AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದ್ದ ಚಿನ್ನ ಖರೀದಿಸಿದ ಚಿತ್ರದುರ್ಗದ ಚಿನ್ನದ ವ್ಯಾಪಾರಿ ಸಿಸಿಬಿ ವಶಕ್ಕೆ!

ಚಿನ್ನಗಳ್ಳರು ನೀಡಿದ ಮಾಹಿತಿ ಮೇರೆಗೆ ಚಿನ್ನ ರಿಕವರಿಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಿವಿಧ ಜ್ಯುವೆಲ್ಲರಿ ಅಂಗಡಿಗಳವರು ಕಳ್ಳರ ಜತೆಗೆ ನಂಟು ಹೊಂದಿದ್ದು, ಪೊಲೀಸರ ತನಿಖೆಯಿಂದ ಸತ್ಯಾಂಶ ಬಯಲಾಗಬೇಕಿದೆ.

ಕದ್ದ ಚಿನ್ನ ಖರೀದಿಸಿದ ಚಿತ್ರದುರ್ಗದ ಚಿನ್ನದ ವ್ಯಾಪಾರಿ ಸಿಸಿಬಿ ವಶಕ್ಕೆ!
ವ್ಯಾಪಾರಿ ವಿನಯ್ನನ್ನ ವಶಕ್ಕೆ ಪಡೆದ ಸಿಸಿಬಿ ಪೊಲೀಸರು
TV9 Web
| Edited By: |

Updated on: Aug 12, 2021 | 10:34 AM

Share

ಚಿತ್ರದುರ್ಗ: ಬೆಂಗಳೂರಿನ ಸಿಸಿಬಿ (CCB) ಪೊಲೀಸರು ಕಾರ್ಯಾಚರಣೆ ನಡೆಸಿ ಕದ್ದ ಚಿನ್ನ ಖರೀದಿಸಿದ್ದ ಜ್ಯುವೆಲ್ಲರಿ ವ್ಯಾಪಾರಿಯನ್ನು ವಶಕ್ಕೆ ಪಡೆದ ಘಟನೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ. ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿ ಆಗಿರುವ ಕಳ್ಳರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹಿರಿಯೂರಿಗೆ ಆಗಮಿಸಿದ್ದರು. ಹಿರಿಯೂರು ಪಟ್ಟಣದ ಮುಖ್ಯ ರಸ್ತೆಯಲ್ಲಿನ ತೇರುಮಲ್ಲೇಶ್ವರ ದೇಗುಲ ಕ್ರಾಸ್​ನಲ್ಲಿರುವ ವಾಸವಿ ಜ್ಯುವೆಲ್ಲರಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ವಾಸವಿ ಜ್ಯುವೆಲ್ಲರಿ ಮಾಲೀಕ ಶ್ರೇಯಸ್ ನಾಪತ್ತೆ ಆಗಿದ್ದು, ಅಂಗಡಿಯಲ್ಲಿದ್ದ ಶ್ರೇಯಸ್ ಸಂಬಂಧಿ ವಿನಯ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಆರೋಪಿ ವಿನಯ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ತೆರಳಿದ್ದಾರೆ. ಆದರೆ ಸಿಸಿಬಿ ಪೊಲೀಸರ ವಶದಲ್ಲಿರುವ ಕಳ್ಳತನದ ಆರೋಪಿಗಳು ಯಾರು? ಅವರಿಂದ ಹೊರ ಬಿದ್ದ ಮಾಹಿತಿ ಏನು? ಎಷ್ಟೆಲ್ಲಾ ಮೌಲ್ಯದ ಕದ್ದ ಚಿನ್ನಾಭರಣ ವಾಸವಿ ಜ್ಯುವೆಲ್ಲರಿಗೆ ನೀಡಿದ್ದರು ಎಂಬುದು ಸಿಸಿಬಿ ಪೊಲೀಸರಿಂದ ತಿಳಿದು ಬರಬೇಕಿದೆ.

ಚಿನ್ನಗಳ್ಳರು ನೀಡಿದ ಮಾಹಿತಿ ಮೇರೆಗೆ ಚಿನ್ನ ರಿಕವರಿಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಿವಿಧ ಜ್ಯುವೆಲ್ಲರಿ ಅಂಗಡಿಗಳವರು ಕಳ್ಳರ ಜತೆಗೆ ನಂಟು ಹೊಂದಿದ್ದು, ಪೊಲೀಸರ ತನಿಖೆಯಿಂದ ಸತ್ಯಾಂಶ ಬಯಲಾಗಬೇಕಿದೆ.

ಇದನ್ನೂ ಓದಿ

Kinnaur Landslide: ಹಿಮಾಚಲ ಪ್ರದೇಶದ ಭೂಕುಸಿತದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆ; ಮಣ್ಣಿನಡಿ ಸಿಲುಕಿರುವ ಬಸ್​

ಲಕ್ಷ ರೂ ಲಂಚ ಕೇಳಿದ ಪೊಲೀಸರು, ಯುವಕ ಆತ್ಮಹತ್ಯೆ: ಪೊಲೀಸ್​ ಕಾನ್ಸ್​​ಟೇಬಲ್, ಎಸ್​ಐ ಸಸ್ಪೆಂಡ್​

(CCB police have arrested a gold dealer who Purchased the stolen gold at Chitradurga)

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ