
ಚಿತ್ರದುರ್ಗ, ಮಾರ್ಚ್ 19: ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ (Attack) ಮಾಡಿ ಬಳಿಕ ಮನೆ ಮಂದಿಯ ಮೇಲೆ ಆ್ಯಸಿಡ್ ದಾಳಿ (Acid Attack) ಮಾಡಿ ವ್ಯಕ್ತಿಯೋರ್ವ ಪರಾರಿ ಆಗಿರುವಂತಹ ಘಟನೆ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಸುಹೈಲ್ ಭಾಷಾನಿಂದ ದುಷ್ಕೃತ್ಯ ಎಸಗಲಾಗಿದೆ. ಘಟನೆಯಲ್ಲಿ ಮಹಿಳೆ ತಾಸಿನಾ ಬಾನು ಸೇರಿದಂತೆ ಆಕೆಯ ಸಹೋದರಿ ನೇಹಾ, ಪುತ್ರಿ ಇಕ್ರಾ, ನಗ್ಮಾ ನಾಯ್ಕ್ ಮೇಲೆ ಆ್ಯಸಿಡ್ ದಾಳಿ ಮಾಡಲಾಗಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ತಾಸಿನಾ ಬಾನು ಮತ್ತು ಸುಹೈಲ್ ಭಾಷಾ ಪ್ರೀತಿಸಿ ಮದುವೆಯಾಗಿದ್ದರು. ಚಿತ್ರದುರ್ಗದ ನೆಹರು ನಗರದ ನಿವಾಸಿ ಸುಹೈಲ್ ಭಾಷಾ ಆಟೋ ಚಾಲಕ. ಆದರೆ ಪತಿಯ ಕಿರುಕುಳದಿಂದ ಬೇಸತ್ತು ತಾಸಿನಾ ಕೆಲವು ತಿಂಗಳ ಹಿಂದೆ ಪತಿಯನ್ನ ತೊರೆದು ಬೆಂಗಳೂರಿಗೆ ಬಂದಿದ್ದರು.
ಇದನ್ನೂ ಓದಿ: ಯುವಕನ ಪ್ರಾಣವನ್ನೇ ಬಲಿ ಪಡೆದ ಸ್ನೇಹಿತನ ಸಹೋದರಿ ಜೊತೆಗಿನ ಅಕ್ರಮ ಸಂಬಂಧ: ಗೆಳೆಯನಿಂದಲೇ ನಡೀತು ಭೀಕರ ಹತ್ಯೆ
ರಂಜಾನ್ ಹಬ್ಬಕ್ಕೆಂದು ಇತ್ತ ಚಿತ್ರದುರ್ಗದಲ್ಲಿರುವ ತನ್ನ ಸಹೋದರಿಯ ಮನೆಗೆ ಬಂದಿದ್ದರು. ಈ ವೇಳೆ ಸುಹೈಲ್ ಭಾಷಾ ದುಷ್ಕೃತ್ಯ ಮೆರೆದಿದ್ದಾರೆ. ತನ್ನೊಂದಿಗಿನ ಸಂಬಂಧ ಕಡಿದುಕೊಂಡಿದ್ದಕ್ಕೆ ಕೃತ್ಯವೆಸಗಲಾಗಿದೆ ಎನ್ನಲಾಗುತ್ತಿದೆ.
ಇನ್ನು ಸ್ಥಳಕ್ಕೆ ಎಸ್ಪಿ ರಂಜಿತ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಆಟೋ ಚಾಲಕ ಸುಹೇಲ್ ಬಾಷಾನಿಂದ ವಿಚ್ಛೇದಿತ ಪತ್ನಿ ತಾಸಿನಾ ಬಾನು ಸೇರಿ ನಾಲ್ವರ ಮೇಲೆ ಆ್ಯಸಿಡ್ ದಾಳಿ ಮಾಡಲಾಗಿದೆ. ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ನಾಲ್ವರು ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದರು.
ಇದನ್ನೂ ಓದಿ: ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಭೀಕರವಾಗಿ ಕೊಲೆ: ಭಾವಿ ಪತಿ ಅನುಮಾಕ್ಕೆ ಅಪ್ರಾಪ್ತೆ ಬಲಿ
ತಾಸಿನಾ ಬಾನು ಅಕ್ಕ ನಗ್ಮಾ ನಾಯ್ಕ್ ಮನೆಗೆ ಬಂದಿದ್ದರು. ನಗ್ಮಾ ನಾಯ್ಕ್ ಮನೆಗೆ ಬಂದು ಸುಹೇಲ್ ಬಾಷಾ, ತಾಸಿನಾ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಆ್ಯಸಿಡ್ ದಾಳಿ ಮಾಡಿದ್ದಾನೆ. ಆರೋಪಿ ಸುಹೇಲ್ ಬಾಷಾ ಬಂಧನಕ್ಕೆ ತಂಡ ರಚಿಸಿದ್ದೇವೆ. ಆತನ ವಿರುದ್ಧ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ಎಸ್ಪಿ ರಂಜಿತ್ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:26 pm, Thu, 19 March 26