AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವೇಷಕ್ಕೆ ಬಲಿಯಾದ ಅಡಿಕೆ ಗಿಡಗಳು: ಹಗಲಿರುಳು ಬೆಳೆಸಿದ್ದ ಬೆಳೆ ಬೆಂಕಿಗಾಹುತಿ: ಕಂಗಾಲಾದ ರೈತ

ಬೆಳವಣಿಗೆ ಸಹಿಸದೆ ದ್ವೇಷದಿಂದ ರಾತೋರಾತ್ರಿ 400 ಕ್ಕೂ ಹೆಚ್ಚು ಅಡಿಕೆ ಗಿಡಗಳಿಗೆ ಬೆಂಕಿ ಹಚ್ಚಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಸಲಬೊಮ್ಮನಹಳ್ಳಿ ಗ್ರಾಮದ ನಡೆದಿದೆ. 15 ಲಕ್ಷ ರೂ. ಸಾಲ ಮಾಡಿ ಎರಡು ಎಕರೆಯಲ್ಲಿ 1800 ಅಡಿಕೆ ಗಿಡ ನೆಟ್ಟು ಬೆಳೆದಿದ್ದ ರೈತರು ಇದೀಗ ಕಂಗಾಲಾಗಿದ್ದಾರೆ.

ದ್ವೇಷಕ್ಕೆ ಬಲಿಯಾದ ಅಡಿಕೆ ಗಿಡಗಳು: ಹಗಲಿರುಳು ಬೆಳೆಸಿದ್ದ ಬೆಳೆ ಬೆಂಕಿಗಾಹುತಿ: ಕಂಗಾಲಾದ ರೈತ
ಬೆಂಕಿಗಾಹುತಿಯಾದ ಅಡಿಕೆ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Nov 13, 2023 | 8:58 PM

Share

ಚಿತ್ರದುರ್ಗ, ನವೆಂಬರ್​​​ 13: ಜಿಲ್ಲೆಯ ಹಿರಿಯೂರು ತಾಲೂಕಿನ ಸಲಬೊಮ್ಮನಹಳ್ಳಿ ಗ್ರಾಮದ ಸರೋಜಮ್ಮ ಮತ್ತು ತಿಪ್ಪೇಸ್ವಾಮಿ ದಂಪತಿ ಕೃಷಿಯನ್ನೇ ಬದುಕಾಗಿಸಿಕೊಂಡಿದ್ದರು. ಎರಡು ಎಕರೆ ಜಮೀನಿನಲ್ಲಿ ಕಳೆದೆರಡು ವರ್ಷದಿಂದ ಅಡಿಕೆ (Areca Nut) ಬೆಳೆ ಬೆಳೆಸಲು ಶ್ರಮಿಸುತ್ತಿದ್ದರು. 15 ಲಕ್ಷ ರೂ. ಸಾಲ ಮಾಡಿ ಎರಡು ಎಕರೆಯಲ್ಲಿ 1800 ಅಡಿಕೆ ಗಿಡ ನೆಟ್ಟು ಬೆಳೆದಿದ್ದರು. ಉತ್ತಮ ಬೆಳೆಯೂ ಬಂದಿದ್ದು, ಇನ್ನೊಂದು ವರ್ಷದಲ್ಲಿ ಫಸಲು ಕೈಗೆ ಬರುತ್ತದೆಂದು ಕನಸು ಕಟ್ಟಿಕೊಂಡಿದ್ದೆವು. ಆದರೆ ಬೆಳವಣಿಗೆ ಸಹಿಸದೆ ದ್ವೇಷದಿಂದ ರಾತೋರಾತ್ರಿ ಅಡಿಕೆಗೆ ಬೆಂಕಿಯಿಟ್ಟಿದ್ದಾರೆ. ಅಲ್ಲದೆ ಡ್ರಿಪ್ ವೈರ್ ಗಳನ್ನು ಸಹ ಕಿತ್ತು ಬಿಸಾಡಿದ್ದು ಸುಮಾರು 400 ಕ್ಕೂ ಹೆಚ್ಚು ಗಿಡಗಳು ಬೆಂಕಿಗಾಹುತಿ ಆಗಿರುವಂತಹ ಘಟನೆ ನಡೆದಿದೆ.

ಸಾಲ ತೀರಿಸುವುದು ಹೇಗೆಂಬ ಚಿಂತೆ ಶುರುವಾಗಿದ್ದು ಪರಿಸ್ಥಿತಿ ಹೇಳತೀರದು ಎಂದು ಅಳಲು ತೋಡಿಕೊಳ್ಳುತ್ತಾರೆ. ಇನ್ನು ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಪೊಲೀಸರು ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಪೊಲೀಸರ ದಾಳಿ: ಅಕ್ರಮವಾಗಿ ಸಂಗ್ರಹಿಸಿದ್ದ 3 ಕೋಟಿ ಮೌಲ್ಯದ ಆನೆದಂತ, ಶ್ರೀಗಂಧ, ರಕ್ತಚಂದನ ವಶ; ಇಬ್ಬರು ಅರೆಸ್ಟ್​

ದ್ವೇಷದಿಂದಲೇ ಕಿಡಿಗೇಡಿಗಳು ಅಡಿಕೆ ಬೆಳೆಗೆ ಬೆಂಕಿಯಿಟ್ಟು ಎಸ್ಕೇಪ್ ಆಗಿದ್ದಾರೆ. ಹೀಗಾಗಿ, ಸರ್ಕಾರ ಕೂಡಲೇ ನೊಂದ ರೈತ ಕುಟುಂಬಕ್ಕೆ ಸೂಕ್ತ ಪರಿಹಾರ ಹಣ ನೀಡಬೇಕು. ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂಬುದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಆರು ಕಳ್ಳರನ್ನು ಖೆಡ್ಡಾಕ್ಕೆ ಕೆಡವಿದ ಚಿತ್ರಹಳ್ಳಿ ಪೊಲೀಸರು; ಶ್ರೀಗಂಧ, ರಕ್ತ ಚಂದನ, ಆನೆ ದಂತ, ಪೆಂಗೋಲಿನ್ ಚಿಪ್ಪುಗಳು ವಶಕ್ಕೆ

ರೈತರು ಬೆವರು ಸುರಿಸಿ ಬೆಳೆಸಿದ್ದ ಅಡಿಕೆ ಗಿಡಗಳಿಗೆ ದುಷ್ಕರ್ಮಿಗಳು ಬೆಂಕಿಯಿಟ್ಟು ಎಸ್ಕೇಪ್​ ಆಗಿದ್ದಾರೆ. ಅಲ್ಲದೆ ಹನಿನೀರಾವರಿಯ ಪೈಪ್ ಲೈನ್ ಸಹ ಕಿತ್ತು ಬಿಸಾಡಿದ್ದು ನೋಡಿದ್ರೆ ಇದು ದ್ವೇಷದ ಜ್ವಾಲೆ ಎಂಬುದು ಗೊತ್ತಾಗುತ್ತದೆ. ಹೀಗಾಗಿ, ಪೊಲೀಸ್ ಇಲಾಖೆ ಪ್ರಕರಣದ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಬೇಕಿದೆ.

ಜಿಲ್ಲಾ ಉಸ್ತುವಾರಿ ಸಚಿವರೂ ಹಾಗೂ ಹಿರಿಯೂರು ಶಾಸಕರೂ ಆಗಿರುವ ಡಿ.ಸುಧಾಕರ್ ಈ ಬಗ್ಗೆ ಗಮನಹರಿಸಿ ರೈತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:58 pm, Mon, 13 November 23

Follow Us
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ