೇಸ್​ನಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಈಗಾಗಲೇ ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಬಸವರಾಜನ್ ಮತ್ತು ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಸೇರಿ ಇಬ್ಬರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:38 am, Sat, 3 December 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ