AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಣದಬತ್ತಿ ಬೆಳಕಲ್ಲಿ ಚಿಕಿತ್ಸೆ ವಿಡಿಯೋ ವೈರಲ್: ವೈದ್ಯನಿಗೆ ತರಾಟೆಗೆ ತೆಗೆದುಕೊಂಡ ಶಾಸಕ

ಕೆಲ ದಿನಗಳ ಹಿಂದೆ ವಿದ್ಯುತ್ ಬೆಳಕು ಇಲ್ಲದ ಕಾರಣ ವೈದ್ಯರು ಮೇಣದ ಬತ್ತಿ, ಮೊಬೈಲ್ ಟಾರ್ಚ್​ ಹಿಡಿದು ರೋಗಿಗೆ ಚಿಕಿತ್ಸೆ ಕೊಟ್ಟ ವಿಡಿಯೋ ವೈರಲ್ ಆಗಿತ್ತು. ಘಟನೆ ಸಂಬಂಧ ಶಾಸಕ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಶಾಸಕ ಎನ್ ವೈ ಗೋಪಾಲಕೃಷ್ಣ ಹಾಗೂ ವೈದ್ಯ ಡಾ.ಸುದೀಂದ್ರಬಾಬು ನಡುವೆ ಜಟಾಪಟಿ ನಡೆದಿದೆ.

ಮೇಣದಬತ್ತಿ ಬೆಳಕಲ್ಲಿ ಚಿಕಿತ್ಸೆ ವಿಡಿಯೋ ವೈರಲ್: ವೈದ್ಯನಿಗೆ ತರಾಟೆಗೆ ತೆಗೆದುಕೊಂಡ ಶಾಸಕ
ವೈದ್ಯನಿಗೆ ತರಾಟೆಗೆ ತೆಗೆದುಕೊಂಡ ಶಾಸಕ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: May 23, 2024 | 9:35 AM

Share

ಚಿತ್ರದುರ್ಗ, ಮೇ.23: ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ (Government Hospital) ಮೇಣದಬತ್ತಿ ಬೆಳಕಲ್ಲಿ ಚಿಕಿತ್ಸೆ ನೀಡಿದ್ದ ವಿಡಿಯೋ ವೈರಲ್ (Video Viral) ಆಗಿದ್ದು ವೈದ್ಯನಿಗೆ ಮೊಳಕಾಲ್ಮೂರು ಶಾಸಕ ಗೋಪಾಲಕೃಷ್ಣ (NY Gopalakrishna) ತರಾಟೆಗೆ ತೆಗೆದುಕೊಂಡಿದ್ದಾರೆ. ಮೊಳಕಾಲ್ಮೂರು ಸರ್ಕಾರಿ ಆಸ್ಪತ್ರೆ ದುಸ್ಥಿತಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಶಾಸಕ ಎನ್ ವೈ ಗೋಪಾಲಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯ ಡಾ.ಸುದೀಂದ್ರಬಾಬುಗೆ ತರಾಟೆ ತೆಗೆದುಕೊಂಡಿದ್ದಾರೆ. ಶಾಸಕ ಹಾಗೂ ವೈದ್ಯನ ನಡುವೆ ಜಟಾಪಟಿ ನಡೆದಿದೆ.

ಆಸ್ಪತ್ರೆ ಬಂದ ಶಾಸಕ ಸೀದಾ ವೈದ್ಯ ಸುಧೀಂದ್ರಬಾಬು ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ವೈರಲ್ ವಿಡಿಯೋದಲ್ಲಿ ನೀವಿದ್ದೀರಿ. ಆಸ್ಪತ್ರೆಯಲ್ಲಿ ಸಮಸ್ಯೆ ಇದ್ದರೆ ನನಗೆ ತಿಳಿಸಬೇಕಿತ್ತು ಎಂದು ವೈದ್ಯ ಸುದೀಂದ್ರಬಾಬು ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ವೈದ್ಯ, ವೈರಲ್ ವಿಡಿಯೋಗೂ ನನಗೂ ಸಂಬಂಧವಿಲ್ಲ. ವಿಡಿಯೋ ಯಾರು ತೆಗೆದಿದ್ದಾರೋ ಗೊತ್ತಿಲ್ಲ ಎಂದು ಉತ್ತರಿಸಿದ್ದು ಶಾಸಕರೆದುರೇ ಬೇಜವಬ್ದಾರಿ ಉತ್ತರ ನೀಡುತ್ತಿದ್ದೀರಿ ಎಂದು ಶಾಸಕರ ಬೆಂಬಲಿಗರು ಗರಂ ಆದ ಘಟನೆ ನಡೆಯಿತು.

ಕೈತೋರಿಸಿ ಮಾತಾಡಬೇಡಿ ಎಂದು ಬೆಂಬಲಿಗರು ವೈದ್ಯರ ಕೈ ಕೆಳಗಿಳಿಸಿ ಆಕ್ರೋಶ ವ್ಯಕ್ತಪಡಿಸಿದರು. ಆಗ ವೈದ್ಯಾಧಿಕಾರಿ ಮೇಲೆ ದೌರ್ಜನ್ಯ ಮಾಡುತ್ತೀರಾ ಎಂದು ವೈದ್ಯ ಪ್ರಶ್ನಿಸಿದ್ದು ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ ಎಂದು ವೈದ್ಯ ಸುದೀಂದ್ರಬಾಬು ಕಿಡಿಕಾರಿದ್ರು. ಶಾಸಕರ ಎದುರೇ ವೈದ್ಯ ಮತ್ತು ಬೆಂಬಲಿಗರ ನಡುವೆ ವಾಗ್ವಾದ ನಡೆಯಿತು. ನನ್ನ ಮೇಲೆ ಆಪಾದನೆ ಮಾಡುವುದು ಅರ್ಥಹೀನ ಎಂದ ವೈದ್ಯ ಕೂಗಾಡಿದ್ದು ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಕೊನೆಗೆ ವೈದ್ಯನಿಗೆ ಕೈಮುಗಿದು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸೋಣ ಎಂದ ಆಸ್ಪತ್ರೆಯಿಂದ ತೆರಳಿದರು.

ಇದನ್ನೂ ಓದಿ: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವು, ಮತ್ತೋರ್ವನಿಗೆ ಮುಂದುವರೆದ ಚಿಕಿತ್ಸೆ

ಪ್ರಕರಣದ ಬಗ್ಗೆ ತನಿಖೆ ನಡೆಸೋಣವೆಂದು ಎನ್ ವೈ ಗೋಪಾಲಕೃಷ್ಣ ತಿಳಿಸಿದ್ದಾರೆ. ಮತ್ತೊಂದೆಡೆ ವೈದ್ಯರ ಉದ್ಧಟತನದ ಬಗ್ಗೆ ಶಾಸಕ ಗೋಪಾಲಕೃಷ್ಣ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ.

ಘಟನೆ ಹಿನ್ನೆಲೆ

ಮೇ 21ರಂದು ಮೊಳಕಾಲ್ಮೂರು ಆಸ್ಪತ್ರೆಯ ವಿಡಿಯೋ ವೈರಲ್ ಆಗಿತ್ತು. ಭಾರೀ ಮಳೆಯಿಂದಾಗಿ ಕಳೆದೊಂದು ವಾರದಿಂದ ಸರಿಯಾಗಿ ಕರೆಂಟ್ ಇಲ್ಲದೆ ಮೊಳಕಾಲ್ಮೂರು ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ವೈದ್ಯರು ಪರದಾಡುವಂತಾಗಿತ್ತು.

ಆಸ್ಪತ್ರೆಯಲ್ಲಿ ಅಳವಡಿಸಿದ್ದ ಜನರೇಟರ್ ಕೆಟ್ಟು ರಿಪೇರಿ ಮಾಡಿಸಿರಲಿಲ್ಲ. ವೈದ್ಯರು ಮೊಬೈಲ್ ಟಾರ್ಚ್ ಮತ್ತು ಮೇಣದಬತ್ತಿ ಹಚ್ಚಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡಿದ್ದರು. ಈ ರೀತಿ ಚಿಕಿತ್ಸೆ ನೀಡುವ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ರಾಜ್ಯ ಬಿಜೆಪಿ, ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ