AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವೇಷಕ್ಕೆ ಬಲಿಯಾದ ಅಡಿಕೆ ಗಿಡಗಳು: ಹಗಲಿರುಳು ಬೆಳೆಸಿದ್ದ ಬೆಳೆ ಬೆಂಕಿಗಾಹುತಿ: ಕಂಗಾಲಾದ ರೈತ

ಬೆಳವಣಿಗೆ ಸಹಿಸದೆ ದ್ವೇಷದಿಂದ ರಾತೋರಾತ್ರಿ 400 ಕ್ಕೂ ಹೆಚ್ಚು ಅಡಿಕೆ ಗಿಡಗಳಿಗೆ ಬೆಂಕಿ ಹಚ್ಚಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಸಲಬೊಮ್ಮನಹಳ್ಳಿ ಗ್ರಾಮದ ನಡೆದಿದೆ. 15 ಲಕ್ಷ ರೂ. ಸಾಲ ಮಾಡಿ ಎರಡು ಎಕರೆಯಲ್ಲಿ 1800 ಅಡಿಕೆ ಗಿಡ ನೆಟ್ಟು ಬೆಳೆದಿದ್ದ ರೈತರು ಇದೀಗ ಕಂಗಾಲಾಗಿದ್ದಾರೆ.

ದ್ವೇಷಕ್ಕೆ ಬಲಿಯಾದ ಅಡಿಕೆ ಗಿಡಗಳು: ಹಗಲಿರುಳು ಬೆಳೆಸಿದ್ದ ಬೆಳೆ ಬೆಂಕಿಗಾಹುತಿ: ಕಂಗಾಲಾದ ರೈತ
ಬೆಂಕಿಗಾಹುತಿಯಾದ ಅಡಿಕೆ
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 13, 2023 | 8:58 PM

Share

ಚಿತ್ರದುರ್ಗ, ನವೆಂಬರ್​​​ 13: ಜಿಲ್ಲೆಯ ಹಿರಿಯೂರು ತಾಲೂಕಿನ ಸಲಬೊಮ್ಮನಹಳ್ಳಿ ಗ್ರಾಮದ ಸರೋಜಮ್ಮ ಮತ್ತು ತಿಪ್ಪೇಸ್ವಾಮಿ ದಂಪತಿ ಕೃಷಿಯನ್ನೇ ಬದುಕಾಗಿಸಿಕೊಂಡಿದ್ದರು. ಎರಡು ಎಕರೆ ಜಮೀನಿನಲ್ಲಿ ಕಳೆದೆರಡು ವರ್ಷದಿಂದ ಅಡಿಕೆ (Areca Nut) ಬೆಳೆ ಬೆಳೆಸಲು ಶ್ರಮಿಸುತ್ತಿದ್ದರು. 15 ಲಕ್ಷ ರೂ. ಸಾಲ ಮಾಡಿ ಎರಡು ಎಕರೆಯಲ್ಲಿ 1800 ಅಡಿಕೆ ಗಿಡ ನೆಟ್ಟು ಬೆಳೆದಿದ್ದರು. ಉತ್ತಮ ಬೆಳೆಯೂ ಬಂದಿದ್ದು, ಇನ್ನೊಂದು ವರ್ಷದಲ್ಲಿ ಫಸಲು ಕೈಗೆ ಬರುತ್ತದೆಂದು ಕನಸು ಕಟ್ಟಿಕೊಂಡಿದ್ದೆವು. ಆದರೆ ಬೆಳವಣಿಗೆ ಸಹಿಸದೆ ದ್ವೇಷದಿಂದ ರಾತೋರಾತ್ರಿ ಅಡಿಕೆಗೆ ಬೆಂಕಿಯಿಟ್ಟಿದ್ದಾರೆ. ಅಲ್ಲದೆ ಡ್ರಿಪ್ ವೈರ್ ಗಳನ್ನು ಸಹ ಕಿತ್ತು ಬಿಸಾಡಿದ್ದು ಸುಮಾರು 400 ಕ್ಕೂ ಹೆಚ್ಚು ಗಿಡಗಳು ಬೆಂಕಿಗಾಹುತಿ ಆಗಿರುವಂತಹ ಘಟನೆ ನಡೆದಿದೆ.

ಸಾಲ ತೀರಿಸುವುದು ಹೇಗೆಂಬ ಚಿಂತೆ ಶುರುವಾಗಿದ್ದು ಪರಿಸ್ಥಿತಿ ಹೇಳತೀರದು ಎಂದು ಅಳಲು ತೋಡಿಕೊಳ್ಳುತ್ತಾರೆ. ಇನ್ನು ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಪೊಲೀಸರು ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಪೊಲೀಸರ ದಾಳಿ: ಅಕ್ರಮವಾಗಿ ಸಂಗ್ರಹಿಸಿದ್ದ 3 ಕೋಟಿ ಮೌಲ್ಯದ ಆನೆದಂತ, ಶ್ರೀಗಂಧ, ರಕ್ತಚಂದನ ವಶ; ಇಬ್ಬರು ಅರೆಸ್ಟ್​

ದ್ವೇಷದಿಂದಲೇ ಕಿಡಿಗೇಡಿಗಳು ಅಡಿಕೆ ಬೆಳೆಗೆ ಬೆಂಕಿಯಿಟ್ಟು ಎಸ್ಕೇಪ್ ಆಗಿದ್ದಾರೆ. ಹೀಗಾಗಿ, ಸರ್ಕಾರ ಕೂಡಲೇ ನೊಂದ ರೈತ ಕುಟುಂಬಕ್ಕೆ ಸೂಕ್ತ ಪರಿಹಾರ ಹಣ ನೀಡಬೇಕು. ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂಬುದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಆರು ಕಳ್ಳರನ್ನು ಖೆಡ್ಡಾಕ್ಕೆ ಕೆಡವಿದ ಚಿತ್ರಹಳ್ಳಿ ಪೊಲೀಸರು; ಶ್ರೀಗಂಧ, ರಕ್ತ ಚಂದನ, ಆನೆ ದಂತ, ಪೆಂಗೋಲಿನ್ ಚಿಪ್ಪುಗಳು ವಶಕ್ಕೆ

ರೈತರು ಬೆವರು ಸುರಿಸಿ ಬೆಳೆಸಿದ್ದ ಅಡಿಕೆ ಗಿಡಗಳಿಗೆ ದುಷ್ಕರ್ಮಿಗಳು ಬೆಂಕಿಯಿಟ್ಟು ಎಸ್ಕೇಪ್​ ಆಗಿದ್ದಾರೆ. ಅಲ್ಲದೆ ಹನಿನೀರಾವರಿಯ ಪೈಪ್ ಲೈನ್ ಸಹ ಕಿತ್ತು ಬಿಸಾಡಿದ್ದು ನೋಡಿದ್ರೆ ಇದು ದ್ವೇಷದ ಜ್ವಾಲೆ ಎಂಬುದು ಗೊತ್ತಾಗುತ್ತದೆ. ಹೀಗಾಗಿ, ಪೊಲೀಸ್ ಇಲಾಖೆ ಪ್ರಕರಣದ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಬೇಕಿದೆ.

ಜಿಲ್ಲಾ ಉಸ್ತುವಾರಿ ಸಚಿವರೂ ಹಾಗೂ ಹಿರಿಯೂರು ಶಾಸಕರೂ ಆಗಿರುವ ಡಿ.ಸುಧಾಕರ್ ಈ ಬಗ್ಗೆ ಗಮನಹರಿಸಿ ರೈತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:58 pm, Mon, 13 November 23

‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?