AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ, ನಾಲ್ವರ ಸಾವು

ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜು ಆಗಿದೆ.

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ, ನಾಲ್ವರ ಸಾವು
ಚಿತ್ರದುರ್ಗ ರಸ್ತೆ ಅಪಘಾತ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ವಿವೇಕ ಬಿರಾದಾರ|

Updated on:Sep 04, 2023 | 9:42 AM

Share

ಚಿತ್ರದುರ್ಗ ಸೆ.04: ನಿಂತಿದ್ದ ಲಾರಿಗೆ (Lory) ಹಿಂದಿನಿಂದ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ (National Highway) 150ರಲ್ಲಿ ನಡೆದಿದೆ. ಇನ್ನುಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಶಂಶುದ್ದೀನ್(40), ಮಲ್ಲಿಕಾ(37), ಖಲೀಲ್(42), ತಬ್ರೇಜ್(13) ಮೃತ ದುರ್ದೈವಿಗಳು.  ನರ್ಗೀಸ್, ರೆಹಾನ್, ರೆಹಮಾನ್ ಗಾಯಾಳುಗಳು. ಹೊಸಪೇಟೆ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ಕಾರು ನಿಂತಿದ್ದ ಲಾರಿಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜು ಆಗಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೋಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು  ಚಿತ್ರದುರ್ಗ ಎಸ್ಪಿ ಧರ್ಮೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.

ಬೈಕ್​​ಗೆ ಕಂಟೇನರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ನೆಲಮಂಗಲ: ಬೈಕ್​​ ಮತ್ತು ಕಂಟೇನರ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4 ಟಿ.ಬೇಗೂರು ಬಳಿ ನಡೆದಿದೆ.

ಇನ್ನು ಬೈಕ್​​ನಲ್ಲಿ ಹಿಂಬದಿ ಕೂತಿದ್ದ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತ್ಯಾಮಗೊಂಡ್ಲು ಗ್ರಾಮದ ನಿವಾಸಿ  ದೊರೆಸ್ವಾಮಿ (24) ಮೃತ ಬೈಕ್ ಸವಾರ. ಮಾದನಾಯಕನಹಳ್ಳಿ ಗ್ರಾಮದ ನರಸಿಂಹಮೂರ್ತಿ (30) ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ಅಪಘಾತದ ಬಳಿಕ ಕಂಟೇನರ್ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಶಿವಗಂಗೆಯಲ್ಲಿ ಸ್ನೇಹಿತರನ್ನು ಬೇಟಿಯಾಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲಾರಿ ಹರಿದು 20ಕ್ಕೂ ಹೆಚ್ಚು ಕುರಿಗಳ ದುರ್ಮರಣ; ಚಾಲಕ ಪರಾರಿ

ಮಳೆಯಿಂದ ಮನೆ ಗೋಡೆ ಕುಸಿದು 80ಕ್ಕೂ ಅಧಿಕ ಕುರಿ, ಮೇಕೆ ಸಾವು

ಕಲಬುರಗಿ: ನಿರಂತರವಾಗಿ  ಮಳೆಯಿಂದ ಮನೆ ಗೋಡೆ ಕುಸಿದು 80ಕ್ಕೂ ಅಧಿಕ ಕುರಿ, ಮೇಕೆ ಮೃತಪಟ್ಟಿರುವ ಘಟನೆ ಕಾಳಗಿ ತಾಲೂಕಿನ ಕೊರವಿ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಪೂಜಾರಿ, ಅಣ್ಣಪ್ಪ ಪೂಜಾರಿ ಎಂಬುವರಿಗೆ ಸೇರಿದ ಕುರಿ, ಮೇಕೆ ಮೃತಪಟ್ಟಿದ್ದು, ಲಕ್ಷಾಂತರ ಮೌಲ್ಯದ ಕುರಿ, ಮೇಕೆ ಕಳೆದುಕೊಂಡು ಕುಟುಂಬಗಳು ಕಂಗಾಲಾಗಿವೆ. ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕುಟುಂಬ ನಿನ್ನೆ (ಸೆ.03) ರಂದು ಸಂಜೆ ಮನೆಯೊಂದರಲ್ಲಿ ಮೇಕೆ ಹಾಗೂ ಕುರಿಗಳನ್ನು ಇರಿಸಿದ್ದರು,  ಸುರಿದ ಮಳೆಯಿಂದಾಗಿ ಗೋಡೆ ತೇವಗೊಂಡು ಕುಸಿದಿದೆ. ಪರಿಣಾಮ ಕುರಿಗಳು ಮೃತಪಟ್ಟಿವೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:05 am, Mon, 4 September 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ