AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದೆಯಲ್ಲಿ ಕ್ರಿಮಿನಾಶಕ- FSLನಿಂದ ವರದಿ ಬಹಿರಂಗ; ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ

ಪೋಷಕರು ಬಾಲಕಿಯನ್ನು ಕೂಲಿಗೆ ಕಳಿಸಿ, ಬೈಯ್ಯುತ್ತಿದ್ದ ಹಿನ್ನೆಲೆ ಮನನೊಂದಿದ್ದ ಬಾಲಕಿ ಕುಟುಂಬಸ್ಥರಿಗೆ ವಿಷ ಹಾಕಿ ಕೊಂದಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.

ಮುದ್ದೆಯಲ್ಲಿ ಕ್ರಿಮಿನಾಶಕ- FSLನಿಂದ ವರದಿ ಬಹಿರಂಗ; ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ
ಇಸಾಮುದ್ರ ಗ್ರಾಮ
TV9 Web
| Updated By: ಸಾಧು ಶ್ರೀನಾಥ್​|

Updated on:Oct 18, 2021 | 8:53 AM

Share

ಚಿತ್ರದುರ್ಗ: ವಿಷಯುಕ್ತ ಆಹಾರ ಸೇವನೆಯಿಂದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಹಾರದಲ್ಲಿ ವಿಷವಿರುವ ಬಗ್ಗೆ FSL ವರದಿಯಲ್ಲಿ ಬಹಿರಂಗವಾಗಿದೆ. ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ಜುಲೈ 12ರಂದು ಈ ಘಟನೆ ನಡೆದಿತ್ತು.

ಜುಲೈ 12ರಂದು ರಾತ್ರಿ ಮೃತರು ಮುದ್ದೆ, ಹೆಸರುಕಾಳು ಸಾರು, ಅನ್ನ ಸೇವಿಸಿದ್ದರು. ಆಹಾರ ಸೇವಿಸಿದ್ದ ತಿಪ್ಪಾನಾಯ್ಕ್(46), ಸುಧಾಬಾಯಿ(43), ರಮ್ಯಾ(16), ಗುಂಡಿಬಾಯಿ(75) ಮೃತಪಟ್ಟಿದ್ದರು. ಮುದ್ದೆಯಲ್ಲಿ ಕ್ರಿಮಿನಾಶಕ ಬೆರೆಸಿರುವ ಬಗ್ಗೆ FSLನಿಂದ ವರದಿ ಬಂದಿದೆ. ಮಗಳೇ ಆಹಾರದಲ್ಲಿ ವಿಷವಿಟ್ಟು ನಾಲ್ವರನ್ನ ಕೊಂದ ಆರೋಪ ಕೇಳಿ ಬರುತ್ತಿದೆ. ಪೋಷಕರು ಬಾಲಕಿಯನ್ನು ಕೂಲಿಗೆ ಕಳಿಸಿ, ಬೈಯ್ಯುತ್ತಿದ್ದ ಹಿನ್ನೆಲೆ ಮನನೊಂದಿದ್ದ ಬಾಲಕಿ ಕುಟುಂಬಸ್ಥರಿಗೆ ವಿಷ ಹಾಕಿ ಕೊಂದಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.

ಘಟನೆಯಲ್ಲಿ ರಾಹುಲ್ (18) ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು ರಕ್ಷಿತಾ(17) ಮಾತ್ರ ಸುರಕ್ಷಿತವಾಗಿದ್ದಾಳೆ. ಹೊಟ್ಟೆ ನೋವಿನ ಕಾರಣ ಅನ್ನ, ಸಾರು ಮಾತ್ರ ಸೇವಿಸಿದ್ದೆ ಎಂದು ರಕ್ಷಿತ ವಿಚಾರಣೆ ವೇಳೆ ತಿಳಿಸಿದ್ದಾಳೆ. ಭರಮಸಾಗರ ಠಾಣೆ ಪೊಲೀಸರಿಂದ ಪ್ರಕರಣ ಬಯಲಾಗಿದ್ದು ಭರಮಸಾಗರ ಪೊಲೀಸರಿಂದ ಬಾಲಕಿ ರಕ್ಷಿತಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು; ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

Published On - 8:38 am, Mon, 18 October 21

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ