AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ 5 ಅಸ್ಥಿಪಂಜರ ಸಿಕ್ಕ ಪ್ರಕರಣ: ಆತ್ಮಹತ್ಯೆ ಮಾಡಿಕೊಂಡಿತಾ ಜಗನ್ನಾಥರೆಡ್ಡಿ ಕುಟುಂಬ?

ಚಿತ್ರದುರ್ಗದ ಚಳ್ಳಕೆರೆ ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ ಆಗಿವೆ. ಈ ಮನೆಯಲ್ಲಿ ನಿವೃತ್ತ ಇಂಜಿನಿಯರ್ ಜಗನ್ನಾಥರೆಡ್ಡಿ (80) ಮತ್ತು ಅವರ ಕುಟುಂಬ ವಾಸವಾಗಿತ್ತು. ಈ ಕುಟುಂಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಚಿತ್ರದುರ್ಗದಲ್ಲಿ 5 ಅಸ್ಥಿಪಂಜರ ಸಿಕ್ಕ ಪ್ರಕರಣ: ಆತ್ಮಹತ್ಯೆ ಮಾಡಿಕೊಂಡಿತಾ ಜಗನ್ನಾಥರೆಡ್ಡಿ ಕುಟುಂಬ?
ಜಗನ್ನಾಥರೆಡ್ಡಿ ಮನೆಯಲ್ಲಿ ಪೊಲೀಸರ ಶೋಧ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ವಿವೇಕ ಬಿರಾದಾರ|

Updated on:Dec 29, 2023 | 2:17 PM

Share

ಚಿತ್ರದುರ್ಗ, ಡಿಸೆಂಬರ್​​ 29: ನಗರದ ಚಳ್ಳಕೆರೆ (Challakere) ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ (Skeleton) ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ನಾಥರೆಡ್ಡಿ ಕುಟುಂಬ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತಹತ್ಯೆಗೆ ಶರಣಾಗಿದ್ದಾರೆ ಎಂಬ ಅಂಶ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಪೊಲೀಸರು ಡೆತ್ ನೋಟ್ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ 2013ರಲ್ಲಿ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದನು. ಇದೇ ವರ್ಷ ನರೇಂದ್ರರೆಡ್ಡಿ ಗೆಳೆಯರ ಜತೆ ಸೇರಿ ಬಿಡದಿ ಬಳಿ ವಾಹನವೊಂದನ್ನು ತಡೆದು ದರೋಡೆ ಮಾಡಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದನು. ಈ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ಕೆಲದಿನಗಳ ಕಾಲ ಜೈಲಿನಲ್ಲಿದ್ದನು. ನರೇಂದ್ರರೆಡ್ಡಿಯ ಈ ಕೃತ್ಯದಿಂದ ಮನನೊಂದ ಕುಟುಂಬ, ಡೆತ್​ ನೋಟ್​ ಬರೆದಿಟ್ಟು 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದೆ. ಈ ಎಲ್ಲ ವಿಷಯ ಡೆತ್​ ನೋಟ್​ನಲ್ಲಿದೆ.

ಇದನ್ನೂ ಓದಿ: ಪಾಳುಬಿದ್ದ ಮನೆಯಲ್ಲಿ ನಿಗೂಢ ಐದು ಅಸ್ಥಿಪಂಜರ ಪತ್ತೆ

ಇನ್ನು 2019ರ ಜನವರಿಯಲ್ಲಿ ಕೊನೆಯದಾಗಿ ವಿದ್ಯುತ್ ಬಿಲ್ ಪಾವತಿಸಲಾಗಿದೆ. ಈವರೆಗೆ 2,850 ರೂ. ಕರೆಂಟ್ ಬಿಲ್ ಬಾಕಿ ಉಳಿದಿದೆ. ನಿವೃತ್ತ ಇಂಜಿನಿಯರ್ ಪಿಂಚಣಿಗಾಗಿ ಪ್ರತಿವರ್ಷ ಅರ್ಜಿ ಸಲ್ಲಿಸುತ್ತಿದ್ದರು. ಇನ್ನು ಕುಟುಂಬ ಚಿನ್ನ ಅಡವಿಟ್ಟು ಸಾಲ ಪಡೆದಿರುವ ಮಾಹಿತಿ ಪೊಲೀಸರಿಗೆ ದೊರೆತಿದೆ. ಒಟ್ಟಾರೆಯಾಗಿ ಪೊಲೀಸರು ಎಲ್ಲ ಆಯಾಮದಲ್ಲಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಕೊರೊನಾದಿಂದ ಸತ್ತಿದ್ದಾರಾ ಎಂದು ತನಿಖೆ: ಪರಮೇಶ್ವರ್​

ಮನೆಯಲ್ಲಿ ಅಸ್ಥಿಪಂಜರಗಳು ಸಿಕ್ಕ ಕುರಿತು ತನಿಖೆ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸದ್ಯ ಅಸ್ಥಿಪಂಜರ ಸಿಕ್ಕಿರುವ ಮಾಹಿತಿ ಅಷ್ಟೇ ಇದೆ. ಕೊರೊನಾದಿಂದ ಸತ್ತಿದ್ದಾರಾ ಎಂದು ತನಿಖೆ ಮಾಡುತ್ತೇವೆ ಎಂದು ಗೃಹಸಚಿವ ಡಾ. ಜಿ ಪರಮೇಶ್ವರ್ ಹೇಳಿದರು

ಈ ಬಗ್ಗೆ ಜಗನ್ನಾಥರೆಡ್ಡಿ ಸಂಬಂಧಿ ಪವನ್ ಕುಮಾರ್ ಮಾತನಾಡಿ ಜಗನ್ನಾಥರೆಡ್ಡಿ (80) ನಿವೃತ್ತ ಇಂಜಿನಿಯರ್ ಆಗಿದ್ದರು. ಸುಮಾರು ವರ್ಷಗಳಿಂದ ಜಗನ್ನಾಥರೆಡ್ಡಿ ಕುಟುಂಬ ನಮ್ಮ ಸಂಪರ್ಕದಲ್ಲಿರಲಿಲ್ಲ. ನಮ್ಮ ಮನೆಗೆ ಅವರು ಬರುತ್ತಿರಲಿಲ್ಲ, ಅವರ ಮನೆಗೆ ನಾವು ಹೋಗುತ್ತಿರಲಿಲ್ಲ. ಕೆಲ ವರ್ಷಗಳಿಂದ ಜಗನ್ನಾಥರೆಡ್ಡಿ ಮತ್ತು ಕುಟುಂಬದವರು ಕಂಡಿಲ್ಲ. ಜಗನ್ನಾಥರೆಡ್ಡಿ ಮನೆಯಲ್ಲಿ ಪತ್ತೆ ಆಗಿರುವ ಅಸ್ಥಿಪಂಜರ ಅವರದ್ದೇ ಆಗಿರಬಹುದು. ಮೂರು ವರ್ಷದ ಹಿಂದೆಯೇ ಅವರು ಮನೆಯಲ್ಲೇ ಮೃತಪಟ್ಟಿರಬಹುದು ಎಂದು ಶಂಕಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:00 pm, Fri, 29 December 23

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More