ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣ: ಏಳು ದಿನಗಳಾದರೂ ಪೊಲೀಸರ ಕೈಸೇರದ ಪೋಸ್ಟ್ ಮಾರ್ಟಂ ವರದಿ

ಚಿತ್ರದುರ್ಗದಲ್ಲಿ ಒಂದೇ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿದ್ದವು. ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಅಸ್ಥಿಪಂಜರಗಳನ್ನು ಶವಾಗಾರಕ್ಕೆ ರವಾನಿಸಿದ್ದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಆದರೆ, ಪೋಸ್ಟ್ ಮಾರ್ಟಂ ನಡೆದು ಏಳು ದಿನಗಳು ಕಳೆದರೂ ವರದಿ ಪೊಲೀಸರ ಕೈಸೇರಲಿಲ್ಲ. ಪೋಸ್ಟ್ ಮಾರ್ಟಂ ಬಳಿಕ ಎರಡು ದಿನದೊಳಗೆ ವರದಿ ಸಿಗಬೇಕಿತ್ತು. ಸದ್ಯ ಪೋಸ್ಟ್ ಮಾರ್ಟ್ಂ, FSL ವರದಿ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಲಿದ್ದಾರೆ.

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣ: ಏಳು ದಿನಗಳಾದರೂ ಪೊಲೀಸರ ಕೈಸೇರದ ಪೋಸ್ಟ್ ಮಾರ್ಟಂ ವರದಿ
ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣ ಸಂಬಂಧ ಏಳು ದಿನಗಳಾದರೂ ಪೊಲೀಸರ ಕೈಸೇರದ ಪೋಸ್ಟ್ ಮಾರ್ಟಂ ವರದಿ
Edited By: Rakesh Nayak Manchi

Updated on: Jan 05, 2024 | 7:52 AM

ಚಿತ್ರದುರ್ಗ, ಜ.5: ಜಿಲ್ಲೆಯಲ್ಲಿ (Chitradurga) ಒಂದೇ ಮನೆಯಲ್ಲಿ ಐದು ಅಸ್ಥಿಪಂಜರಗಳು (Skeleton) ಪತ್ತೆಯಾದ ಪ್ರಕರಣ ಸಂಬಂಧ ಮರಣೋತ್ತರ ಪರೀಕ್ಷೆ ನಡೆದ ಏಳು ದಿನಗಳು ಕಳೆದರೂ ಅದರ ವರದಿ ಪೊಲೀಸರ ಕೈಸೇರಿಲ್ಲ. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ತಜ್ಞ ವೈದ್ಯ ಡಾ.ವೇಣು ಪೋಸ್ಟ್ ಮಾರ್ಟಂ ಮಾಡುವ ಏಕೈಕ ವೈದ್ಯರಾಗಿದ್ದು, ಕೆಲ ದಿನಗಳಿಂದ ತರಬೇತಿ ಕಾರ್ಯಗಾರದಲ್ಲೂ ಭಾಗಿಯಾಗಿದ್ದಾರೆ. ಹೀಗಾಗಿ ವರದಿ ಪೊಲೀಸರ ಕೈಸೇರುವಲ್ಲಿ ವಿಳಂಬವಾಗಿದ್ದು,

ಡಿಸೆಂಬರ್ 28 ರ ರಾತ್ರಿ ಮನೆಯೊಂದರಲ್ಲಿ ಐವರು ವ್ಯಕ್ತಿಗಳ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಡಿ. 29 ರಂದು ಅಸ್ಥಿಪಂಜರಗಳನ್ನು ಪೊಲೀಸರು ಜೆಎಂಐಟಿ ಶವಾಗಾರಕ್ಕೆ ರವಾನಿಸಿದ್ದರು. ಡಿಸೆಂಬರ್ 30 ರಂದು ಮರಣೋತ್ತರ ಪರೀಕ್ಷೆ ನಡೆದಿತ್ತು. ಎರಡು ದಿನಗಳಲ್ಲಿ ಪೊಲೀಸರ ಕೈ ಸೇರಬೇಕಾಗಿದ್ದ ವರದಿ ನಾಳೆ ಸಂಜೆ ವೇಳೆಗೆ ಕೈಸೇರುವ ಸಾಧ್ಯತೆ ಇದೆ.

ಇದನ್ನೂ ಓದಿ: ಚಿತ್ರದುರ್ಗ ಅಸ್ಥಿಪಂಜರ ಪತ್ತೆ ಪ್ರಕರಣ: ಆತ್ಮಹತ್ಯೆಗೆ ಶರಣಾದ ಜಗನ್ನಾಥರೆಡ್ಡಿ ಕುಟುಂಬ? ಡೆತ್​​ ನೋಟ್​ನಿಂದ ರಿವೀಲ್​ ಆಯ್ತು ಹಲವು ಅಂಶ

ಅಸ್ಥಿಪಂಚರಗಳ ಸ್ಯಾಂಪಲ್ ಎಫ್​ಎಸ್​ಎಲ್​ಗೆ ರವಾನೆ

ಹೆಚ್ಚಿನ ಪರೀಕ್ಷೆಗಾಗಿ ಮೃತ ವ್ಯಕ್ತಿಗಳ ಮೂಳೆ, ಚರ್ಮ ಸೇರಿದಂತೆ ಇತರೆ ಸ್ಯಾಪಂಲ್​ಗಳನ್ನು ಪೊಲೀಸರು ಬೆಂಗಳೂರಿನ ಎಫ್​ಎಸ್​ಎಲ್ ಕೇಂದ್ರಕ್ಕೆ ರವಾನೆ ಮಾಡಿದ್ದಾರೆ. ಮುಂದಿನ ವಾರದಲ್ಲಿ ಇದರ ವರದಿ ಸಿಗುವ ನಿರೀಕ್ಷೆ ಇದೆ ಎಂದು ಪೊಲೀಸ್ ಮೂಲಗಳಿಂದ ಟಿವಿ9ಗೆ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಪೊಲೀಸರು ಮರಣೋತ್ತರ ಪರೀಕ್ಷೆ ವರದಿ ಹಾಗೂ ಎಫ್​ಎಸ್​ಎಲ್ ವರದಿ ಆಧರಿಸಿ ತನಿಖೆ ನಡೆಸಲಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಸವರಾಜ ಮುದನೂರ್, ಚಿತ್ರದುರ್ಗ

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us