AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಟಿಟಿ ವಾಹನ ಪಲ್ಟಿಯಾಗಿ ಮೂವರು ದುರ್ಮರಣ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಟಿಪ್ಪರ್ ವಾಹನ ಒಂದು ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಕೆರೆಯಲ್ಲಿ ಹಸು ತೊಳೆಯಲು ಹೋಗಿದ್ದ ಮೂವರು ನೀರುಪಾಲಾಗಿರುವಂತಹ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ಘಟನೆ ನಡೆದಿದೆ.

ಚಿತ್ರದುರ್ಗ: ಟಿಟಿ ವಾಹನ ಪಲ್ಟಿಯಾಗಿ ಮೂವರು ದುರ್ಮರಣ
ಚಿತ್ರದುರ್ಗ: ಟಿಟಿ ವಾಹನ ಪಲ್ಟಿಯಾಗಿ ಮೂವರು ದುರ್ಮರಣ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Mar 29, 2025 | 12:21 PM

Share

ಚಿತ್ರದುರ್ಗ, ಮಾರ್ಚ್​ 29: ಟಿಟಿ ವಾಹನ ಪಲ್ಟಿಯಾಗಿ ಮೂವರು ಜನರು ದುರ್ಮರಣ (death) ಹೊಂದಿರುವಂತಹ ಘಟನೆ ಜಿಲ್ಲೆಯ ಚಳ್ಳಕೆರೆ (Challakere) ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಶಂಕರಿಬಾಯಿ(65), ಕುಮಾರ ನಾಯ್ಕ್(46) ಮತ್ತು ಶ್ವೇತಾ(38) ಮೃತರು. ಐವರಿಗೆ ಗಂಭೀರ ಗಾಯಗಳಾಗಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೆರೆಯಲ್ಲಿ ಹಸು ತೊಳೆಯಲು ಹೋಗಿದ್ದ ಮೂವರು ನೀರುಪಾಲು

ಕೆರೆಯಲ್ಲಿ ಹಸು ತೊಳೆಯಲು ಹೋಗಿದ್ದ ಮೂವರು ನೀರುಪಾಲಾಗಿರುವಂತಹ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ನಡೆದಿದೆ. ಮುದ್ದೇಗೌಡ(48), ಬಸವೇಗೌಡ(45), ವಿನೋದ್(17) ಮೃತರು. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು, ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ಕಿಮ್ಸ್

ಇದನ್ನೂ ಓದಿ
Image
ಒಬ್ಬೊಬ್ಬರಾಗಿ ಸುರಕ್ಷಿತವಾಗಿ ಮನೆ ಸೇರಿದ ದಾವಣಗೆರೆಯ 22 ಹಕ್ಕಿಪಿಕ್ಕಿ ಜನರು
Image
ಪಾದಚಾರಿಗೆ ಡಿಕ್ಕಿ ಹೊಡೆದು ರಸ್ತೆಯುದ್ದಕ್ಕೂ ಎಳೆದೊಯ್ದ ಕಾರು
Image
ಯುಗಾದಿಗೆ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗ್ತೀರಾ? ಈ ಸೂಚನೆ ಗಮನಿಸಿ
Image
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?

ಹಬ್ಬ ಹಿನ್ನೆಲೆ ಹಸುಗಳನ್ನು ತೊಳೆಯಲು ವಿನೋದ್ ಕೆರೆಗೆ ಹೋಗಿದ್ದರು. ಈ ವೇಳೆ ವಿನೋದ್‌ನನ್ನು ಹಸು ಕೆರೆಗೆ ಎಳೆದೊಯ್ದಿದೆ. ಆತನ ರಕ್ಷಣೆಗೆ ಮುದ್ದೇಗೌಡ ಮತ್ತು ಬಸವೇಗೌಡ ಕೆರೆಗೆ ಇಳಿದಿದ್ದಾರೆ. ಆದರೆ ಈಜು ಬಾರದೆ ನೀರಿನಲ್ಲಿ ಮುಳುಗಿ ಮೂವರೂ ಸಾವನ್ನಪ್ಪಿದ್ದಾರೆ.

ಸರ್ಜಾಪುರ ತ್ರಿಬಲ್ ಮರ್ಡರ್ ಆರೋಪಿಗಳು ಅರೆಸ್ಟ್

ತ್ರಿಬಲ್ ಮರ್ಡರ್ ಆರೋಪಿಗಳನ್ನು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಸೋನು(24) ಮತ್ತು ಸುಧೀರ್(23) ಬಂಧಿತರು. ಮಾರ್ಚ್​ 15 ರಂದು ತ್ರಿಬಲ್ ಮರ್ಡರ್ ಮಾಡಲಾಗಿತ್ತು.

ಅನ್ಷು, ರಾಧೆಶ್ಯಾಮ್ ಮತ್ತು ದೀಪು‌ ಎಂಬುವವರನ್ನು ಕೊಲೆ ಮಾಡಲಾಗಿತ್ತು. ಸರ್ಜಾಪುರ ಸಮೀಪದ ನಿರ್ಮಾಣ ಹಂತದ ಅಪಾರ್ಟ್ಮೆಂಟ್​ನಲ್ಲಿ ಘಟನೆ ನಡೆದಿತ್ತು. ಕೊಲೆ ಮಾಡಲೆಂದೇ ಎಣ್ಣೆ ಪಾರ್ಟಿಗೆ ಆರೋಪಿಗಳು ಕರೆಸಿಕೊಂಡಿದ್ದರು. ಕಂಠಪೂರ್ತಿ ಕುಡಿಸಿ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಲಾಗಿತ್ತು.

ಕುಖ್ಯಾತ ಕಳ್ಳ ನವೀನ್ ಕುಮಾರ್​ ಅಲಿಯಾಸ್​ ಅಣ್ಣಾಬಾಂಡ್​ ಬಂಧನ

ಕುಖ್ಯಾತ ಕಳ್ಳ ನವೀನ್ ಕುಮಾರ್​ ಅಲಿಯಾಸ್​ ಅಣ್ಣಾಬಾಂಡ್​ ನನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿಸಿಕೊಂಡು ಓಡಾಡ್ತಿದ್ದ ಆರೋಪಿ ನವೀನ್ ಕುಮಾರ್​@ ಅಣ್ಣಾಬಾಂಡ್​​ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಅತ್ಯಾಚಾರ, ಕೊಲೆ, ಸುಲಿಗೆ ಸೇರಿ 54 ಪ್ರಕರಣದಲ್ಲಿ ಭಾಗಿಯಾಗಿದ್ದ.

ಇದನ್ನೂ ಓದಿ: ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ತುಂಬಿಟ್ಟ ಪ್ರಕರಣ: ಆರೋಪಿ ಸಿಕ್ಕಿಬಿದ್ದಿದ್ಹೇಗೆ? ಬೆಂಗಳೂರು ಪೊಲೀಸರು ಹೇಳಿದ್ದಿಷ್ಟು

ದಾವಣಗೆರೆ ನಗರದ ಡಿಆರ್ ಮೈದಾನದಲ್ಲಿ ನಡೆದಿದ್ದ ಪೊಲೀಸ್​ ಪರೇಡ್​​ ವೇಳೆ ದಾವಣಗೆರೆ ನಗರ DySP ಶರಣಬಸವೇಶ್ವರ, ವಿದ್ಯಾನಗರ ಇನ್ಸ್​ಪೆಕ್ಟರ್ ಶಿಲ್ಪಾ, ಸಿಬ್ಬಂದಿ ಚಂದ್ರು ಸೇರಿ ಹಲವರಿಗೆ ಐಜಿಪಿ ಡಾ.BR ರವಿಕಾಂತೇಗೌಡ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:47 am, Sat, 29 March 25

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More