AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ಗೋಡ್ಸೆ ಚಿತ್ರ ಪ್ರದರ್ಶನ: ಕೇಸ್​ ಬುಕ್​

ಕೋಟೆನಾಡು ಚಿತ್ರದುರ್ಗದಲ್ಲಿ ನಡೆದಿದ್ದ ಹಿಂದೂ ಮಹಾಗಣಪತಿ ಬೃಹತ್ ವಿಸರ್ಜನಾ ಶೋಭಾಯಾತ್ರೆ ಮೆರವಣಿಗೆಯಲ್ಲಿ ನಾಥೂರಾಮ್ ಗೋಡ್ಸೆ ಚಿತ್ರ ಪ್ರದರ್ಶನ ಮಾಡಿರುವುದು ಭಾರಿ ವಿವಾದದಕ್ಕೆ ಕಾರಣವಾಗಿದ್ದು, ಇದೀಗ ದೂರು ದಾಖಲಾಗಿದೆ.

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ಗೋಡ್ಸೆ ಚಿತ್ರ ಪ್ರದರ್ಶನ: ಕೇಸ್​ ಬುಕ್​
ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ಗೋಡ್ಸೆ ಚಿತ್ರ ಪ್ರದರ್ಶನ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Oct 11, 2023 | 9:45 AM

Share

ಚಿತ್ರದುರ್ಗ, (ಅಕ್ಟೋಬರ್ 11): ಚಿತ್ರದುರ್ಗದಲ್ಲಿ (Chitradurga) ಹಿಂದೂ ಮಹಾಗಣಪತಿ (Hindu Maha Ganapati) ಶೋಭಯಾತ್ರೆ ವೇಳೆ ಗೋಡ್ಸೆ ಚಿತ್ರ ಪ್ರದರ್ಶನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೂರು ದಾಖಲಾಗಿದೆ. ಅಕ್ಟೋಬರ್ 8ರಂದು ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ಗೋಡ್ಸೆ ಚಿತ್ರ ಪ್ರದರ್ಶನ ಮಾಡಲಾಗಿತ್ತು. ಇದು ಕೆಲವರ ಆಕ್ರೋಶಕ್ಕೆ ಕಾರಣವಾಗಿತ್ತು. ಅದಂತೆ ಚಿತ್ರದುರ್ಗದ ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಎಂಬುವರು ದೂರು ನೀಡಿದ್ದು, ಈ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 505/1(C), 505/1(B) ಅಡಿಯಲ್ಲಿ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಂತಿ ಭಂಗ, ಕೋಮು ಸೌಹಾರ್ದತೆಗೆ ಧಕ್ಕೆ ತರಲು ಫೋಟೋ ಪ್ರದರ್ಶನ ಮಾಡಲಾಗಿದ್ದು, ಗೋಡ್ಸೆ ಚಿತ್ರ‌ ಪ್ರದರ್ಶಿಸಿದವರ ಪತ್ತೆ ಮಾಡಿ ಕಾನೂನು ಕ್ರಮಕ್ಕೆ ಒತ್ತಾಯಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಗಂಗಾವತಿ: ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ, ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್‌

ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದೂ‌ ಮಹಾಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಕರ್ನಾಟಕದಾದ್ಯಂತ ಜನಸಾಗರವೇ ಹರಿದುಬಂದಿತ್ತು. ಶೋಭಾಯಾತ್ರೆಯ ವೇಳೆ ಯುವ ಸಮೂಹ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿತ್ತು. ಆದರೆ, ಮೆರವಣಿಗೆಯಲ್ಲಿ ಕೆಲವರು ವೀರ ಸಾವರ್ಕರ್ ಚಿತ್ರ ಪ್ರದರ್ಶಿಸಿದರೆ, ಮತ್ತೆ ಕೆಲವರು ಜೊತೆಗೆ ಕೋಮು ಘರ್ಷಣೆಯಲ್ಲಿ ಹತ್ಯೆಯಾದ ಶರತ್ ಮಡಿವಾಳ್ ಶಿವಮೊಗ್ಗದ ಮೃತ ಹರ್ಷನ ಭಾವಚಿತ್ರ ಪ್ರದರ್ಶಿಸಿದ್ದರು.ಹಾಗೇ ನಾಥೂರಾಮ್ ಗೋಡ್ಸೆ ಭಾವಚಿತ್ರ ಹಿಡಿದು ಕುಪ್ಪಳಿಸಿದ್ದರು. ಇದೀಗ ಇದು ವಿವಾದಕ್ಕೀಡಾಗಿತ್ತು. ಈ ಬಗ್ಗೆ ಇದೀಗ ದೂರು ದಾಖಲಾಗಿದ್ದು, ಚಿತ್ರ ಪ್ರದರ್ಶಿಸಿದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:43 am, Wed, 11 October 23

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?