AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದೆಯಲ್ಲಿ ಕ್ರಿಮಿನಾಶಕ- FSLನಿಂದ ವರದಿ ಬಹಿರಂಗ; ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ

ಪೋಷಕರು ಬಾಲಕಿಯನ್ನು ಕೂಲಿಗೆ ಕಳಿಸಿ, ಬೈಯ್ಯುತ್ತಿದ್ದ ಹಿನ್ನೆಲೆ ಮನನೊಂದಿದ್ದ ಬಾಲಕಿ ಕುಟುಂಬಸ್ಥರಿಗೆ ವಿಷ ಹಾಕಿ ಕೊಂದಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.

ಮುದ್ದೆಯಲ್ಲಿ ಕ್ರಿಮಿನಾಶಕ- FSLನಿಂದ ವರದಿ ಬಹಿರಂಗ; ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ
ಇಸಾಮುದ್ರ ಗ್ರಾಮ
TV9 Web
| Edited By: |

Updated on:Oct 18, 2021 | 8:53 AM

Share

ಚಿತ್ರದುರ್ಗ: ವಿಷಯುಕ್ತ ಆಹಾರ ಸೇವನೆಯಿಂದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಹಾರದಲ್ಲಿ ವಿಷವಿರುವ ಬಗ್ಗೆ FSL ವರದಿಯಲ್ಲಿ ಬಹಿರಂಗವಾಗಿದೆ. ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ಜುಲೈ 12ರಂದು ಈ ಘಟನೆ ನಡೆದಿತ್ತು.

ಜುಲೈ 12ರಂದು ರಾತ್ರಿ ಮೃತರು ಮುದ್ದೆ, ಹೆಸರುಕಾಳು ಸಾರು, ಅನ್ನ ಸೇವಿಸಿದ್ದರು. ಆಹಾರ ಸೇವಿಸಿದ್ದ ತಿಪ್ಪಾನಾಯ್ಕ್(46), ಸುಧಾಬಾಯಿ(43), ರಮ್ಯಾ(16), ಗುಂಡಿಬಾಯಿ(75) ಮೃತಪಟ್ಟಿದ್ದರು. ಮುದ್ದೆಯಲ್ಲಿ ಕ್ರಿಮಿನಾಶಕ ಬೆರೆಸಿರುವ ಬಗ್ಗೆ FSLನಿಂದ ವರದಿ ಬಂದಿದೆ. ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ ಕೇಳಿ ಬರುತ್ತಿದೆ. ಪೋಷಕರು ಬಾಲಕಿಯನ್ನು ಕೂಲಿಗೆ ಕಳಿಸಿ, ಬೈಯ್ಯುತ್ತಿದ್ದ ಹಿನ್ನೆಲೆ ಮನನೊಂದಿದ್ದ ಬಾಲಕಿ ಕುಟುಂಬಸ್ಥರಿಗೆ ವಿಷ ಹಾಕಿ ಕೊಂದಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.

ಘಟನೆಯಲ್ಲಿ ರಾಹುಲ್ (18) ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು ರಕ್ಷಿತಾ(17) ಮಾತ್ರ ಸುರಕ್ಷಿತವಾಗಿದ್ದಾಳೆ. ಹೊಟ್ಟೆ ನೋವಿನ ಕಾರಣ ಅನ್ನ, ಸಾರು ಮಾತ್ರ ಸೇವಿಸಿದ್ದೆ ಎಂದು ರಕ್ಷಿತ ವಿಚಾರಣೆ ವೇಳೆ ತಿಳಿಸಿದ್ದಾಳೆ. ಭರಮಸಾಗರ ಠಾಣೆ ಪೊಲೀಸರಿಂದ ಪ್ರಕರಣ ಬಯಲಾಗಿದ್ದು ಭರಮಸಾಗರ ಪೊಲೀಸರಿಂದ ಬಾಲಕಿ ರಕ್ಷಿತಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು; ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

Published On - 8:38 am, Mon, 18 October 21

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ