AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದ ಬಳಿ ಭೀಕರ ಅಪಘಾತ: ಡಿವೈಡರ್​ಗೆ ಕಾರ್ ಡಿಕ್ಕಿಯಾಗಿ ಮೂವರ ಸಾವು, ಇಬ್ಬರಿಗೆ ಗಂಭೀರ ಗಾಯ

ರೋಡ್ ಡಿವೈಡರ್​ಗೆ ಕಾರ್ ಡಿಕ್ಕಿಯಾಗಿ ಕಾರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಚಿತ್ರದುರ್ಗದ ಬಳಿ ಭೀಕರ ಅಪಘಾತ: ಡಿವೈಡರ್​ಗೆ ಕಾರ್ ಡಿಕ್ಕಿಯಾಗಿ ಮೂವರ ಸಾವು, ಇಬ್ಬರಿಗೆ ಗಂಭೀರ ಗಾಯ
ಚಿತ್ರದುರ್ಗದ ಬಳಿ ಭೀಕರ ಅಪಘಾತ
TV9 Web
| Edited By: |

Updated on:Oct 25, 2022 | 7:35 AM

Share

ಚಿತ್ರದುರ್ಗ: ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ತಡರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ. ರೋಡ್ ಡಿವೈಡರ್​ಗೆ ಕಾರ್ ಡಿಕ್ಕಿಯಾಗಿ ಕಾರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಈವರೆಗೆ ಮೃತರ ಗುರುತು ಪತ್ತೆ ಆಗಿಲ್ಲ. ಇಬ್ಬರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿತ್ರದುರ್ಗ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುರಿಗಳನ್ನು ಸಾಗಿಸುತ್ತಿದ್ದ ವಾಹನ ಅಪಘಾತ

ಕಾರವಾರ: ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಾಲೂಕು ಆಸ್ಪತ್ರೆ ಬಳಿ ಕುರಿಗಳನ್ನ ಸಾಗಿಸುತ್ತಿದ್ದ ವಾಹನ ವಿದ್ಯುತ್​ ಕಂಬಕ್ಕೆ ಡಿಕ್ಕಿಯಾಗಿ 7 ಕುರಿಗಳು ಮೃತಪಟ್ಟಿವೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಾಹನದಲ್ಲಿ 30ಕ್ಕೂ ಅಧಿಕ ಕುರಿಗಳನ್ನು ಸಾಗಿಸಲಾಗುತ್ತಿತ್ತು. ಡಿಕ್ಕಿಯಾದ ರಭಸಕ್ಕೆ ವಾಹನ ಜಖಂ ಆಗಿದ್ದು ವಾಹನದ ಹಿಂಬದಿ ಕುಳಿತಿದ್ದ ಕುರಿಗಾಹಿ ಕಾಲು ಮುರಿದಿದೆ. ಗಾಯಾಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಡರಾತ್ರಿ 2 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ.

ಮೈಸೂರಿನಲ್ಲಿ ಹೆಚ್ಚುತ್ತಿರುವ ಗಾಂಜಾ ಇಸ್ಪೀಟ್ ದಂಧೆ

ಮೈಸೂರು ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಗಾಂಜಾ ಇಸ್ಪೀಟ್ ದಂಧೆಯಲ್ಲಿ ತೊಡಗಿದ್ದವರನ್ನು ಅರೆಸ್ಟ್ ಮಾಡಿದ್ದಾರೆ. ನೆನ್ನೆಯಷ್ಟೇ ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ದಂಧೆಯಲ್ಲಿ ಮತ್ತಷ್ಟು ಜನರು ಇರುವ ಬಗ್ಗೆ ಮಾಹಿತಿ ನೀಡಿದ್ದರು. ನಿನ್ನೆ ಸಿಸಿಬಿ ಪೊಲೀಸರು ಕೊಡಗಿನ ದರ್ಶನ್ ಕುಮಾರ್ (26), ಮೈಸೂರು ಮಂಡಿ ಮೊಹಲ್ಲಾದ ಸಯ್ಯದ್ ಅರ್ಫಾತ್ (28), ಕೊಡಗಿನ ಹ್ಯಾರಿಸ್ (28) ಹಾಗೂ ಎರಡನೇ ಪ್ರಕರಣದಲ್ಲಿ ಗೌಸಿಯಾ ನಗರದ ರಿಯಾಜ್ (24) ಬಂಧಿಸಲಾಗಿತ್ತು. ಬಂಧಿತರು ನೀಡಿರುವ ಮಾಹಿತಿ ಆಧರಿಸಿ ಅದರಂತೆಯೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇವರ ಬಳಿ ಇದ್ದ 23 ಲಕ್ಷ ರೂ ಮೌಲ್ಯದ 46 ಕೆ.ಜಿ. 691 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆಯಲಾಗಿದೆ. 10 ಸಾವಿರ ನಗದು, 3 ಮೊಬೈಲ್ ಫೋನ್‌ ಒಂದು ಕಾರು ವಶಪಡಿಸಿಕೊಳ್ಳಲಾಗಿತ್ತು. ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಮಸ್ಥರಿಗೆ ಗುತ್ತಿಗೆದಾರ ಆವಾಜ್

ಕಳಪೆ ರಸ್ತೆ ಕಾಮಗಾರಿ ಗುಣಮಟ್ಟ ಪ್ರಶ್ನಿಸಿದ ಗ್ರಾಮಸ್ಥರಿಗೆ ಗುತ್ತಿಗೆದಾರ ಆವಾಜ್ ಹಾಕಿದ ಘಟನೆ ಹುಣಸೂರು ತಾಲ್ಲೂಕು ದೇವಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಾಸಕರ ಅನುದಾನದಲ್ಲಿ ರಸ್ತೆ ಕಳಪೆ ಕಾಮಗಾರಿ ಮಾಡಿರುವ ಆರೋಪ ಮಾಡಿದ್ದು ಗುಣಮಟ್ಟದ ಬಗ್ಗೆ ಗುತ್ತಿಗೆದಾರನಿಗೆ ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಈ ವೇಳೆ ಗುತ್ತಿಗೆದಾರ ಗ್ರಾಮಸ್ಥರಿಗೆ ಆವಾಜ್ ಹಾಕಿ ಹೋಗಿದ್ದಾನೆ. ಸದ್ಯ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:20 am, Tue, 25 October 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?