AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣ: ಏಳು ದಿನಗಳಾದರೂ ಪೊಲೀಸರ ಕೈಸೇರದ ಪೋಸ್ಟ್ ಮಾರ್ಟಂ ವರದಿ

ಚಿತ್ರದುರ್ಗದಲ್ಲಿ ಒಂದೇ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿದ್ದವು. ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಅಸ್ಥಿಪಂಜರಗಳನ್ನು ಶವಾಗಾರಕ್ಕೆ ರವಾನಿಸಿದ್ದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಆದರೆ, ಪೋಸ್ಟ್ ಮಾರ್ಟಂ ನಡೆದು ಏಳು ದಿನಗಳು ಕಳೆದರೂ ವರದಿ ಪೊಲೀಸರ ಕೈಸೇರಲಿಲ್ಲ. ಪೋಸ್ಟ್ ಮಾರ್ಟಂ ಬಳಿಕ ಎರಡು ದಿನದೊಳಗೆ ವರದಿ ಸಿಗಬೇಕಿತ್ತು. ಸದ್ಯ ಪೋಸ್ಟ್ ಮಾರ್ಟ್ಂ, FSL ವರದಿ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಲಿದ್ದಾರೆ.

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣ: ಏಳು ದಿನಗಳಾದರೂ ಪೊಲೀಸರ ಕೈಸೇರದ ಪೋಸ್ಟ್ ಮಾರ್ಟಂ ವರದಿ
ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣ ಸಂಬಂಧ ಏಳು ದಿನಗಳಾದರೂ ಪೊಲೀಸರ ಕೈಸೇರದ ಪೋಸ್ಟ್ ಮಾರ್ಟಂ ವರದಿ
ಬಸವರಾಜ ಮುದನೂರ್, ಚಿತ್ರದುರ್ಗ
| Updated By: Rakesh Nayak Manchi|

Updated on: Jan 05, 2024 | 7:52 AM

Share

ಚಿತ್ರದುರ್ಗ, ಜ.5: ಜಿಲ್ಲೆಯಲ್ಲಿ (Chitradurga) ಒಂದೇ ಮನೆಯಲ್ಲಿ ಐದು ಅಸ್ಥಿಪಂಜರಗಳು (Skeleton) ಪತ್ತೆಯಾದ ಪ್ರಕರಣ ಸಂಬಂಧ ಮರಣೋತ್ತರ ಪರೀಕ್ಷೆ ನಡೆದ ಏಳು ದಿನಗಳು ಕಳೆದರೂ ಅದರ ವರದಿ ಪೊಲೀಸರ ಕೈಸೇರಿಲ್ಲ. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ತಜ್ಞ ವೈದ್ಯ ಡಾ.ವೇಣು ಪೋಸ್ಟ್ ಮಾರ್ಟಂ ಮಾಡುವ ಏಕೈಕ ವೈದ್ಯರಾಗಿದ್ದು, ಕೆಲ ದಿನಗಳಿಂದ ತರಬೇತಿ ಕಾರ್ಯಗಾರದಲ್ಲೂ ಭಾಗಿಯಾಗಿದ್ದಾರೆ. ಹೀಗಾಗಿ ವರದಿ ಪೊಲೀಸರ ಕೈಸೇರುವಲ್ಲಿ ವಿಳಂಬವಾಗಿದ್ದು,

ಡಿಸೆಂಬರ್ 28 ರ ರಾತ್ರಿ ಮನೆಯೊಂದರಲ್ಲಿ ಐವರು ವ್ಯಕ್ತಿಗಳ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಡಿ. 29 ರಂದು ಅಸ್ಥಿಪಂಜರಗಳನ್ನು ಪೊಲೀಸರು ಜೆಎಂಐಟಿ ಶವಾಗಾರಕ್ಕೆ ರವಾನಿಸಿದ್ದರು. ಡಿಸೆಂಬರ್ 30 ರಂದು ಮರಣೋತ್ತರ ಪರೀಕ್ಷೆ ನಡೆದಿತ್ತು. ಎರಡು ದಿನಗಳಲ್ಲಿ ಪೊಲೀಸರ ಕೈ ಸೇರಬೇಕಾಗಿದ್ದ ವರದಿ ನಾಳೆ ಸಂಜೆ ವೇಳೆಗೆ ಕೈಸೇರುವ ಸಾಧ್ಯತೆ ಇದೆ.

ಇದನ್ನೂ ಓದಿ: ಚಿತ್ರದುರ್ಗ ಅಸ್ಥಿಪಂಜರ ಪತ್ತೆ ಪ್ರಕರಣ: ಆತ್ಮಹತ್ಯೆಗೆ ಶರಣಾದ ಜಗನ್ನಾಥರೆಡ್ಡಿ ಕುಟುಂಬ? ಡೆತ್​​ ನೋಟ್​ನಿಂದ ರಿವೀಲ್​ ಆಯ್ತು ಹಲವು ಅಂಶ

ಅಸ್ಥಿಪಂಚರಗಳ ಸ್ಯಾಂಪಲ್ ಎಫ್​ಎಸ್​ಎಲ್​ಗೆ ರವಾನೆ

ಹೆಚ್ಚಿನ ಪರೀಕ್ಷೆಗಾಗಿ ಮೃತ ವ್ಯಕ್ತಿಗಳ ಮೂಳೆ, ಚರ್ಮ ಸೇರಿದಂತೆ ಇತರೆ ಸ್ಯಾಪಂಲ್​ಗಳನ್ನು ಪೊಲೀಸರು ಬೆಂಗಳೂರಿನ ಎಫ್​ಎಸ್​ಎಲ್ ಕೇಂದ್ರಕ್ಕೆ ರವಾನೆ ಮಾಡಿದ್ದಾರೆ. ಮುಂದಿನ ವಾರದಲ್ಲಿ ಇದರ ವರದಿ ಸಿಗುವ ನಿರೀಕ್ಷೆ ಇದೆ ಎಂದು ಪೊಲೀಸ್ ಮೂಲಗಳಿಂದ ಟಿವಿ9ಗೆ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಪೊಲೀಸರು ಮರಣೋತ್ತರ ಪರೀಕ್ಷೆ ವರದಿ ಹಾಗೂ ಎಫ್​ಎಸ್​ಎಲ್ ವರದಿ ಆಧರಿಸಿ ತನಿಖೆ ನಡೆಸಲಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಂಥ ಅಭಿಮಾನಿಗಳಿಗೆ ಸ್ಟಾರ್ ನಟರು ಬುದ್ಧಿ ಹೇಳಬೇಕು: ರಾಕ್​ಲೈನ್ ವೆಂಕಟೇಶ್
ಅಂಥ ಅಭಿಮಾನಿಗಳಿಗೆ ಸ್ಟಾರ್ ನಟರು ಬುದ್ಧಿ ಹೇಳಬೇಕು: ರಾಕ್​ಲೈನ್ ವೆಂಕಟೇಶ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ