AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga Accident: ಗೋವಾ ಟ್ರಿಪ್ ಮುಗಿಸಿ ಬೆಂಗಳೂರಿಗೆ ಬರುವಾಗ ಅಪಘಾತ; ಮೂರು ತಿಂಗಳ ಮಗು ಸೇರಿ ಮೂವರ ಸಾವು

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಫಾರ್ಚುನರ್ ಕಾರ್ ಡಿಕ್ಕಿ ಹೊಡೆದಿದ್ದು ಮೂರು ತಿಂಗಳ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ. ಕುಟುಂಬ ಸಮೇತರಾಗಿ ಗೋವಾ ಟ್ರಿಪ್ ಮುಗಿಸಿ ವಾಪಸ್ ಹೊರಟಿದ್ದಾಗ ಘಟನೆ ನಡೆದಿದೆ.

Chitradurga Accident: ಗೋವಾ ಟ್ರಿಪ್ ಮುಗಿಸಿ ಬೆಂಗಳೂರಿಗೆ ಬರುವಾಗ ಅಪಘಾತ; ಮೂರು ತಿಂಗಳ ಮಗು ಸೇರಿ ಮೂವರ ಸಾವು
ಗೊಲ್ಲರಹಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ಅಪಘಾತ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Jun 12, 2023 | 3:46 PM

Share

ಚಿತ್ರದುರ್ಗ: ಕುಟುಂಬ ಸಮೇತರಾಗಿ ಗೋವಾ ಟ್ರಿಪ್(Goa) ಮುಗಿಸಿ ವಾಪಸ್ ಹೊರಟಿದ್ದರು. ಇನ್ನೇನು ಇನ್ನೂರು ಕಿ.ಮೀ ದೂರದಲ್ಲಿ ಊರು ಬಂದೇ ಬಿಟ್ಟಿತೆಂಬ ಖುಷಿಯಲ್ಲಿದ್ದರು(Chitradurga Accident). ಆದ್ರೆ, ಲಾರಿ ರೂಪದಲ್ಲಿ ಎದುರಾದ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಫಾರ್ಚುನರ್ ಕಾರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಕಾರ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂರು ತಿಂಗಳ ಮಗು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ. ಚಿತ್ರದುರ್ಗ ತಾಲೂಕಿನ ವಿಜಯಪುರ ಗೊಲ್ಲರಹಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ಮೂಲದ ಕುಟುಂಬ ಗೋವಾದಿಂದ‌ ಮರಳಿ ಬೆಂಗಳೂರಿಗೆ ಹೊರಟಿತ್ತು. ಇನ್ನೇನು ಇನ್ನೂರು ಕಿ.ಮೀ ಬೆಂಗಳೂರು ಬಂದೇ ಬಿಡುತ್ತಿತ್ತು. ಆದ್ರೆ, ಇಂದು ಬೆಳಗಿನ ಜಾವ 2:30ರ ಸುಮಾರಿಗೆ ವಿಜಯಪುರ ಗೊಲ್ಲರಹಟ್ಟಿ ಬಳಿ ಫಾರ್ಚುನರ್ ಕಾರ್ ಮುಂಭಾಗದಲ್ಲಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಕಾರ್​ನಲ್ಲಿದ್ದ ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ತಬ್ಸುಮ್(28), ಸಂಬಂಧಿ ಜಾಕೀರ್ ಅಹ್ಮದ್ (60) ಸ್ಥಳದಲ್ಲೇ ಮೃತಪಟ್ಟಿದ್ದರೆ ತಬ್ಸುಮ್ ಪುತ್ರಿ ಮೂರು ತಿಂಗಳ ಮಗು ಫಾತಿಮಾ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಕಾರ್​ನಲ್ಲಿದ್ದ ಆರು ಜನ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Mysuru Accident: KSRTC ಬಸ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ನಿಲುವಾಗಿಲು ಗ್ರಾ.ಪಂ. ಸದಸ್ಯ ಸಾವು

ಇನ್ನು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಖ್ಯೆ ಹೆಚ್ಚಳ ಆಗಿದೆ. ಕಳೆದ ಒಂದು ವಾರದಲ್ಲಿ ಎರಡು ಮೇಜರ್ ಅಪಘಾತಗಳು ಸಂಭವಿಸಿದ್ದು ಆರು ಜನ ಸಾವಿಗೀಡಾಗಿದ್ದಾರೆ. ಹೊಸ ಬೈಪಾಸ್ ಹೆದ್ದಾರಿಯಲ್ಲಿ ನಿತ್ಯ ಅಪಘಾತ ಸಂಭವಿಸುತ್ತಿದ್ದು ಸಾವು ನೋವು ಘಟಿಸುತ್ತಿವೆ. ಹೆದ್ದಾರಿಗಳು ಹೆಮ್ಮಾರಿಯಂತಾಗಿದ್ದು ಜನರಲ್ಲಿ ಆತಂಕ ಸೃಷ್ಠಿ ಆಗಿದೆ ಎಂದು ಜನ ಕಿಡಿ ಕಾರುತ್ತಿದ್ದಾರೆ. ಈ ಬಗ್ಗೆ ಎಸ್ಪಿ ಕೆ.ಪರಶುರುಮ್ ಅವ್ರನ್ನು ಪ್ರಶ್ನಿಸಿದಾಗ ಅಪಘಾತಗಳ ಸಂಖ್ಯೆ ಹೆಚ್ಚಿದ್ದು ನಿಜ. ಈಗಾಗಲೇ ಹಲವೆಡೆ ಸಿಸಿಟಿವಿ ಅಳವಡಿಸಲಾಗಿದೆ. ಅತಿ ವೇಗ, ನಿಯಮ ಮೀರಿ ವಾಹನ ಚಾಲನೆ, ಹೆದ್ದಾರಿ ಬದಿ ವಾಹನ ನಿಲುಗಡೆ ಬಗ್ಗೆ ಪರಿಶೀಲಿಸಿ ಅಪಘಾತಗಳ ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಹೇಳಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ತಾಲೂಕಿನ ವಿಜಯಪುರ ಗೊಲ್ಲರಹಟ್ಟಿ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:40 pm, Mon, 12 June 23

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​