AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದೆಯಲ್ಲಿ ಕ್ರಿಮಿನಾಶಕ- FSLನಿಂದ ವರದಿ ಬಹಿರಂಗ; ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ

ಪೋಷಕರು ಬಾಲಕಿಯನ್ನು ಕೂಲಿಗೆ ಕಳಿಸಿ, ಬೈಯ್ಯುತ್ತಿದ್ದ ಹಿನ್ನೆಲೆ ಮನನೊಂದಿದ್ದ ಬಾಲಕಿ ಕುಟುಂಬಸ್ಥರಿಗೆ ವಿಷ ಹಾಕಿ ಕೊಂದಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.

ಮುದ್ದೆಯಲ್ಲಿ ಕ್ರಿಮಿನಾಶಕ- FSLನಿಂದ ವರದಿ ಬಹಿರಂಗ; ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ
ಇಸಾಮುದ್ರ ಗ್ರಾಮ
TV9 Web
| Edited By: ಸಾಧು ಶ್ರೀನಾಥ್​|

Updated on:Oct 18, 2021 | 8:53 AM

Share

ಚಿತ್ರದುರ್ಗ: ವಿಷಯುಕ್ತ ಆಹಾರ ಸೇವನೆಯಿಂದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಹಾರದಲ್ಲಿ ವಿಷವಿರುವ ಬಗ್ಗೆ FSL ವರದಿಯಲ್ಲಿ ಬಹಿರಂಗವಾಗಿದೆ. ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ಜುಲೈ 12ರಂದು ಈ ಘಟನೆ ನಡೆದಿತ್ತು.

ಜುಲೈ 12ರಂದು ರಾತ್ರಿ ಮೃತರು ಮುದ್ದೆ, ಹೆಸರುಕಾಳು ಸಾರು, ಅನ್ನ ಸೇವಿಸಿದ್ದರು. ಆಹಾರ ಸೇವಿಸಿದ್ದ ತಿಪ್ಪಾನಾಯ್ಕ್(46), ಸುಧಾಬಾಯಿ(43), ರಮ್ಯಾ(16), ಗುಂಡಿಬಾಯಿ(75) ಮೃತಪಟ್ಟಿದ್ದರು. ಮುದ್ದೆಯಲ್ಲಿ ಕ್ರಿಮಿನಾಶಕ ಬೆರೆಸಿರುವ ಬಗ್ಗೆ FSLನಿಂದ ವರದಿ ಬಂದಿದೆ. ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ ಕೇಳಿ ಬರುತ್ತಿದೆ. ಪೋಷಕರು ಬಾಲಕಿಯನ್ನು ಕೂಲಿಗೆ ಕಳಿಸಿ, ಬೈಯ್ಯುತ್ತಿದ್ದ ಹಿನ್ನೆಲೆ ಮನನೊಂದಿದ್ದ ಬಾಲಕಿ ಕುಟುಂಬಸ್ಥರಿಗೆ ವಿಷ ಹಾಕಿ ಕೊಂದಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.

ಘಟನೆಯಲ್ಲಿ ರಾಹುಲ್ (18) ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು ರಕ್ಷಿತಾ(17) ಮಾತ್ರ ಸುರಕ್ಷಿತವಾಗಿದ್ದಾಳೆ. ಹೊಟ್ಟೆ ನೋವಿನ ಕಾರಣ ಅನ್ನ, ಸಾರು ಮಾತ್ರ ಸೇವಿಸಿದ್ದೆ ಎಂದು ರಕ್ಷಿತ ವಿಚಾರಣೆ ವೇಳೆ ತಿಳಿಸಿದ್ದಾಳೆ. ಭರಮಸಾಗರ ಠಾಣೆ ಪೊಲೀಸರಿಂದ ಪ್ರಕರಣ ಬಯಲಾಗಿದ್ದು ಭರಮಸಾಗರ ಪೊಲೀಸರಿಂದ ಬಾಲಕಿ ರಕ್ಷಿತಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು; ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

Published On - 8:38 am, Mon, 18 October 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!